Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...