Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...