Homeಮುಖಪುಟದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ದಾಖಲೆರಹಿತ ವಲಸಿಗರನ್ನು ಗಡಿಪಾರು ಮಾಡುವವರೆಗೆ ಅವರ ಓಡಾಟವನ್ನು ನಿರ್ಬಂಧಿಸಲು ಬಂಧನ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ಈ ಸಂಬಂಧ, ವಲಸೆ ಮತ್ತು ವಿದೇಶಿಯರ ಆದೇಶ, 2025ರ ಭಾಗವಾಗಿ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಸೆ.1) ಅಧಿಸೂಚನೆ ಹೊರಡಿಸಿದೆ.

ವಲಸೆ ಮತ್ತು ವಿದೇಶಿಯರ ಕಾಯ್ದೆ, 2025ರ ಅಡಿ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾಯ್ದೆಯನ್ನು 2025ರ ಏಪ್ರಿಲ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಇದು 1920ರ ಪಾಸ್‌ಪೋರ್ಟ್ (ಭಾರತಕ್ಕೆ ಪ್ರವೇಶ) ಕಾಯ್ದೆ, 1939ರ ವಿದೇಶಿಯರ ನೋಂದಣಿ ಕಾಯ್ದೆ, 1946 ವಿದೇಶಿಯರ ಕಾಯ್ದೆ ಮತ್ತು ವಲಸೆ ವಾಹಕರ ಹೊಣೆಗಾರಿಕೆ ಕಾಯ್ದೆ, 2000 ಅನ್ನು ಬದಲಾಯಿಸಿದೆ.

ವಿದೇಶಿಗಳನ್ನು ವಿಚಾರಣೆ ನಡೆಸುವ ಮೂಲಕ, ಯಾವುದೇ ವಿಮಾನ ಅಥವಾ ಇತರ ಸಾರಿಗೆ ವಿಧಾನವನ್ನು ಪರಿಶೀಲಿಸುವ ಮೂಲಕ ಮತ್ತು ಯಾವುದೇ ಸ್ಥಳವನ್ನು ಪರಿಶೀಲಿಸುವ ಮೂಲಕ ‘ಕಾಲಕಾಲಕ್ಕೆ’ ಭಾರತದಲ್ಲಿ ಅಕ್ರಮ ವಲಸಿಗರನ್ನು ಪತ್ತೆಹಚ್ಚಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಂದ್ರದ ಆದೇಶದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಲಾಗಿದೆ.

ದಾಖಲೆರಹಿತ ವಲಸಿಗರು ಕಂಡುಬಂದರೆ ಅವರನ್ನು ಬಂಧನ ಕೇಂದ್ರಗಳಲ್ಲಿ ಇಟ್ಟು ಓಡಾಟಕ್ಕೆ ನಿರ್ಬಂಧ ವಿಧಿಸುವಂತೆ ಮತ್ತು ಅವರನ್ನು ಗಡಿಪಾರು ಮಾಡಲು ಅಧಿಕಾರಿಗಳು ‘ಸೂಕ್ತ ಕ್ರಮಗಳನ್ನು’ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಈ ಅಧಿಸೂಚನೆಯೊಂದಿಗೆ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಗೆ ಸಮನ್ಸ್‌ ನೀಡುವ ಮತ್ತು ಅವರು ತನ್ನ ಮುಂದೆ ಹಾಜರಾಗಲು ವಿಫಲವಾದರೆ ಬಂಧನ ವಾರಂಟ್ ಹೊರಡಿಸುವ ಅಧಿಕಾರವನ್ನು ವಿದೇಶಿ ನ್ಯಾಯಮಂಡಳಿಗಳಿಗೆ ನೀಡಿದೆ.

ಕೇಂದ್ರದ ಅಧಿಸೂಚನೆ ದೇಶದಾದ್ಯಂತ ಅನ್ವಯವಾಗುತ್ತಿದ್ದರೂ, ವಿದೇಶಿಯರ ನ್ಯಾಯಮಂಡಳಿಗಳು ಪ್ರಸ್ತುತ ಅಸ್ಸಾಂನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇತರ ರಾಜ್ಯಗಳಲ್ಲಿ, ದಾಖಲೆರಹಿತ ವಲಸಿಗರನ್ನು ನ್ಯಾಯಾಲಯಗಳ ಮುಂದೆ ಹಾಜರುಪಡಿಸಲಾಗುತ್ತದೆ.

ಅಸ್ಸಾಂನಲ್ಲಿರುವ ವಿದೇಶಿಯರ ನ್ಯಾಯಮಂಡಳಿಗಳು ಅರೆ-ನ್ಯಾಯಾಂಗ ಸಂಸ್ಥೆಗಳಾಗಿದ್ದು, ಅವು ವಂಶಾವಳಿ ಮತ್ತು 1971ರ ಅಂತಿಮ ದಿನಾಂಕದ ಆಧಾರದ ಮೇಲೆ ಪೌರತ್ವದ ವಿಷಯಗಳಲ್ಲಿ ತೀರ್ಪು ನೀಡುತ್ತವೆ. ಅವು ಪ್ರಾಥಮಿಕವಾಗಿ 1971ಕ್ಕಿಂತ ಮೊದಲು ಅಸ್ಸಾಂ ಅಥವಾ ಭಾರತದಲ್ಲಿ ತಮ್ಮ ಕುಟುಂಬದ ವಾಸವನ್ನು ಖಚಿತಪಡಿಸಲು ವ್ಯಕ್ತಿಗಳು ಸಲ್ಲಿಸಿದ ದಾಖಲೆಗಳನ್ನು ಅವಲಂಬಿಸಿವೆ.

ಆದರೆ, ಈ ನ್ಯಾಯಮಂಡಳಿಗಳು ಅನಿಯಂತ್ರಿತತೆ ಮತ್ತು ಪಕ್ಷಪಾತದ ಆರೋಪಗಳನ್ನು ಹೊಂದಿವೆ. ಸಣ್ಣ ಕಾಗುಣಿತ ತಪ್ಪುಗಳು, ದಾಖಲೆಗಳ ಕೊರತೆ ಅಥವಾ ನೆನಪಿನ ಕೊರತೆಗಳ ಆಧಾರದ ಮೇಲೆ ಜನರನ್ನು ವಿದೇಶಿಯರೆಂದು ಘೋಷಿಸುತ್ತಿವೆ ಎನ್ನಲಾಗ್ತಿದೆ.

ದೇಶದ ಯಾವುದೇ ನ್ಯಾಯಾಲಯಕ್ಕೆ ಒಬ್ಬರು ವ್ಯಕ್ತಿಯ ಉಪಸ್ಥಿತಿ ಅಗತ್ಯವಿದ್ದರೆ ಅಥವಾ ಅವರು ದೇಶದಿಂದ ಹೊರಹೋಗುವುದು ವಿದೇಶಿ ಸಂಬಂಧದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿದ್ದರೆ ಅಂತವರು ದೇಶ ತೊರೆಯಲು ಅನುಮತಿ ನಿರಾಕರಿಸಬಹುದು ಎಂದು ಸೋಮವಾರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಹೇಳಿದೆ.

ಭಾರತವನ್ನು ತೊರೆಯಲು ಅನುಮತಿ ತಡೆ ಹಿಡಿದ ವ್ಯಕ್ತಿಗಳ ಪಟ್ಟಿಯನ್ನು ವಲಸೆ ಬ್ಯೂರೋ ನಿರ್ವಹಿಸುತ್ತದೆ.

ಖಾಸಗಿ ವಲಯದಲ್ಲಿ ವಿದೇಶಿಯರನ್ನು ನೇಮಿಸಿಕೊಳ್ಳುವ ಮಾರ್ಗಸೂಚಿಗಳನ್ನೂ ಕೂಡ ಗೃಹ ಸಚಿವಾಲಯದ ಆದೇಶ ಪಟ್ಟಿ ಮಾಡಿದೆ. ನಾಗರಿಕ ಪ್ರಾಧಿಕಾರದ ಅನುಮತಿಯಿಲ್ಲದೆ, ಯಾವುದೇ ವಿದೇಶಿಯರೂ ಕೂಡ ‘ಖಾಸಗಿ ವಲಯದ ವಿದ್ಯುತ್, ನೀರು ಪೂರೈಕೆಯಲ್ಲಿ ಅಥವಾ ಪೆಟ್ರೋಲಿಯಂ ವಲಯದಲ್ಲಿ ತೊಡಗಿರುವ ಉದ್ಯಮಗಳಲ್ಲಿ ಉದ್ಯೋಗ ಪಡೆಯಲು ಅವಕಾಶವಿಲ್ಲ ಎಂದು ಹೇಳಿದೆ.

ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ, ಪರಮಾಣು ಶಕ್ತಿ, ಮಾನವ ಹಕ್ಕುಗಳು ಅಥವಾ ಇವುಗಳ ಪರವಾಗಿ ನಿರ್ದಿಷ್ಟಪಡಿಸಿದ ಯಾವುದೇ ವಲಯದಲ್ಲಿ ತೊಡಗಿಸಿಕೊಂಡಿರುವ ಖಾಸಗಿ ವಲಯದ ಯಾವುದೇ ಉದ್ಯಮವು ಕೇಂದ್ರ ಸರ್ಕಾರದ ಪೂರ್ವಾನುಮತಿಯಿಲ್ಲದೆ ಯಾವುದೇ ವಿದೇಶಿಯರನ್ನು ನೇಮಿಸಿಕೊಳ್ಳಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಸ್ಸಾಂನಲ್ಲಿ CAA ಅಡಿಯಲ್ಲಿ ಕೇವಲ ಮೂವರು ವಿದೇಶಿಯರಿಗೆ ಪೌರತ್ವ: ಮುಖ್ಯಮಂತ್ರಿ ಶರ್ಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...