Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...