Homeಮುಖಪುಟಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

ಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

- Advertisement -
- Advertisement -

ವಿಕಿಪೀಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ‘ಪಕ್ಷಪಾತ ಮತ್ತು ಅಸ್ಪಷ್ಟತೆ’ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ವಿಕಿಪೀಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು? ಎಂದು ವಿವರಣೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ನೋಟಿಸ್‌ನಲ್ಲಿ ವಿಕಿಪೀಡಿಯಾ ವಿರುದ್ದದ ಹಲವು ದೂರುಗಳನ್ನು ಉಲ್ಲೇಖಿಸಿದೆ. ವಿಕಿಪೀಡಿಯಾದ ಸಂಪಾದಕೀಯ ನಿಯಂತ್ರಣವು ಒಂದು ಸಣ್ಣ ಗುಂಪಿನ ಕೈಯಲ್ಲಿದೆ ಎಂದು ತೋರುತ್ತದೆ. ಇದು ತಟಸ್ಥ, ಸ್ವಯಂ ಸೇವಕ ಆಧಾರಿತ ಸಂಪನ್ಮೂಲ ಎಂಬ ವಿಕಿಪೀಡಿಯಾದ ಹಕ್ಕನ್ನು ಪ್ರಶ್ನಿಸುತ್ತದೆ ಎಂದು ಹೇಳಿದೆ.

ವಿಕಿಪೀಡಿಯಾ ಮತ್ತು ಎಎನ್‌ಐನ ಪ್ರಕರಣದ ವಿಚಾರಣೆ ವೇಳೆ ವಿಕಿಪೀಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ನವೀನ್ ಚಾವ್ಲಾ ಅವರು “ವಿಕಿಪೀಡಿಯಾ ಮೂಲತಃ ಭಾರತದ್ದು ಆಗಿರದೇ ಇರಬಹುದು. ಆದರೆ, ಭಾರತದಲ್ಲಿ ಕಾರ್ಯನಿರ್ವಹಿಸುವಾಗ ಇಲ್ಲಿನ ಕಾನೂನು ಪಾಲಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ. ನಿಮ್ಮ ಕಾರ್ಯಾಚರಣೆಯನ್ನು ಭಾರತದಲ್ಲಿ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು.

ವಿಕಿಪೀಡಿಯ ತನ್ನನ್ನು ತಾನು ಉಚಿತ ಆನ್‌ಲೈನ್ ವಿಶ್ವಕೋಶವಾಗಿ ಪ್ರಚಾರ ಮಾಡುತ್ತದೆ. ಇದು ಬಳಕೆದಾರರಿಗೆ ಯಾವುದೇ ವಿಷಯಗಳ ಮೇಲೆ ಪುಟಗಳನ್ನು ರಚಿಸಲು ಮತ್ತು ಸಂಪಾದಿಸಲು ಅನುಮತಿಸುತ್ತದೆ. ಪ್ರಸ್ತುತ ಸುದ್ದಿ ಸಂಸ್ಥೆ ಎಎನ್‌ಐ ಕುರಿತು ಆಪಾದಿತ ಮಾನನಷ್ಟ ಮತ್ತು ತಪ್ಪಾದ ಮಾಹಿತಿಯನ್ನು ಪ್ರಕಟಿಸಿದ ಆರೋಪದಲ್ಲಿ ಭಾರತದಲ್ಲಿ ವಿಕಿಪೀಡಿಯಾಗೆ ಕಾನೂನು ಸವಾಲು ಎದುರಾಗಿದೆ.

ವಿಕಿಪೀಡಿಯಾ ಪುಟದಲ್ಲಿ ಎಎನ್‌ಐ ಸುದ್ದಿ ಸಂಸ್ಥೆಯನ್ನು “ಕೇಂದ್ರ ಸರ್ಕಾರದ ಪ್ರಚಾರ ಸಾಧನ” ಎಂದು ಉಲ್ಲೇಖಿಸಿರುವ ಆರೋಪವಿದೆ. ಈ ಕಾರಣಕ್ಕೆ ವಿಕಿಪೀಡಿಯಾ ವಿರುದ್ದ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿದೆ. ಈ ಪ್ರಕರಣದಲ್ಲಿ ಮಾಹಿತಿ ಸಂಪಾದಿಸಿ ಮೂವರು ವ್ಯಕ್ತಿಗಳ ಗುರುತನ್ನು ಬಹಿರಂಗಪಡಿಸುವಂತೆ ವಿಕಿಪೀಡಿಯಾಗೆ ನ್ಯಾಯಾಲಯ ಆದೇಶಿಸಿತ್ತು.

ಭಾರತದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರದ ಕಾರಣ ಆದೇಶ ಪಾಲಿಸಲು ಹೆಚ್ಚಿನ ಸಮಯವಕಾಶವನ್ನು ನೀಡುವಂತೆ ವಿಕಿಪೀಡಿಯಾ ನ್ಯಾಯಾಲವನ್ನು ಕೋರಿತ್ತು. ಆದರೆ, ನ್ಯಾಯಮೂರ್ತಿ ಚಾವ್ಲಾ ಅವರು ಮನವಿಯನ್ನು ತಳ್ಳಿ ಹಾಕಿ, ತಕ್ಷಣವೇ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶ ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...