Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...