Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...