Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...