Homeಮುಖಪುಟದೆಹಲಿಯ ಎಲ್ಲಾ 'ಸ್ಲಂ'ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

ದೆಹಲಿಯ ಎಲ್ಲಾ ‘ಸ್ಲಂ’ಗಳನ್ನು ಕೆಡವಲು ಕೇಂದ್ರ ಸರಕಾರ ಬಯಸಿದೆ: ಎಎಪಿ

- Advertisement -
- Advertisement -

ಚುನಾವಣಾ ಪೂರ್ವದಲ್ಲಿ ಬಿಜೆಪಿಯು ದೆಹಲಿಯ ಸ್ಲಂ(ಕೊಳಗೇರಿ) ನಿವಾಸಿಗಳಿಗೆ ಮನೆಗಳನ್ನು ಕಟ್ಟಿಕೊಡುವ ಭರವಸೆ ನೀಡಿತ್ತು, ಆದರೆ ಇದೀಗ ಸ್ಲಂ ನಿವಾಸಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸದೆ ಸ್ಲಂನ್ನು ಕೆಡವಲು ಕೇಂದ್ರ ಸರ್ಕಾರ ಸಂಚು ನಡೆಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ)  ಆರೋಪಿಸಿದೆ.

ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯಾದ್ಯಂತ ಕೊಳೆಗೇರಿಗಳನ್ನು ತೆಗೆದುಹಾಕುವಂತೆ ಎಲ್ಲಾ ಭೂಮಾಲೀಕ ಸಂಸ್ಥೆಗಳಿಗೆ ತಿಳಿಸಲಾಗಿದೆ ಎಂದು ಎಎಪಿಯ ಹಿರಿಯ ನಾಯಕಿ ಅತಿಶಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಸರ್ಕಾರದ ಸಚಿವೆ ಅತಿಶಿ, ದೆಹಲಿಯ ಸ್ಲಂ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸದೆ  ಸ್ಲಂನ್ನು ನಾಶಪಡಿಸಲಾಗುತ್ತಿದೆ. ಎರಡು ದಿನಗಳ ಹಿಂದೆ ಪ್ರಧಾನಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ದೆಹಲಿಯ ಎಲ್ಲಾ ಭೂ-ಮಾಲೀಕ ಸಂಸ್ಥೆಗಳಿಗೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ನಂತಹ ಭೂ ಒಡೆತನ ಹೊಂದಿರುವ ಸಂಸ್ಥೆಗಳಿಗೆ ನಗರದಲ್ಲಿರುವ ಎಲ್ಲಾ ಕೊಳಗೇರಿಗಳನ್ನು ನಾಶ ಮಾಡುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ), ರೈಲ್ವೆ ಮತ್ತು ಇತರ ಏಜೆನ್ಸಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಹೇಳಿದ್ದಾರೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ 1,000 ದಿಂದ 1,500 ನಿವಾಸಿಗಳಿರುವ ಸುಂದರ್ ನರ್ಸರಿ ಹಾಗೂ ದೆಹಲಿ ಪಬ್ಲಿಕ್ ಶಾಲೆಯ ನಡುವೆ ಇರುವ ಕೊಳಗೇರಿಗಳನ್ನು ನವೆಂಬರ್‌ನಲ್ಲಿ ನೆಲಸಮಗೊಳಿಸಲಾಗಿದೆ. ಸ್ಥಳಾಂತರಕ್ಕೆ ಯಾವುದೇ ನೊಟೀಸ್‌ ನೀಡದೆ ಎರಡು ದಿನಗಳಲ್ಲಿ ಮನೆ ತ್ಯಜಿಸುವಂತೆ ಸೂಚಿಸಲಾಗಿದೆ ಎಂದು ಈ ಕೊಳಗೇರಿಗಳ ನಿವಾಸಿಗಳು ಆರೋಪಿಸಿದ್ದರು. ಅವರಿಗೆ ಪುನರ್ವಸತಿಯನ್ನು ಕೂಡ ಕಲ್ಪಿಸಿಲ್ಲ.

ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವಾಲಯದ ಅಡಿಯಲ್ಲಿ ಬರುವ ಲ್ಯಾಂಡ್ ಅಂಡ್ ಡೆವಲಪ್‌ಮೆಂಟ್ ಆಫೀಸ್ (ಎಲ್ & ಡಿಒ) ಸುಂದರ್ ನರ್ಸರಿಯ ಬಳಿಯ ಸ್ಲಂನ್ನು ಕೆಡವಿರುವುದನ್ನು ಅತಿಶಿ ಅವರು ಉಲ್ಲೇಖಿಸಿದ್ದು, ಕೇಂದ್ರ ಸರ್ಕಾರದ ಇತ್ತೀಚಿನ ಆದೇಶಗಳು ಅದೇ ಉದ್ದೇಶದಿಂದ ಕೂಡಿದೆ ಎಂದು ಆರೋಪಿಸಿದ್ದಾರೆ.

GRAP ಅಡಿಯಲ್ಲಿ ಸ್ಲಂನ್ನು ಕೆಡವಲು ಅನುಮತಿಸಲಾಗಿಲ್ಲ ಆದರೆ ಸ್ಲಂನ್ನು ತೆಗೆದುಹಾಕಲು ಅವರು ವಿಶೇಷ ಅನುಮತಿಯನ್ನು ಪಡೆದಿದ್ದರು. ಜಿ20 ಶೃಂಗಸಭೆಯ ವೇಳೆ ರಸ್ತೆ ಬದಿಯ ಕೊಳೆಗೇರಿಗಳ ಸುತ್ತಲೂ ಎತ್ತರದ ಹಸಿರು ಗೋಡೆಗಳನ್ನು ನಿರ್ಮಿಸಿರುವುದನ್ನು ಉಲ್ಲೇಖಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಲಂ ನಿವಾಸಿಗಳ ಬಗ್ಗೆ ನಾಚಿಕೆಪಡುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮುಜಾಫರ್‌ನಗರ ವಿದ್ಯಾರ್ಥಿಗೆ ಕಪಾಳಮೋಕ್ಷ ಪ್ರಕರಣ: ಯುಪಿ ಸರಕಾರಕ್ಕೆ ಸುಪ್ರೀಂಕೋರ್ಟ್‌ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...