Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...