Homeಮುಖಪುಟಮೊಬೈಲ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ತೀವ್ರ ವಿರೋಧದ ಬೆನ್ನಲ್ಲೇ ಆದೇಶ ವಾಪಸ್

- Advertisement -
- Advertisement -

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ.

ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ತನ್ನ ಆದೇಶವನ್ನು ವಾಪಸ್ ತೆಗೆದುಕೊಂಡಿದೆ.

ಆದರೆ, ಸಂಚಾರ್ ಸಾಥಿಗೆ ಹೆಚ್ಚುತ್ತಿರುವ ಸ್ವೀಕೃತಿ ಪರಿಗಣಿಸಿ, ಮೊಬೈಲ್ ತಯಾರಕರಿಗೆ ಪ್ರಿ ಇನ್‌ಸ್ಟಾಲ್ ಕಡ್ಡಾಯಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಎಲ್ಲಾ ನಾಗರಿಕರಿಗೆ ಸೈಬರ್ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರ ಎಲ್ಲಾ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್ ಪ್ರಿ- ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಈ ಅಪ್ಲಿಕೇಶನ್ ಸುರಕ್ಷಿತವಾಗಿದೆ ಮತ್ತು ಸೈಬರ್ ಜಗತ್ತಿನ ದುಷ್ಟ ಶಕ್ತಿಗಳಿಂದ ನಾಗರಿಕರಿಗೆ ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಕೇಂದ್ರ ಸಂಪರ್ಕ ಸಚಿವಾಲಯ ಪ್ರಕಟಣೆಯಲ್ಲಿ ಹೇಳಿದೆ.

ಈ ಅಪ್ಲಿಕೇಶನ್ ನಾಗರಿಕರ ಭಾಗವಹಿಸುವಿಕೆಯನ್ನು (ಜನ್‌ ಭಾಗಿದಾರಿ) ಹೆಚ್ಚಿಸಲು ಸಹಾಯ ಮಾಡುತ್ತದೆ.
ದುಷ್ಕೃತ್ಯಗಳಲ್ಲಿ ತೊಡಗಿರುವವರ ಬಗ್ಗೆ ಅಥವಾ ತಪ್ಪು ಕಾರ್ಯಗಳ ಬಗ್ಗೆ ಜನರು ಸರ್ಕಾರಕ್ಕೆ ಸುಲಭವಾಗಿ ಮಾಹಿತಿ ನೀಡಲು ಇದು ಉಪಯೋಗವಾಗುತ್ತದೆ. ಬಳಕೆದಾರರ ಸುರಕ್ಷತೆಯನ್ನು ಕಾಪಾಡುವುದು ಹೊರತು, ಬೇರೆ ಯಾವುದೇ ಉದ್ದೇಶ ಈ ಆ್ಯಪ್‌ ಹಿಂದೆ ಇಲ್ಲ ಎಂದಿದೆ.

ಇಲ್ಲಿಯವರೆಗೆ 1.4 ಕೋಟಿ ಬಳಕೆದಾರರು ಈ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ ಮತ್ತು ದಿನಕ್ಕೆ 2000 ವಂಚನೆ ಘಟನೆಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಬಳಕೆದಾರರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವ ಆದೇಶದ ಮೂಲಕ ಅದರ ಬಳಕೆಯ ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಕಡಿಮೆ ಅರಿವುಳ್ಳ ನಾಗರಿಕರಿಗೆ ಅಪ್ಲಿಕೇಶನ್ ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶವಿತ್ತು. ಕಳೆದ ಒಂದು ದಿನದಲ್ಲಿ, 6 ಲಕ್ಷ ನಾಗರಿಕರು ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಅಪ್ಲಿಕೇಶನ್ ಬಳಕೆ 10 ಪಟ್ಟು ಹೆಚ್ಚಾಗಿದೆ. ಇದು ಸರ್ಕಾರ ತಮಗೆ ಒದಗಿಸಿದ ಅಪ್ಲಿಕೇಶನ್‌ನಲ್ಲಿ ನಾಗರಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಂಬಿಕೆಯ ದೃಢೀಕರಣವಾಗಿದೆ ಎಂದು ಸಂಪರ್ಕ ಇಲಾಖೆ ಹೇಳಿದೆ.

ಸಂಚಾರ್ ಸಾಥಿ ಕಡ್ಡಾಯದ ವಿರುದ್ದ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನೆಲೆ, ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ ಸಿಂಧಿಯಾ ಬುಧವಾರ ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ್ದರು. “ಸಂಚಾರ್ ಸಾಥಿ’ ಆ್ಯಪ್ ಮೂಲಕ ಗೂಡಾಚರ್ಯೆ ನಡೆಯಲು ಸಾಧ್ಯವಿಲ್ಲ. ಜನರ ಪ್ರತಿಕ್ರಿಯೆಗಳನ್ನು ಅನುಸರಿಸಿ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್‌ಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ” ಎಂದು ಹೇಳಿದ್ದರು.

ಸಂಚಾರ್ ಸಾಥಿ ಆ್ಯಪ್‌ನಿಂದ ಬೇಹುಗಾರಿಕೆ ಕುರಿತು ಕಳವಳ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಚಿವ ಸಿಂಧಿಯಾ, “ಸಂಚಾರ್ ಸಾಥಿ ಆ್ಯಪ್‌ನಿಂದ ಯಾವುದೇ ಗೂಢಚಾರಿಕೆ ಸಾಧ್ಯವಿಲ್ಲ, ಯಾವುದೇ ಗೂಢಚಾರಿಕೆ ಸಂಭವಿಸುವುದಿಲ್ಲ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...