Homeಮುಖಪುಟಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

ಮಹಿಳೆಯರಿಗೆ ಉಚಿತ ಪ್ರಯಾಣ, ಸರ್ಕಾರಿ ಶಾಲೆಗಳ ಅಭಿವೃದ್ದಿ: ದೆಹಲಿಯಲ್ಲಿ ಆಪ್-ಬಿಜೆಪಿ ಜಿದ್ದಾಜಿದ್ದಿ

- Advertisement -
- Advertisement -

ಸರ್ಕಾರಿ ಶಾಲೆಗಳ ಅಭಿವೃದ್ದಿಯಲ್ಲಿ ಸಾಕಷ್ಟು ಸಾಧನೆಗಳನ್ನು ಮಾಡಿ ಹೆಸರು ಗಳಿಸಿರುವ ದೆಹಲಿಯ ಆಪ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷ ಅಪಸ್ವರ ಎತ್ತಿದೆ. ಇದರ ಜೊತೆಗೆ ಮೆಟ್ರೊ ಮತ್ತು ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಏಳು ತಿಂಗಳ ನಂತರ ವಿಧಾನ ಸಭಾ ಚುನಾವಣೆಯು ಸಹ ಇರುವುದರಿಂದ ಹಲವಾರು ವಿಚಾರಕ್ಕೆ ಇವೆರಡು ಪಕ್ಷಗಳ ನಡುಗೆ ಜಿದ್ದಾಜಿದ್ದಿ, ಮಾತಿನ ಚಕಮಕಿ ನಡೆಯುತ್ತಿದೆ.

ಇದು ಆರಂಭವಾಗಿದ್ದು ಹೀಗೆ. ಕಳೆದ ವಾರ ಬಿಜೆಪಿಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಜೆ.ಪಿ ನಡ್ಡಾ “ದೆಹಲಿ ಸರ್ಕಾರ ಏನು ಕೆಲಸ ಮಾಡುತ್ತಿಲ್ಲ” ಎಂದು ಹೇಳಿಕೆ ನೀಡಿದರು. ಅವರ ಬೆನ್ನಲ್ಲೇ ಪೂರ್ವ ದೆಹಲಿಯ ಸಂಸದರಾದ ವಿಜಯ್ ಗೋಯಲ್ “ಕೇವಲ ಒಂದು ಶಾಲೆಯನ್ನು ಮಾತ್ರ ಚೆನ್ನಾಗಿ ಮಾಡಿ ನಿಮ್ಮನ್ನು, ನಿಮ್ಮ ದೆಹಲಿಯ ಶಿಕ್ಷಣ ನೀತಿಯನ್ನು ಹೊಗಳಿಕೊಳ್ಳಬೇಡಿ, ನಮ್ಮೊಡನೆ ಜೊತೆಯಾಗಿ ಬನ್ನಿ ಮುಸ್ತಾಫಬಾದ್‍ನಲ್ಲಿರುವ ಶಾಲೆಗಳ ಪರಿಸ್ಥಿತಿಯನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಈ ಆರೋಪಗಳಿಕೆ ಕೂಡಲೇ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ, ಬಿಜೆಪಿ ಆಳ್ವಿಕೆಯ ರಾಜ್ಯಗಳ ಅತ್ಯುತ್ತಮ ಶಾಲೆಗಳು ಮತ್ತು ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿನ ಅತ್ಯುತ್ತಮ ಶಾಲೆಗಳಿಗೂ ಹೋಲಿಸಿ ನೋಡೋಣ ಬನ್ನಿ ಎಂದು ಮರುಸವಾಲು ಹಾಕಿದ್ದಾರೆ.

ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿಯಲ್ಲಿ 2018-2019ರ ಸಾಲಿನಲ್ಲಿ ಆಪ್ ಸರ್ಕಾರವು 13,997 ಕೋಟಿ ರೂಗಳನ್ನು ಶಿಕ್ಷಣಕ್ಕೆ ಮೀಸಲಿಟ್ಟಿದೆ. ಅಂದರೆ ರಾಜ್ಯ ಬಜೆಟ್‍ನ ಶೇ.26% ರಷ್ಟು. ಸಂತಸದಾಯಕ ಕಲಿಕೆ ಮತ್ತು ಪಠ್ಯಕ್ರಮದ ಜೊತೆಗೆ ಅತ್ಯುತ್ತಮ ಕಲಿಕಾ ವಾತಾವರಣವನ್ನು ದೆಹಲಿ ಸರ್ಕಾರ ನಿರ್ಮಿಸಿದೆ. ಶಾಲೆಯ ಹೊರೆಗೆ ಅತ್ಯಾಧುನಿಕ ಆಟದ ಮೈದಾನ, ಈಜುಕೊಳ, ಹಾಕಿ, ಪುಟ್ಬಾಲ್ ಗ್ರೌಂಡ್, ಶಾಲೆಯ ಒಳಗೆ ಫ್ಯಾನ್‍ಗಳು, ಕೂಲರ್‍ಗಳು, 11000 ಹೊಸ ಕೊಠಡಿಗಳು, ಹೈ ಕ್ಲಾಸ್ ಸಭಾಂಗಣ, ಶಾಲೆಯ ಮೇಲ್ಛಾವಣಿ, ಮಹಡಿಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಇತ್ಯಾದಿ ಮಾದರಿ ಕೆಲಸಗಳು ನಡೆದಿವೆ.

ಕೇವಲ ಮೂಲಭೂತ ಸೌಲಭ್ಯಗಳಲ್ಲದೇ ಶಿಕ್ಷಣದ ಗುಣಮಟ್ಟದಲ್ಲಿಯೂ ಮಹತ್ವದ ಬದಲಾವಣೆಗಳು ಬಂದಿದ್ದು ಈ ವರ್ಷದಲ್ಲಿ ಎಸ್‍ಎಸ್‍ಎಸ್‍ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ದೆಹಲಿಯ ವಿದ್ಯಾರ್ಥಿಗಳು ಒಂದು ದಶಕದಲ್ಲಿಯೇ ಅತ್ಯಂತ ಗಮನಾರ್ಹ ಸಾಧನೆ ಮಾಡಿದ್ದರೆ ಎಂಬುದು ದೆಹಲಿ ಸರ್ಕಾರದ ವಾದ.

ಬಿಜೆಪಿಯ ಸಂಸದ ಮನೋಜ್ ತಿವಾರಿಯವರು ದೆಹಲಿ ಸರ್ಕಾರಿ ಶಾಲೆಗಳ 11000 ಸಾವಿರ ಕೊಠಡಿಗಳ ನಿರ್ಮಾಣ ಕಾರ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ, ಸುಮಾರು 2000 ಕೋಟಿ ರೂಗಳಷ್ಟು ಅವ್ಯವಹಾರ ನಡೆದಿದೆ ಎಂದು ಮತ್ತೊಂದು ಆರೋಪ ಮಾಡಿದ್ದು ನನ್ನ ಬಳಿ ಆರ್.ಟಿ.ಐ ಮೂಲಕ ಪಡೆದ ಮಾಹಿತಿ ಇದೆ ಎಂದಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ರವರು ಸುಳ್ಳು ಹೇಳುವುದನ್ನು ನಿಲ್ಲಿಸಿ ಮತ್ತು ಧೈರ್ಯವಿದ್ದರೆ ಅಂತಹ ಅವ್ಯವಹಾರ ಮಾಡಿರುವವರನ್ನು ಬಂಧಿಸಿ ಎಂದು ತಿರುಗೇಟು ನೀಡಿದ್ದಾರೆ.

ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೂ ಕುತ್ತು
ಇನ್ನು ದೆಹಲಿ ಸರ್ಕಾರದ ಮಹತ್ವದ ಯೋಜನೆಯಾದ ದೆಹಲಿ ಬಸ್ ಮತ್ತು ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವೂ ವಿವಾದಕ್ಕೀಡಾಗಿದೆ. ಈ ಯೋಜನೆಯ ಮೂಲಕ ಮಹಿಳಾ ಸುರಕ್ಷತೆ, ಸಾರ್ವಜನಿಕ ವಾಹನಗಳ ಬಳಕೆಗೆ ಉತ್ತೇಜನ ಮತ್ತು ಮಾಲಿನ್ಯ ನಿಯಂತ್ರಣ ಇಷ್ಟನ್ನು ಸಾಧಿಸಬಹುದೆನ್ನುವುದು ದೆಹಲಿ ಸರ್ಕಾರದ ಆಶಯವಾಗಿದೆ. ಬಹಳ ಪ್ರಚಾರ ಪಡೆದ ಈ ಕಾರ್ಯಕ್ರಮಕ್ಕೆ ದೆಹಲಿ ಮೆಟ್ರೋದ ಮಾಜಿ ಅಧ್ಯಕ್ಷ ಈ ಶ್ರೀಧರನ್ ರವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗಳಿಗೆ ಪತ್ರ ಬರೆದು ಸುದ್ದಿ ಮಾಡಿದ್ದರು.

ಈಗ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಪುರಿಯವರು ಲೋಕಸಭೆಯಲ್ಲಿ ಮಾತನಾಡುತ್ತಾ ಉಚಿತ ಸೇವೆಯ ಕುರಿತು ನಮಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದಿದ್ದಲ್ಲದೆ, ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಹೀಗೆಲ್ಲಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ದೆಹಲಿ ಮೆಟ್ರೊ ನಿಗಮ ಇದಕ್ಕೆ ಅವಕಾಶ ಸಹ ಕೊಡುವುದಿಲ್ಲ ಎಂದೂ ಅವರು ಹೇಳಿದ್ದಾರೆ. ಕಳೆದ ವರ್ಷವೂ ಸಹ ದೆಹಲಿಯ ಅನಧಿಕೃತ ಕಾಲೋನಿಗಳನ್ನು ಅಧಿಕೃತಗೊಳಿಸುವ ವಿಚಾರದಲ್ಲಿ ಹರ್ದೀಪ್ ಮತ್ತು ದೆಹಲಿ ಸರ್ಕಾರದ ನಡುವೆ ಸಾಕಷ್ಟು ತಿಕ್ಕಾಟ ನಡೆದಿತ್ತು.

ಒಟ್ಟಿನಲ್ಲಿ ಏಳು ಲೋಕಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿರುವ ಬಿಜೆಪಿ ಮತ್ತು 70ರಲ್ಲಿ 67 ವಿಧಾನ ಸಭಾ ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಆಪ್ ನಡುವೆ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ಅಸೆಂಬ್ಲಿ ಚುನಾವಣೆಯ ಮೇಲಿದೆ ಕಣ್ಣಿದೆ. ಅದಕ್ಕಾಗಿ ಈ ಜಿದ್ದಾಜಿದ್ದಿಗೆ ಬಿಜೆಪಿ ಚಾಲನೆ ಕೊಟ್ಟರೆ ಆಪ್ ತಿರುಗೇಟು ನೀಡಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...