Homeಮುಖಪುಟಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ...

ಸಂವಿಧಾನದ ಮೂಲ ಆಶಯವನ್ನು ರದ್ದುಗೊಳಿಸಲು ಕೇಂದ್ರ ಬಯಸಿದೆ: ಸುಪ್ರೀಂ ಮುಂದೆ ಕರ್ನಾಟಕ ಸೇರಿ 3 ರಾಜ್ಯಗಳ ಕಳವಳ

- Advertisement -
- Advertisement -

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ ಮೂಲ ತಿರುಳಿನ ರದ್ದತಿಗೆ ಮುಂದಾಗಿದೆ ಎಂದು ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಬುಧವಾರ (ಸೆ.3) ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕುವುದಕ್ಕೆ ಗಡುವು ವಿಧಿಸಬಹುದೇ ಎಂಬ ಕುರಿತು  ಸಂವಿಧಾನದ 143 ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್‌ನ ಸಲಹೆಯನ್ನು ಕೋರಿ ರಾಷ್ಟ್ರಪತಿಯವರು ಮಾಡಿದ್ದ ಶಿಫಾರಸ್ಸು ಸಂಬಂಧ 7ನೇ ದಿನದ ವಿಚಾರಣೆ ಬುಧವಾರ  ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.

ಕರ್ನಾಟಕದ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣಿಯಂ, “ಕೇಂದ್ರ ಸರ್ಕಾರವು ಪರೋಕ್ಷವಾಗಿ ಸಂವಿಧಾನದ ಮೂಲ ಆಶಯವಾದ ‘ಸಂಪುಟ ಸರ್ಕಾರ ಮತ್ತು ಶಾಸಕಾಂಗ’ದ ಜವಾಬ್ದಾರಿಯನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದೆ ಎಂದು ವಾದಿಸಿದ್ದಾರೆ.

ಸಚಿವ ಸಂಪುಟದ ಮೂಲಕ ಸರ್ಕಾರದ ಪ್ರಜಾಪ್ರಭುತ್ವ ರೂಪವು ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ನ್ಯಾಯಾಲಯ ಬೀಳಬಾರದು ಎಂದು ಮನವಿ ಮಾಡಿದ್ದಾರೆ.

“ಸಂವಿಧಾನವು ಜೀವಂತ ದಾಖಲೆಯಾಗಿದೆ. ಅದು ಇತಿಹಾಸದಿಂದ ಹುಟ್ಟಿಕೊಂಡಿದೆ, ಆದರೆ ಭವಿಷ್ಯಕ್ಕೆ ನಿಷ್ಠವಾಗಿದೆ. ನೀವು [ನ್ಯಾಯಾಧೀಶರು] ಭವಿಷ್ಯ, ಏಕೆಂದರೆ ನೀವು ಅದನ್ನು ಅರ್ಥೈಸುತ್ತೀರಿ. ರಾಜ್ಯಪಾಲರು ಸಂವಿಧಾನದ ಕಾರ್ಯನಿರ್ವಹಣೆಗೆ ಅಡ್ಡಿಯಾಗುವ ಬಲೆಗೆ ಬೀಳಬಾರದು. ಆದ್ದರಿಂದ, ನೀವು ಏನನ್ನಾದರೂ ಹೇಳಬೇಕಾಗುತ್ತದೆ. ಕಾಲಮಿತಿಯನ್ನು ನೀಡಬೇಡಿ, ಆದರೆ, ಅದು (ಮಸೂದೆ) ಮತ್ತೊಮ್ಮೆ ಅಂಗೀಕರಿಸಲ್ಪಟ್ಟರೆ ತಡೆಹಿಡಿಯಲು ರಾಜ್ಯಪಾಲರಿಗೆ ಅವಕಾಶವಿಲ್ಲ ಎಂದು ನೀವು ಹೇಳಬೇಕು” ಎಂದು ಕಪಿಲ್ ಸಿಬಲ್ ಕೋರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಪಿ.ಎಸ್. ನರಸಿಂಹ ಹಾಗೂ ಅತುಲ್ ಎಸ್. ಚಂದೂರ್ಕರ್ ಅವರ ಸಂವಿಧಾನ ಪೀಠದ ಮುಂದೆ ಈ ವಾದಗಳನ್ನು ಮಂಡಿಸಲಾಗಿದೆ.

ರಾಷ್ಟ್ರಪತಿಗಳ ಶಿಫಾರಸ್ಸನ್ನು ವಜಾಗೊಳಿಸುವಂತೆ ಕೋರಿ ಸಿಬಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ವಿಧಾನಸಭೆ ಅಂಗೀಕರಿಸಿದ ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ರಾಜ್ಯಪಾಲರು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

“ಸ್ವಾತಂತ್ರ್ಯದ ನಂತರ, ಸಂಸತ್ತು ಅಂಗೀಕರಿಸಿದ ಮಸೂದೆಯು ಜನರ ಇಚ್ಛೆಯಾಗಿರುವುದರಿಂದ ರಾಷ್ಟ್ರಪತಿಗಳು ತಡೆಹಿಡಿದ ಯಾವುದೇ ಉದಾಹರಣೆ ಇಲ್ಲ. ಮಸೂದೆಯ ಶಾಸಕಾಂಗ ಸಾಮರ್ಥ್ಯವನ್ನು ನ್ಯಾಯಾಲಯಗಳಲ್ಲಿ ಪರೀಕ್ಷಿಸಬೇಕಾಗುತ್ತದೆ” ಎಂದಿದ್ದಾರೆ.

ರಾಜ್ಯಪಾಲರು ಮಸೂದೆಯ ಸಾಂವಿಧಾನಿಕತೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂಬ ಸಿಬಲ್ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, “ಕೇಂದ್ರ ಶಾಸನದ ದೃಷ್ಟಿಯಿಂದ ವ್ಯತಿರಿಕ್ತವಾಗಿದ್ದರೆ ರಾಜ್ಯಪಾಲರು ತಡೆಹಿಡಿಯಬಹುದೇ?” ಎಂದು ಕೇಳಿದೆ.

ಇದಕ್ಕೆ ಉತ್ತರಿಸಿದ ಸಿಬಲ್, “ಅದು ಅಪರೂಪದಲ್ಲೇ ಅಪರೂಪದ ಪ್ರಕರಣ” ಎಂದಿದ್ದಾರೆ. ನಾಗರಿಕರು ಅಥವಾ ಬೇರೆಯವರು ಕಾನೂನಿನ ನ್ಯಾಯಾಲಯದಲ್ಲಿ ಶಾಸನವನ್ನು ಪ್ರಶ್ನಿಸಬಹುದು. ನಾನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ರಾಜ್ಯಪಾಲರು ಹೇಳುವುದು ಅತ್ಯಂತ ಅಪರೂಪದ ಪ್ರಕರಣದಲ್ಲಿ” ಎಂದು ಸಿಬಲ್ ಹೇಳಿದ್ದಾರೆ.

ಹಿಮಾಚಲ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಆನಂದ್ ಶರ್ಮಾ ವಾದ ಮಂಡಿಸಿ, ಸಂವಿಧಾನದ ವಿಚಾರಕ್ಕೆ ಬಂದಾಗ ನ್ಯಾಯಾಲಯಗಳೇ ಅಂತಿಮ ತೀರ್ಪುಗಾರರಾಗಿದ್ದು, ಅದು ಭಾರತೀಯ ಗಣರಾಜ್ಯದ ಶಕ್ತಿ. ರಾಜ್ಯಪಾಲರುಗಳು ವೈಸರಾಯ್‌ ಅಥವಾ ಗವರ್ನರ್‌ ಜನರಲ್‌ಗಳಲ್ಲ. ಅವರು ಸಚಿವ ಸಂಪುಟದ ಸಲಹೆ ಮತ್ತು ಮಾರ್ಗದರ್ಶನಕ್ಕೆ ಬದ್ಧರಾಗಿರಬೇಕು. ರಾಷ್ಟ್ರಪತಿ ಅಥವಾ ಗವರ್ನರ್‌ಗೆ ವಿಧಾನಮಂಡಲ ರೂಪಿಸುವಲ್ಲಿ ಅಥವಾ ಅದರ ಅಧಿವೇಶನ ನಡೆಸುವಲ್ಲಿ ಯಾವುದೇ ಸ್ವತಂತ್ರ ಪಾತ್ರವಿಲ್ಲ. ವಿಧಾನ ಮಂಡಲವೇ ಶ್ರೇಷ್ಠವಾದುದು ಎಂದು ತಿಳಿಸಿದ್ದಾರೆ.

ಜನರ ಇಚ್ಛೆಗೆ ವಿರುದ್ಧವಾಗಿ ರಾಜ್ಯಪಾಲರ ಹುದ್ದೆ ಬಳಕೆಯಾಗಬಾರದು. ರಾಜ್ಯ ಸರ್ಕಾರಗಳನ್ನು ಮುನಿಸಿಪಾಲಿಟಿಗಳಂತೆ ನಡೆಸಿಕೊಳ್ಳಲಾಗದು. ಅವುಗಳಿಗೆ ತಮ್ಮದೇ ಆದ ಸ್ವತಂತ್ರ ಸ್ಥಾನ ಇದ್ದು ಅದನ್ನು ಉಳಿಸಿ ಗೌರವಿಸಬೇಕು ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...