Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...