Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....