Homeಮುಖಪುಟಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

ಕೇಂದ್ರದ ಬಜೆಟ್‌ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ: ಕೆಪಿಸಿಸಿ ಲೇವಡಿ

- Advertisement -
- Advertisement -

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2023-24ನೇ ಸಾಲಿನ ಕೇಂದ್ರ ಬಜೆಟ್ ‘ಬೀಜವಿಲ್ಲದ ಕಡಲೆಕಾಯಿ’ ಇದ್ದಂತಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), “20 ಲಕ್ಷ ಕೋಟಿ ಪ್ಯಾಕೇಜ್ ಎಂಬ ಬಿಳಿ ಕಾಗೆ ತೋರಿಸಿದಂತೆಯೇ ಈ ಬಜೆಟ್ ಕೂಡ! ಉದ್ಯೋಗಕ್ಕಾಗಿ ಪರಿತಪಿಸುತ್ತಿರುವ ಯುವಸಮುದಾಯಕ್ಕೆ ಯಾವುದೇ ಭರವಸೆ ಇಲ್ಲ. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮವಿಲ್ಲ. ಜನರ ಸಂಕಷ್ಟ ಕಡಿಮೆಯಾಗಬಹುದೆಂಬ ನಿರೀಕ್ಷೆ ಹುಸಿ ಮಾಡಿದೆ ಕೇಂದ್ರ ಸರ್ಕಾರ” ಎಂದಿದೆ.

“ಡಬಲ್ ಇಂಜಿನ್ ಸರ್ಕಾರ ಎಂದುಕೊಳ್ಳುವ ಕರ್ನಾಟಕ ಬಿಜೆಪಿ ಉತ್ತರಿಸಬೇಕು. ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಸಿಗದಿರುವುದೇಕೆ? 23 ಸಾವಿರ ಕೋಟಿ ಅಗತ್ಯವಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇವಲ 5,300 ಕೋಟಿ ನೀಡಿ ಮೂಗಿಗೆ ತುಪ್ಪ ಸವರಿದ್ದೇಕೆ? ಮೇಕೆದಾಟು, ಮಹದಾಯಿ ಯೋಜನೆಗಳ ಬಗ್ಗೆ ಚಕಾರ ಎತ್ತದಿರುವುದೇಕೆ?” ಎಂದು ಪ್ರಶ್ನಿಸಿದೆ.

“ಸಬ್ ಅರ್ಬನ್ ರೈಲು ಕಾಮಗಾರಿಗೆ ನಿಗದಿಪಡಿಸಿದ್ದ ಕಾಲಮಿತಿ ಮುಗಿಯುತ್ತಿದೆ, 18 ಸಾವಿರ ಕೋಟಿಯ ಯೋಜನೆಗೆ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ ಹಣ ನೀಡಿದ್ದು ಕರ್ನಾಟಕದೆಡೆಗೆ ಕೇಂದ್ರ ಸರ್ಕಾರಕ್ಕಿರುವ ತಾತ್ಸಾರ ಮನೋಭಾವಕ್ಕೆ ನಿದರ್ಶನ. ನಿಗದಿತ ಕಾಲಮಿತಿಯಲ್ಲಿ ಖಂಡಿತವಾಗಿಯೂ ಪೂರ್ಣಗೊಳಿಸುವ ಇರಾದೆ ಬಿಜೆಪಿಗಿಲ್ಲ” ಎಂದು ಟೀಕಿಸಿದೆ.

“ಕರ್ನಾಟಕ ರೈತರ ಆತ್ಮಹತ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದ ರೈತರಿಗೆ ಬಜೆಟ್‌ನಲ್ಲಿ ಸಿಕ್ಕಿದ್ದೇನು? ಕೃಷಿ ಡಿಜಿಟಲೀಕರಣ ಎಂಬ ಆಕರ್ಷಕ ಪದವನ್ನು ಪರಿಚಯಿಸಿದಾಕ್ಷಣ ರೈತರ ಸಮಸ್ಯೆ ಬಗೆಹರಿಯದು. ಬೆಳೆಯನ್ನು ಡಿಜಿಟಲ್ ತಾಂತ್ರಿಕತೆಯಲ್ಲಿ ಬೆಳೆಯಲಾಗದು ಎಂಬ ವಾಸ್ತವು ಪ್ರಧಾನಿಗೆ ತಿಳಿದಂತಿಲ್ಲ” ಎಂದು ಕುಟುಕಿದೆ.

“ಮಧ್ಯಮ ವರ್ಗ ಆದಾಯವನ್ನೇ ಕಳೆದುಕೊಂಡಿದೆ, ಜನರ ಆದಾಯಕ್ಕೆ ಹೊಡೆತ ಕೊಟ್ಟು ಆದಾಯ ತೆರಿಗೆ ಮಿತಿ ಏರಿಸಿದರೆ ಪ್ರಯೋಜನವೇನು?! ಜನರ ಆದಾಯವನ್ನು ವೃದ್ಧಿಸುವ ವಾತಾವರಣ ಸೃಷ್ಟಿಸುವಲ್ಲಿ ಬಜೆಟ್ ವಿಫಲವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ರಾಜ್ಯ ಬಿಜೆಪಿ ಶ್ಲಾಘನೆ

ಕೇಂದ್ರ ಬಜೆಟ್‌ ಅನ್ನು ರಾಜ್ಯ ಬಿಜೆಪಿ ಶ್ಲಾಘಿಸಿದೆ. ‘ಅಮೃತ ಕಾಲದ ಬಜೆಟ್‌’ ಎಂದು ಬಣ್ಣಿಸಿದೆ.

“ರಾಜ್ಯಗಳ ಬಂಡವಾಳ ವೆಚ್ಚದ ಮಿತಿಯನ್ನು 1.3 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಇದು ಕಳೆದ ಆರ್ಥಿಕ ವರ್ಷದಲ್ಲಿ ನಿಗದಿಪಡಿಸಿದ್ದ ಮೊತ್ತಕ್ಕಿಂತ ಶೇ. 30ರಷ್ಟು ಹೆಚ್ಚಳವಾಗಿದೆ. ರಾಜ್ಯಗಳಿಗೆ 50 ವರ್ಷ ಬಡ್ಡಿ ರಹಿತ ಸಾಲ ಸೌಲಭ್ಯವನ್ನು ಮುಂದುವರಿಸಲಾಗಿದೆ” ಎಂದಿದೆ.

“ಮಧ್ಯಮವರ್ಗದ ಮೇಲಿದ್ದ ತೆರಿಗೆಯ ಭಾರವನ್ನು ಗಣನೀಯವಾಗಿ ತಗ್ಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ದೇಶದ ಜನಮೆಚ್ಚುಗೆ ಗಳಿಸಿದೆ. ರೂ. 3 ಲಕ್ಷದವರೆಗೆ ವೈಯುಕ್ತಿಕ ತೆರಿಗೆಯ ಹೊರೆಯನ್ನು ಇಳಿಸಿರುವುದು ಮಧ್ಯಮವರ್ಗದ ಮುಖದಲ್ಲಿ ಮಂದಹಾಸ ಮೂಡಿದೆ” ಎಂದು ಅಭಿಪ್ರಾಯಪಟ್ಟಿದೆ.

“ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ಕಾರ್ಯಕ್ರಮ ರೂಪಿಸಲಾಗುವುದು. ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಇವರನ್ನು ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...