Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...