Homeಕರ್ನಾಟಕ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳು ಬಂದ್’; ನಡ್ಡಾ ಬೆದರಿಕೆಗೆ ಜನಾಕ್ರೋಶ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಯೋಜನೆಗಳನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಿಬಿಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ. ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ನಡ್ಡಾ, ”ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್ ಯೋಜನೆ’ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ” ಎಂದು ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ರಾಜ್ಯದ ಮತದಾರರು ಸಿಡಿದೆದ್ದಿದ್ದಾರೆ. “ರಾಜ್ಯದ ಜನತೆ ತೆರೆಗೆ ಕೊಡುವುದನ್ನೇ ನಿಲ್ಲಿಸಬೇಕಾಗುತ್ತದೆ, ನಮ್ಮಿಂದ ನೀವೇ ಹೊರತು, ನಿಮ್ಮಿಂದ ನಾವಲ್ಲ” ಎಂದು ಅಭಿಪ್ರಾಯ ತಾಳುತ್ತಿದ್ದಾರೆ.

“ಬಿಜೆಪಿ ಸೋತರೆ ಕರ್ನಾಟಕದಿಂದ ಕೇಂದ್ರ ಸಂಗ್ರಹಿಸುವ ಜಿಎಸ್‌ಟಿಯೂ ಬಂದ್ ಎಂದು ಹೇಳಿಕೆ ನೀಡುವ ದಮ್ಮು ತಾಕತ್ತು ಇದೆಯೇ ನಡ್ಡಾ ಅವರೇ? ಡಬಲ್ ಇಂಜಿನ್ ಇದ್ದಾಗಲೂ ಕೇಂದ್ರದಿಂದ ಕರ್ನಾಟಕಕ್ಕೆ ಸಿಕ್ಕಿದ್ದು ಖಾಲಿ ಚಿಪ್ಪು ಅಲ್ಲವೇ? ನೆರೆ ಪರಿಹಾರ, ಜಿಎಸ್‌ಟಿ ಬಾಕಿ, ಲಸಿಕೆ, ಆಕ್ಸಿಜನ್, ಹಣಕಾಸು ಆಯೋಗದ ಹಣ ಎಲ್ಲದರಲ್ಲೂ ಮಹಾದ್ರೋಹ ಎಸಗಿದ್ದೀರಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಸೋಲಿನ ಭೀತಿ ಬಿಜೆಪಿಯನ್ನು ಹೇಗೆ ಕಾಡುತ್ತಿದೆ ಎಂಬುದಕ್ಕೆ ನಡ್ಡಾ ಅವರ ಈ ಹೇಳಿಕೆಯೇ ಸಾಕ್ಷಿ. ಸೋಲು ಸನಿಹಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಕನ್ನಡಿಗರಿಗೆ ನೇರಾನೇರ ಬೆದರಿಕೆ ಹಾಕುತ್ತಿದೆ. ನಡ್ಡಾ ಅವರ ಹೇಳಿಕೆ ಸಂವಿಧಾನ, ಪ್ರಜಾಪ್ರಭುತ್ವಗಳಿಗೆ ಸಂಪೂರ್ಣ ವಿರುದ್ಧವಾದುದು, ಬಿಜೆಪಿಯ ಮಾನ್ಯತೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಬಿಜೆಪಿ ಸೋತರೆ ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ನರೇಂದ್ರ‌ಮೋದಿಯವರ ಆಶೀರ್ವಾದ ಬೇಕಿದ್ದರೆ ಬಿಜೆಪಿಗೆ ಮತ ಹಾಕಿ ಎಂದು ಇತ್ತೀಚೆಗಷ್ಟೇ ಹೇಳಿದ್ದರು. ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧವೂ ಕ್ರಮಕೈಗೊಳ್ಳಬೇಕು” ಎಂದಿದ್ದಾರೆ.

“ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸಲಿದೆ. ಜೆ.ಪಿ.ನಡ್ಡಾ ಮತ್ತು ಅವರ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಕಿಂಚಿತ್ತೂ ಗೌರವ ಇಲ್ಲ. ಅವರು ಭಾರತ ತಮ್ಮ ಏಕಚಕ್ರಾಧಿಪತ್ಯ ಎಂದು ತಿಳಿದುಕೊಂಡಿದ್ದಾರೆ. ಇಂತಹವರನ್ನು ತೊಲಗಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಲು ಕರ್ನಾಟಕದ ಜನತೆಗೆ ಅಪೂರ್ವವಾದ ಅವಕಾಶ ಬಂದಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ನಡ್ಡಾ ಮನಸ್ಥಿತಿಯ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಹೋರಾಟಗಾರರಾದ ಡಾ.ಎಚ್.ವಿ.ವಾಸು ಪ್ರತಿಕ್ರಿಯಿಸಿ, “ಇದನ್ನು ನಡ್ಡಾ ಹೇಳಿರೋದು ನಿಜವಾದರೆ, ಕ್ಷಮೆ ಕೇಳಿದರೆ ಸಾಲದು.‌ ನಡ್ಡಾ ಮೇಲೆ ಕ್ರಮ ತೆಗೆದುಕೊಳ್ಳಬೇಕು.‌ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಬಿಜೆಪಿಯನ್ನು ದೇಶದ ಎಲ್ಲಾ ರಾಜ್ಯಗಳ ಜನರು ಬಹಿಷ್ಕರಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನಡ್ಡಾ ಅವರೇ ನಾವು ಬಿಜೆಪಿಯನ್ನು ಸೋಲಿಸುತ್ತೇವೆ.. ಸೋಲಿಸಿಯೇ ಸೋಲಿಸುತ್ತೇವೆ ಮತ್ತು ಒಕ್ಕೂಟ ಸರ್ಕಾರದಿಂದ ಅದೇನು ಬಂದ್ ಮಾಡುತ್ತಿರೋ ನಾವು ನೋಡುತ್ತೇವೆ. ನೀವು ಸೋಲಿಗೆ ಇಷ್ಟೊಂದು ಹೆದರಿಬಿಟ್ಟರೆ ಹೇಗೆ? ಮುಂದೆ ಬಹಳಷ್ಟು ಸೋಲುವುದು ಬಾಕಿ ಇದೆ. ನೆನೆಪಿರಲಿ ನಡ್ಡಾ ಅವರೇ, ಜಿಎಸ್‌ಟಿ ಸಂಗ್ರಹದ ದೊಡ್ಡ ಮೊತ್ತವು ಕೇಂದ್ರಕ್ಕೆ ಪಾವತಿಯಾಗುವುದು ಕರ್ನಾಟಕ ರಾಜ್ಯದಿಂದಲೇ. ನಾವು ಕೊಟ್ಟರೇನೇ ನೀವು ಬಾಳುವುದು” ಎಂದು ಕವಿ ರಾಜೇಂದ್ರ ಪ್ರಸಾದ್ ಎಚ್ಚರಿಸಿದ್ದಾರೆ.

“ಸಂಯುಕ್ತ ಗಣರಾಜ್ಯ ಆಡಳಿತದಲ್ಲಿ ರಾಜ್ಯ ಸರ್ಕಾರ ಕೇಂದ್ರದಿಂದ ಅಭಿವೃದ್ಧಿ ಕಾರ್ಯ ನೀಡುವುದಿಲ್ಲ ಎಂದು ಹೇಳಿದರೆ, ತೆರಿಗೆ ಹಣ ನೀಡಬೇಡಿ ಎಂದು ಹೇಳಲಿ. ನಮ್ಮ ಅಭಿವೃದ್ಧಿ ನಮಗೆ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ ಇಂತಹ‌ ಹೇಳಿಕೆ ನೀಡಿದದರೆ ಹೇಗೆ. ಇದು ತಪ್ಪು” ಎಂದು ಚಿಂತಕ ದಾಸನೂರು ಕೂಸಣ್ಣ ಖಂಡನೆ ವ್ಯಕ್ತಪಡಿಸಿದ್ದಾರೆ.

ಕವಿ ಗೋಪಾಲಕೃಷ್ಣ ಅಡಿಗರ ಸಾಲುಗಳನ್ನು ಉಲ್ಲೇಖಿಸಿ ಚಿಂತಕ ಶ್ರೀಪಾದ್ ಭಟ್‌ ಪ್ರತಿಕ್ರಿಯಿಸಿದ್ದಾರೆ. “ನಿನ್ನ ನಾಲ್ಕು ಕಾಲ ನರ್ತನಕ್ಕೆ ಪ್ರತಿ ನಿಮಿಷ ಏನಾದರೊಂದಕ್ಕೆ ಜಖಂ ಆಗದಿದ್ದರೆ ನಿನ್ನ ಅದ್ಭುತ ಪ್ರತಿಭೆಗೆ ಕುಂದು ಕಂಡೆಯಾ- ಅಡಿಗ. ಕರ್ನಾಟಕದ ಜನತೆ ಹಗಲು ಕಂಡ ಬಾವಿಯಲ್ಲಿ ಹಗಲೂ, ಇರುಳೂ ಯಾವ ಹೊತ್ತಿನಲ್ಲಿಯೂ ಬೀಳಲ್ಲ ನಡ್ಡಾ. ವಿನಾಶ ಕಾಲ ಬಂದಂತಿದೆ ಅಥವಾ ಬಂದಾಗಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“ಇಂತಹ ಬೆದರಿಕೆಗಳಿಗೆಲ್ಲ ಕನ್ನಡಿಗರು ಹೆದರಲ್ಲ ಮಿಸ್ಟರ್‌ ನಡ್ಡಾ. ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ. ತಾಕತ್ತಿದ್ದರೆ ಬಂದ್ ಮಾಡಿ ನೋಡೋಣ” ಎಂದು ಸತೀಶ್ ಚಿಕ್ಕಮಗಳೂರು ಎಂಬವರು ಸವಾಲು ಹಾಕಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಪ್ರತಿಕ್ರಿಯಿಸಿ, “ರಾಜಕಾರಣಿಯೊಬ್ಬರು ತನ್ನ ಭಾಷಣದಲ್ಲಿ ತಮ್ಮ ಪಕ್ಷ ಚುನಾವಣೆಯಲ್ಲಿ ಸೋತರೆ ಸೆಂಟ್ರಲ್ ಯೋಜನೆಗಳು ಬಂದ್ ಎಂದು ಹೇಳಿದ್ದಾರೆಂಬ ಪತ್ರಿಕಾ ವರದಿ ನೋಡಿದೆ. ಒಂದು ವೇಳೆ ಇದು ಸಂಭವಿಸಿದರೆ, ಕರ್ನಾಟಕಕ್ಕೆ ಎಷ್ಟು ಲಾಸ್ ಆಗಬಹುದು?” ಎಂದು ವಿವರಿಸಿದ್ದಾರೆ.

“2022-23 ಬಜೆಟ್ ಪ್ರಕಾರ ರಾಜ್ಯದ ಆದಾಯ ನಿರೀಕ್ಷೆ ಇರುವುದು 1,89,888 ಕೋಟಿ ರೂ. ಇದರಲ್ಲಿ 73% ಭಾಗ ರಾಜ್ಯದಲ್ಲೇ ಉತ್ಪತ್ತಿ ಆಗುವಂತಹದು. ಅಂದರೆ, 1,37,824 ಕೋಟಿ ರೂ.ಗಳು. ಕೇಂದ್ರ ಸರ್ಕಾರದ ಪಾಲು 27%. ಅಂದರೆ, 52,064 ಕೋಟಿ ರೂ.ಗಳು. ಇದರಲ್ಲಿ, ಅಂದರೆ ಕೇಂದ್ರ ಸರ್ಕಾರದ ಪಾಲಿನಲ್ಲಿ, 16% ಭಾಗ, ಅಂದರೆ 30,382 ಕೋಟಿ ರೂ.ಗಳು ನಮ್ಮ ರಾಜ್ಯ ಕೇಂದ್ರಕ್ಕೆ ಕಟ್ಟಿರುವ ಜಿಎಸ್‌ಟಿ ತೆರಿಗೆಯಲ್ಲಿ ಕೇಂದ್ರ ಸರ್ಕಾರ ವಾಪಸ್ ಕೊಡಲೇಬೇಕಾಗಿರುವ ರಾಜ್ಯದ ಪಾಲು. ಕೇವಲ 12% ಮಾತ್ರ ಕೇಂದ್ರದ ಅನುದಾನ (ಅರ್ಥಾತ್ ವಿವಿಧ ಯೋಜನೆಗಳಿಗೆ ಕೇಂದ್ರದಿಂದ ಬರುವ ನೆರವು). ಕೇಂದ್ರ ಸರ್ಕಾರದ ರಾಜಕಾರಣಿ ಹೇಳಿರುವಂತೆ, ಅವರ ಪಕ್ಷ ಸೋತರೆ ರಾಜ್ಯಕ್ಕೆ ಕೇಂದ್ರದ ಅನುದಾನ ಬರದೆ ಆಗುವ ನಷ್ಟ ಕೇವಲ 23,000 ಕೋಟಿ ರೂ. (ಅಂಕಿಸಂಖ್ಯೆಗಳಿಗೆ ಆಧಾರ: ಕರ್ನಾಟಕ ಬಜೆಟ್ 2022-23ರ ದಾಖಲೆಗಳು)” ಎಂದು ತಿಳಿಸಿದ್ದಾರೆ.

“ಬಹುತೇಕ ಎರಡು ಲಕ್ಷ ಕೋಟಿ ಆದಾಯ ಇರುವ, ತಿಂಗಳಿಗೆ ಸಮಾರು 10,000 ಕೋಟಿ ಜಿಎಸ್‌ಟಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಿಕೊಡುವ ರಾಜ್ಯ ಕರ್ನಾಟಕ. ಬರೇ ಎರಡು ತಿಂಗಳ ಜಿಎಸ್‌ಟಿ ಆದಾಯದಲ್ಲಿ ಕೇಂದ್ರದ ಅನುದಾನದ ಕೊರತೆ ಭರ್ತಿಯಾಗಬಲ್ಲ ಸಂಪದ್ಭರಿತ ರಾಜ್ಯ ಕರ್ನಾಟಕ. ರಾಜಕಾರಣಿಗಳು ಮಾತಾಡುವಾಗ ಎಚ್ಚರ ತಪ್ಪಬಾರದು. ಅದು ಒಂದು ಒಕ್ಕೂಟ ಗಣರಾಜ್ಯಕ್ಕೆ ಹೇಳಿಸಿದ್ದಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...