Homeಮುಖಪುಟಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

ಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

- Advertisement -
- Advertisement -

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), “20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ! ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ” ಎಂದಿದೆ.

“ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಉತ್ತರಿಸಬೇಕು. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?” ಎಂದು ಪ್ರಶ್ನಿಸಿದೆ.

“ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ, 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ” ಎಂದು ಟೀಕಿಸಿದೆ.

“ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ” ಎಂದು ಕುಟುಕಿದೆ.

“ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?! ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ರಾಜ್ಯ ಬಿಜೆಪಿ ಶ್ಲಾಘನೆ

ಕೇಂದ್ರ ಬಜೆಟ್‌ ಅನ್ನು ರಾಜ್ಯ ಬಿಜೆಪಿ ಶ್ಲಾಘಿಸಿದೆ. ‘ಅಮೃತ ಕಾಲದ ಬಜೆಟ್‌’ ಎಂದು ಬಣ್ಣಿಸಿದೆ.

“ರಾಜ್ಯಗಳ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಇದು ಕಳೆದ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಮೊತ್ತಕ್ಕಿಂತ ಶೇ. 30ರಷ್ಟು ಹೆಚ್ಚಳವಾಗಿದೆ. ರಾಜ್ಯಗಳಿಗೆ 50 ವರ್ಷ ಬಡ್ಡಿ ರಹಿತ ಸಾಲ ಸೌಲಭ್ಯವನ್ನು ಮುಂದುವರಿಸಲಾಗಿದೆ” ಎಂದಿದೆ.

“ಮಧ್ಯಮವರ್ಗದ ಮೇಲಿದ್ದ ತೆರಿಗೆಯ ಭಾರವನ್ನು ಗಣನೀಯವಾಗಿ ತಗ್ಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದೇಶದ ಜನಮೆಚ್ಚುಗೆ ಗಳಿಸಿದೆ. ರೂ. 3 ಲಕ್ಷದವರೆಗೆ ವೈಯುಕ್ತಿಕ ತೆರಿಗೆಯ ಹೊರೆಯನ್ನು ಇಳಿಸಿರುವುದು ಮಧ್ಯಮವರ್ಗದ ಮುಖದಲ್ಲಿ ಮಂದಹಾಸ ಮೂಡಿದೆ” ಎಂದು ಅಭಿಪ್ರಾಯಪಟ್ಟಿದೆ.

“ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ಕಾರ್ಯಕ್ರಮ ರೂಪಿಸಲಾಗುವುದು. ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಇವರನ್ನು ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...