Homeಮುಖಪುಟದೆಹಲಿಯ ಎಲ್ಲಾ 'ಸ್ಲಂ'ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

ದೆಹಲಿಯ ಎಲ್ಲಾ ‘ಸ್ಲಂ’ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

- Advertisement -
- Advertisement -

ಚುನಾವಣಾ ಪೂರ್ವದಲ್ಲಿ ಬಿಜೆಪಿಯು ದೆಹಲಿಯ ಸ್ಲಂ(ಕೊಳಗೇರಿ) ನಿವಾಸಿಗಳಿಗೆ ಮನೆಗಳನ್ನು ಕಟ್ಟಿಕೊಡುವ ಭರವಸೆ ನೀಡಿತ್ತು, ಆದರೆ ಇದೀಗ ಸ್ಲಂ ನಿವಾಸಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸದೆ ಸ್ಲಂನ್ನು ಕೆಡವಲು ಕೇಂದ್ರ ಸರ್ಕಾರ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ)  ಆರೋಪಿಸಿದೆ.

ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯಾದ್ಯಂತ ಕೊಳೆಗೇರಿಗಳನ್ನು ತೆಗೆದುಹಾಕುವಂತೆ ಎಲ್ಲಾ ಭೂಮಾಲೀಕ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದು ಎಎಪಿಯ ಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸರ್ಕಾರದ ಸಚಿವೆ ಅತಿಶಿ, ದೆಹಲಿಯ ಸ್ಲಂ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸದೆ  ಸ್ಲಂನ್ನು ನಾಶಪಡಿಸಲಾಗುತ್ತಿದೆ. ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಎಲ್ಲಾ ಭೂ-ಮಾಲೀಕ ಸಂಸ್ಥೆಗಳಿಗೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ನಂತಹ ಭೂ ಒಡೆತನ ಹೊಂದಿರುವ ಸಂಸ್ಥೆಗಳಿಗೆ ನಗರದಲ್ಲಿರುವ ಎಲ್ಲಾ ಕೊಳಗೇರಿಗಳನ್ನು ನಾಶ ಮಾಡುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ), ರೈಲ್ವೆ ಮತ್ತು ಇತರ ಏಜೆನ್ಸಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ 1,000 ದಿಂದ 1,500 ನಿವಾಸಿಗಳಿರುವ ಸುಂದರ್ ನರ್ಸರಿ ಹಾಗೂ ದೆಹಲಿ ಪಬ್ಲಿಕ್ ಶಾಲೆಯ ನಡುವೆ ಇರುವ ಕೊಳಗೇರಿಗಳನ್ನು ನವೆಂಬರ್‌ನಲ್ಲಿ ನೆಲಸಮಗೊಳಿಸಲಾಗಿದೆ. ಸ್ಥಳಾಂತರಕ್ಕೆ ಯಾವುದೇ ನೊಟೀಸ್‌ ನೀಡದೆ ಎರಡು ದಿನಗಳಲ್ಲಿ ಮನೆ ತ್ಯಜಿಸುವಂತೆ ಸೂಚಿಸಲಾಗಿದೆ ಎಂದು ಈ ಕೊಳಗೇರಿಗಳ ನಿವಾಸಿಗಳು ಆರೋಪಿಸಿದ್ದರು. ಅವರಿಗೆ ಪುನರ್ವಸತಿಯನ್ನು ಕೂಡ ಕಲ್ಪಿಸಿಲ್ಲ.

ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವಾಲಯದ ಅಡಿಯಲ್ಲಿ ಬರುವ ಲ್ಯಾಂಡ್ ಅಂಡ್ ಡೆವಲಪ್‌ಮೆಂಟ್ ಆಫೀಸ್ (ಎಲ್ & ಡಿಒ) ಸುಂದರ್ ನರ್ಸರಿಯ ಬಳಿಯ ಸ್ಲಂನ್ನು ಕೆಡವಿರುವುದನ್ನು ಅತಿಶಿ ಅವರು ಉಲ್ಲೇಖಿಸಿದ್ದು, ಕೇಂದ್ರ ಸರ್ಕಾರದ ಇತ್ತೀಚಿನ ಆದೇಶಗಳು ಅದೇ ಉದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

GRAP ಅಡಿಯಲ್ಲಿ ಸ್ಲಂನ್ನು ಕೆಡವಲು ಅನುಮತಿಸಲಾಗಿಲ್ಲ ಆದರೆ ಸ್ಲಂನ್ನು ತೆಗೆದುಹಾಕಲು ಅವರು ವಿಶೇಷ ಅನುಮತಿಯನ್ನು ಪಡೆದಿದ್ದರು. ಜಿ20 ಶೃಂಗಸಭೆಯ ವೇಳೆ ರಸ್ತೆ ಬದಿಯ ಕೊಳೆಗೇರಿಗಳ ಸುತ್ತಲೂ ಎತ್ತರದ ಹಸಿರು ಗೋಡೆಗಳನ್ನು ನಿರ್ಮಿಸಿರುವುದನ್ನು ಉಲ್ಲೇಖಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಲಂ ನಿವಾಸಿಗಳ ಬಗ್ಗೆ ನಾಚಿಕೆಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...