Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...