Homeಮುಖಪುಟಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

ಪಕ್ಷಪಾತ, ಅಸ್ಪಷ್ಟತೆ ಆರೋಪ : ವಿಕಿಪೀಡಿಯಾದಿಂದ ವಿವರಣೆ ಕೇಳಿದ ಕೇಂದ್ರ

- Advertisement -
- Advertisement -

ವಿಕಿಪೀಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ‘ಪಕ್ಷಪಾತ ಮತ್ತು ಅಸ್ಪಷ್ಟತೆ’ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಎಎನ್‌ಐ ವರದಿ ಮಾಡಿದೆ.

ವಿಕಿಪೀಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು? ಎಂದು ವಿವರಣೆ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ.

ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯವು ನೋಟಿಸ್‌ನಲ್ಲಿ ವಿಕಿಪೀಡಿಯಾ ವಿರುದ್ದದ ಹಲವು ದೂರುಗಳನ್ನು ಉಲ್ಲೇಖಿಸಿದೆ. ವಿಕಿಪೀಡಿಯಾದ ಸಂಪಾದಕೀಯ ನಿಯಂತ್ರಣವು ಒಂದು ಸಣ್ಣ ಗುಂಪಿನ ಕೈಯಲ್ಲಿದೆ ಎಂದು ತೋರುತ್ತದೆ. ಇದು ತಟಸ್ಥ, ಸ್ವಯಂ ಸೇವಕ ಆಧಾರಿತ ಸಂಪನ್ಮೂಲ ಎಂಬ ವಿಕಿಪೀಡಿಯಾದ ಹಕ್ಕನ್ನು ಪ್ರಶ್ನಿಸುತ್ತದೆ ಎಂದು ಹೇಳಿದೆ.

ವಿಕಿಪೀಡಿಯಾ ಮತ್ತು ಎಎನ್‌ಐನ ಪ್ರಕರಣದ ವಿಚಾರಣೆ ವೇಳೆ ವಿಕಿಪೀಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ನವೀನ್ ಚಾವ್ಲಾ ಅವರು “ವಿಕಿಪೀಡಿಯಾ ಮೂಲತಃ ಭಾರತದ್ದು ಆಗಿರದೇ ಇರಬಹುದು. ಆದರೆ, ಭಾರತದಲ್ಲಿ ಕಾರ್ಯನಿರ್ವಹಿಸುವಾಗ ಇಲ್ಲಿನ ಕಾನೂನು ಪಾಲಿಸಬೇಕು. ಇಲ್ಲದಿದ್ದರೆ, ನಿಮ್ಮ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕಾಗುತ್ತದೆ. ನಿಮ್ಮ ಕಾರ್ಯಾಚರಣೆಯನ್ನು ಭಾರತದಲ್ಲಿ ನಿಷೇಧಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು.

ವಿಕಿಪೀಡಿಯ ತನ್ನನ್ನು ತಾನು ಉಚಿತ ಆನ್‌ಲೈನ್ ವಿಶ್ವಕೋಶವಾಗಿ ಪ್ರಚಾರ ಮಾಡುತ್ತದೆ. ಇದು ಬಳಕೆದಾರರಿಗೆ ಯಾವುದೇ ವಿಷಯಗಳ ಮೇಲೆ ಪುಟಗಳನ್ನು ರಚಿಸಲು ಮತ್ತು ಸಂಪಾದಿಸಲು ಅನುಮತಿಸುತ್ತದೆ. ಪ್ರಸ್ತುತ ಸುದ್ದಿ ಸಂಸ್ಥೆ ಎಎನ್‌ಐ ಕುರಿತು ಆಪಾದಿತ ಮಾನನಷ್ಟ ಮತ್ತು ತಪ್ಪಾದ ಮಾಹಿತಿಯನ್ನು ಪ್ರಕಟಿಸಿದ ಆರೋಪದಲ್ಲಿ ಭಾರತದಲ್ಲಿ ವಿಕಿಪೀಡಿಯಾಗೆ ಕಾನೂನು ಸವಾಲು ಎದುರಾಗಿದೆ.

ವಿಕಿಪೀಡಿಯಾ ಪುಟದಲ್ಲಿ ಎಎನ್‌ಐ ಸುದ್ದಿ ಸಂಸ್ಥೆಯನ್ನು “ಕೇಂದ್ರ ಸರ್ಕಾರದ ಪ್ರಚಾರ ಸಾಧನ” ಎಂದು ಉಲ್ಲೇಖಿಸಿರುವ ಆರೋಪವಿದೆ. ಈ ಕಾರಣಕ್ಕೆ ವಿಕಿಪೀಡಿಯಾ ವಿರುದ್ದ ಎಎನ್‌ಐ ಮಾನನಷ್ಟ ಮೊಕದ್ದಮೆ ಹೂಡಿದೆ. ಈ ಪ್ರಕರಣದಲ್ಲಿ ಮಾಹಿತಿ ಸಂಪಾದಿಸಿ ಮೂವರು ವ್ಯಕ್ತಿಗಳ ಗುರುತನ್ನು ಬಹಿರಂಗಪಡಿಸುವಂತೆ ವಿಕಿಪೀಡಿಯಾಗೆ ನ್ಯಾಯಾಲಯ ಆದೇಶಿಸಿತ್ತು.

ಭಾರತದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರದ ಕಾರಣ ಆದೇಶ ಪಾಲಿಸಲು ಹೆಚ್ಚಿನ ಸಮಯವಕಾಶವನ್ನು ನೀಡುವಂತೆ ವಿಕಿಪೀಡಿಯಾ ನ್ಯಾಯಾಲವನ್ನು ಕೋರಿತ್ತು. ಆದರೆ, ನ್ಯಾಯಮೂರ್ತಿ ಚಾವ್ಲಾ ಅವರು ಮನವಿಯನ್ನು ತಳ್ಳಿ ಹಾಕಿ, ತಕ್ಷಣವೇ ಪ್ರತಿಕ್ರಿಯಿಸಬೇಕು ಎಂದು ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶ ನಿರ್ಲಕ್ಷಿಸುವುದನ್ನು ಮುಂದುವರಿಸಿದರೆ, ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ ಕೂಡ ನೋಟಿಸ್ ಜಾರಿಗೊಳಿಸಿದೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...