Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...