Homeಮುಖಪುಟಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

ಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

- Advertisement -
- Advertisement -

ವಿಕಿಪೀಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ‘ಪಕ್ಷಪಾತ ಮತ್ತು ಅಸ್ಪಷ್ಟತೆ’ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ವಿಕಿಪೀಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು? ಎಂದು ವಿವರಣೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ನೋಟಿಸ್‌ನಲ್ಲಿ ವಿಕಿಪೀಡಿಯಾ ವಿರುದ್ದದ ಹಲವು ದೂರುಗಳನ್ನು ಉಲ್ಲೇಖಿಸಿದೆ. ವಿಕಿಪೀಡಿಯಾದ ಸಂಪಾದಕೀಯ ನಿಯಂತ್ರಣವು ಒಂದು ಸಣ್ಣ ಗುಂಪಿನ ಕೈಯಲ್ಲಿದೆ ಎಂದು ತೋರುತ್ತದೆ. ಇದು ತಟಸ್ಥ, ಸ್ವಯಂ ಸೇವಕ ಆಧಾರಿತ ಸಂಪನ್ಮೂಲ ಎಂಬ ವಿಕಿಪೀಡಿಯಾದ ಹಕ್ಕನ್ನು ಪ್ರಶ್ನಿಸುತ್ತದೆ ಎಂದು ಹೇಳಿದೆ.

ವಿಕಿಪೀಡಿಯಾ ಮತ್ತು ಎಎನ್‌ಐನ ಪ್ರಕರಣದ ವಿಚಾರಣೆ ವೇಳೆ ವಿಕಿಪೀಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ನವೀನ್ ಚಾವ್ಲಾ ಅವರು “ವಿಕಿಪೀಡಿಯಾ ಮೂಲತಃ ಭಾರತದ್ದು ಆಗಿರದೇ ಇರಬಹುದು. ಆದರೆ, ಭಾರತದಲ್ಲಿ ಕಾರ್ಯನಿರ್ವಹಿಸುವಾಗ ಇಲ್ಲಿನ ಕಾನೂನು ಪಾಲಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ. ನಿಮ್ಮ ಕಾರ್ಯಾಚರಣೆಯನ್ನು ಭಾರತದಲ್ಲಿ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು.

ವಿಕಿಪೀಡಿಯ ತನ್ನನ್ನು ತಾನು ಉಚಿತ ಆನ್‌ಲೈನ್ ವಿಶ್ವಕೋಶವಾಗಿ ಪ್ರಚಾರ ಮಾಡುತ್ತದೆ. ಇದು ಬಳಕೆದಾರರಿಗೆ ಯಾವುದೇ ವಿಷಯಗಳ ಮೇಲೆ ಪುಟಗಳನ್ನು ರಚಿಸಲು ಮತ್ತು ಸಂಪಾದಿಸಲು ಅನುಮತಿಸುತ್ತದೆ. ಪ್ರಸ್ತುತ ಸುದ್ದಿ ಸಂಸ್ಥೆ ಎಎನ್‌ಐ ಕುರಿತು ಆಪಾದಿತ ಮಾನನಷ್ಟ ಮತ್ತು ತಪ್ಪಾದ ಮಾಹಿತಿಯನ್ನು ಪ್ರಕಟಿಸಿದ ಆರೋಪದಲ್ಲಿ ಭಾರತದಲ್ಲಿ ವಿಕಿಪೀಡಿಯಾಗೆ ಕಾನೂನು ಸವಾಲು ಎದುರಾಗಿದೆ.

ವಿಕಿಪೀಡಿಯಾ ಪುಟದಲ್ಲಿ ಎಎನ್‌ಐ ಸುದ್ದಿ ಸಂಸ್ಥೆಯನ್ನು “ಕೇಂದ್ರ ಸರ್ಕಾರದ ಪ್ರಚಾರ ಸಾಧನ” ಎಂದು ಉಲ್ಲೇಖಿಸಿರುವ ಆರೋಪವಿದೆ. ಈ ಕಾರಣಕ್ಕೆ ವಿಕಿಪೀಡಿಯಾ ವಿರುದ್ದ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿದೆ. ಈ ಪ್ರಕರಣದಲ್ಲಿ ಮಾಹಿತಿ ಸಂಪಾದಿಸಿ ಮೂವರು ವ್ಯಕ್ತಿಗಳ ಗುರುತನ್ನು ಬಹಿರಂಗಪಡಿಸುವಂತೆ ವಿಕಿಪೀಡಿಯಾಗೆ ನ್ಯಾಯಾಲಯ ಆದೇಶಿಸಿತ್ತು.

ಭಾರತದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರದ ಕಾರಣ ಆದೇಶ ಪಾಲಿಸಲು ಹೆಚ್ಚಿನ ಸಮಯವಕಾಶವನ್ನು ನೀಡುವಂತೆ ವಿಕಿಪೀಡಿಯಾ ನ್ಯಾಯಾಲವನ್ನು ಕೋರಿತ್ತು. ಆದರೆ, ನ್ಯಾಯಮೂರ್ತಿ ಚಾವ್ಲಾ ಅವರು ಮನವಿಯನ್ನು ತಳ್ಳಿ ಹಾಕಿ, ತಕ್ಷಣವೇ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶ ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...