Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...