Homeಅಂಕಣಗಳುಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

ಸಿಇಟಿ ಹೆಸರಲ್ಲಿ ಕಾನೂನು ಉಲ್ಲಂಘಿಸುತ್ತಿದೆ ರಾಜ್ಯ ಸರ್ಕಾರ

- Advertisement -
| ಹೆಚ್.ಎಸ್‍.ದೊರೆಸ್ವಾಮಿ |
ಕರ್ನಾಟಕ ಸರ್ಕಾರ ಅನೇಕ ವರ್ಷಗಳಿಂದ common entrance test ನಡೆಸುತ್ತಿದೆ. 2ನೇ ವರ್ಷದ ಪದವಿ ಪೂರ್ವ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಕೂಡಲು ಅರ್ಹರು. ಸಿಇಟಿ ಪರೀಕ್ಷೆ ಬರೆದವರಿಗೆ ಈ ಪರೀಕ್ಷೆಯಲ್ಲಿ ಬಂದ ಅಂಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪಿಯುಸಿಯಲ್ಲಿ ಬಂದ ಅಂಕಗಳನ್ನೂ ಈ ಸಂದರ್ಭದಲ್ಲಿ ಪರಿಗಣಿಸಬೇಕಾದ್ದೂ ಅಗತ್ಯ. ಆದರೆ ಅದನ್ನು ಕಡೆಗಣಿಸಲಾಗಿದೆ.
ಸಿಇಟಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು ಸೀಟುಗಳು ಅದಕ್ಕಿಂತ ಕಡಿಮೆ ಇದ್ದ ಕಾರಣದಿಂದ. 2013ರಲ್ಲಿ ಸಲ್ಲಿಸಿದ ರಿಟ್ ಅರ್ಜಿಗೆ ಸಂಬಂಧಪಟ್ಟಂತೆ 3-04-2014ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯ ‘ಸೀಟುಗಳು ಹೆಚ್ಚಾಗಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಸಿಇಟಿ ಪರೀಕ್ಷೆ ನಡೆಸುವ ಅಗತ್ಯವಿಲ್ಲ. ಪರಿಸ್ಥಿತಿ ಹೀಗಿದ್ದೂ ಸಿಇಟಿ ಪರೀಕ್ಷೆ ನಡೆಸುವುದು ಅರ್ಥಹೀನ’ ಎಂದು ತೀರ್ಪಿನಲ್ಲಿ ಹೇಳಿತು.
2013ರಲ್ಲಿ ಪಿಯುನಲ್ಲಿ ಉತ್ತೀರ್ಣರಾದ ಒಂದು ಸಾವಿರ ವಿದ್ಯಾರ್ಥಿಗಳು ಡೆಂಟಲ್ ಕಾಲೇಜುಗಳಿಗೆ ನೇರವಾಗಿ ಪ್ರವೇಶ ಪಡೆದರು. ಈ ವಿದ್ಯಾರ್ಥಿಗಳಿಗೆ ‘ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ’ ನೋಟಿಸ್ ನೀಡಿತು. ಆಗ ಈ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೊಕ್ಕಿದ್ದು, ಸಿಇಟಿ ಪರೀಕ್ಷೆಗೆ ಹೋಗದೆ ನೇರವಾಗಿ ಡೆಂಟಲ್ ಕಾಲೇಜು ಸೇರಿದ್ದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ನ್ಯಾಯಾಲಯ ಅವಕಾಶ ಕಲ್ಪಿಸಿಕೊಟ್ಟಿತು. ಸರ್ಕಾರ ನ್ಯಾಯವಾಗಿ ಹೈಕೋರ್ಟ್‍ನ ಆಜ್ಞೆಯನ್ನು ಪಾಲನೆ ಮಾಡಬೇಕಾಗಿತ್ತು. ಸಿಇಟಿ ರದ್ದುಗೊಳಿಸಬೇಕಾಗಿತ್ತು. ಆದರೆ ಕರ್ನಾಟಕ ಸರ್ಕಾರ, ಎರಡನೇ ವರ್ಷದ ಪರೀಕ್ಷೆಯಲ್ಲಿ ಪಾಸಾದವರನ್ನು ಸಿಇಟಿಗೆ ಕೂಡಿಸುವ ಬದಲು ಎರಡನೇ ವರ್ಷದ ಪಿಯುಸಿಯಲ್ಲಿ ಓದುತ್ತಿದ್ದ, ಇನ್ನೂ ಕೊನೆ ಪರೀಕ್ಷೆ ಬರೆಯದೇ ಇದ್ದವರನ್ನು ಸಿಇಟಿ ಪರೀಕ್ಷೆಗೆ ಕೂಡಿಸುವ ಹುನ್ನಾರ ಮಾಡಿತು. ಹೀಗೆ ಸಿಇಟಿಗೆ ಕೂಡುವ ಎಲ್ಲಾ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗೆ ತಲಾ 500ರೂನಂತೆ ವಿದ್ಯಾರ್ಥಿನಿಗೆ ತಲಾ 250ರೂ ನಂತೆ ಪರೀಕ್ಷೆ ಶುಲ್ಕ ಕಟ್ಟಿಸಿಕೊಳ್ಳಲು ತೀರ್ಮಾನಿಸಿತು. ಅಭ್ಯರ್ಥಿ ಅನುತ್ತೀರ್ಣನಾಗಲಿ ಅಥವಾ ಉತ್ತೀರ್ಣನಾಗಲಿ ಅವರು ಕಟ್ಟಿದ ಹಣವನ್ನು ಹಿಂದಿರುಗಿಸಲಾಗುವುದಿಲ್ಲ ಎಂದು ಖಚಿತಪಡಿಸಲಾಯಿತು. ಹೀಗೆ ಎರಡನೇ ಪಿಯುಸಿಯಲ್ಲಿ ಇರುವಾಗಲೇ ಸಿಇಟಿಗೆ ಕಟ್ಟಿದ ವಿದ್ಯಾರ್ಥಿಗಳ ವಿವರ ಹೀಗಿದೆ.
ವರ್ಷ ಸಿಇಟಿ ಪರೀಕ್ಷೆಗೆ ಕೂತವರು ಸೀಟಿನ ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಡಿಪ್ಲೊಮಾ ಕೊನೇ ವರ್ಷದಲ್ಲಿ ಓದುತ್ತಿದ್ದು ಕೊನೆಯ ಪರೀಕ್ಷೆ ಇನ್ನೂ ನಡೆಯದಿದ್ದಾಗ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವವರ ವಿವರ.
ವರ್ಷ ಸಿಇಟಿ ಪರೀಕ್ಷೆಗೆ ಹಜರಾದವರು ಅರ್ಹತೆ ಪಡೆದವರು ಅರ್ಹತೆ ಪಡೆಯದವರು
ಸರ್ಕಾರಕ್ಕೆ 2016, 17 ಮತ್ತು 18ರಲ್ಲಿ ವಿದ್ಯಾರ್ಥಿಗಳು ಕಟ್ಟಿದ ಹಣ
ಪ್ರತಿ ವರ್ಷ ಸಿಇಟಿಯಲ್ಲಿ ಪಾಸಾದವರೆಲ್ಲರಿಗೂ ಸೀಟು ಸಿಕ್ಕುತ್ತದೆ ಮಾತ್ರವಲ್ಲ, ಅನೇಕ ಕಾಲೇಜುಗಳಲ್ಲಿ ನಿಗದಿತ ಸೀಟು ಭರ್ತಿಯಾಗದೆ ಇರುವ ಪರಿಸ್ಥಿತಿ ಉದ್ಭವಿಸಿದೆ. ಅಂದರೆ ಖಾಸಗಿಯವರಿಗೆ ಕಾಲೇಜು ನಡೆಸಲು ಸರ್ಕಾರ ಉದಾರವಾಗಿ ಅವಕಾಶ ಮಾಡಿಕೊಡಲಾಗುತ್ತಿದೆ.
ವಿವಿಧ ಕಾಲೇಜುಗಳಲ್ಲಿ ಯಾವ ಯಾವ ವರ್ಷದಲ್ಲಿ ಎಷ್ಟೆಷ್ಡು ಸೀಟುಗಳು ಕೇಳುವವರಿಲ್ಲದೆ ಬಿದ್ದಿದೆ ಎಂಬುದರ ವಿವರ ಇಲ್ಲಿ ನೀಡಲಾಗಿದೆ.
ಒಟ್ಟಿನಲ್ಲಿ ಇಲ್ಲಿ ಕೋರ್ಸ್‍ಗಳಲ್ಲೂ ಖಾಲಿ ಸೀಟುಗಳಿದ್ದು ಅಭ್ಯರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದ್ದರಿಂದ ಸೀಟುಗಳ ಹಂಚಿಕೆಗೆ ಸಿಇಟಿ ಅಗತ್ಯವಿಲ್ಲ. ಎರಡನೇ ವರ್ಷದ ಪಿಯುಸಿ ಮತ್ತು ಕೊನೇ ವರ್ಷದ ಡಿಪ್ಲೊಮಾ ಕೋರ್ಸ್ ಮುಗಿಸಿದವರಿಗೆ ನೇರವಾಗಿ ಅವರಿಗೆ ಬಂದಿರುವ ಅಂಕಗಳ ಆಧಾರದಲ್ಲಿ ಸೀಟುಗಳನ್ನು ನೀಡಬಹುದಾಗಿದೆ. ಕಾನೂನುರೀತ್ಯಾ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸ್ ಮುಗಿಯುವುದಕ್ಕೆ ಮೊದಲು ಸಿಇಟಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಇದ್ದ ಕಾನೂನುಗಳನ್ನೇ ಗಾಳಿಗೆ ತೂರಿದಂತೆ. ಕೋರ್ಟ್ ಆರ್ಡರನ್ನು ಪಾಲಿಸದೆ ತಮ್ಮದೇ ಕಾನೂನುಗಳನ್ನು ಮಾಡಿಕೊಂಡು ವಿದ್ಯಾರ್ಥಿಗಳಿಂದ ಹಣ ಸುಲಿಗೆ ಮಾಡಿಕೊಳ್ಳುತ್ತಿರುವುದು ಹೇಯಕಾರ್ಯ.
2018ರಲ್ಲಿ ಪಿಯುಸಿ ಮತ್ತು ಡಿಪ್ಲೊಮಾ ಕೋರ್ಸಿನವರಿಂದ ಸರ್ಕಾರ ವಸೂಲ್ಮಾಡಿರುವುದು 15.48 ಕೋಟಿ ರೂಪಾಯಿ. ಸರ್ಕಾರದ ಈ ಹಗಲು ದರೋಡೆಗೆ ಧಿಕ್ಕಾರ.
ಈ ವರ್ಷದಿಂದಲೇ ಸಿಇಟಿ ಕೊನೆಗಾಣಿಸಿ ಕೊನೇ ವರ್ಷದ ಪಿಯುಸಿ ಮತ್ತು ಟಿಪ್ಲೊಮಾ ಕೋರ್ಸ್ ಮುಗಿಸಿರುವವರ ಅಂತಿಮ ಪರೀಕ್ಷೆಯ ಅಂಕಗಳ ಅಧಾರದ ಮೇಲೆ ನೇರವಾಗಿ ವಿವಿಧ ಕೋರ್ಸ್‍ಗಳಿಗೆ ಆಯ್ಕೆ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...