Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...