Homeಮುಖಪುಟ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ಅನುಮತಿಯಿಲ್ಲದೆ ಪ್ರತಿಭಟಿಸಲು ಯತ್ನಿಸಿದ್ದಾರೆಂದು ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

- Advertisement -
- Advertisement -

ರಾಜಧಾನಿಯಲ್ಲಿ ಜನವರಿ 31 ರವರೆಗೆ ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಅಡಿಯಲ್ಲಿ ನಿಷೇಧಿತ ಆದೇಶಗಳು ಸೆಂಟ್ರಲ್ ದೆಹಲಿಯಲ್ಲಿ ಜಾರಿಯಲ್ಲಿರುವುದರಿಂದ ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಎಪಿ ಶಾಸಕರಾದ ರಾಘವ್ ಛಡ್ಡಾ ಮತ್ತು ಅತೀಶಿ ಮರ್ಲೆನಾ ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದು ಎಎಪಿ ಸರ್ಕಾರ ಮತ್ತು ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಜನವರಿ 31 ರವರೆಗೆ ದೆಹಲಿ ರಾಜ್ಯ ವಿಪತ್ತು ನಿವಾರಣಾ ಘಟಕವು ರಾಜಕೀಯ ಸಭೆಗಳಿಗೆ ನಿಷೇಧ ಹೇರಿದೆ ಎಂದು ಹೈಕೋರ್ಟಿಗೆ ಸಲ್ಲಿಸಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಬ್ಬರು ಎಎಪಿ ಮುಖಂಡರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ದೆಹಲಿ ಪೊಲೀಸರು ಉಲ್ಲೇಖಿಸಿರುವ ಇನ್ನೊಂದು ಕಾರಣವೆಂದರೆ, ಎರಡು ನಿವಾಸಗಳು ಇರುವ ಇಡೀ ಸೆಂಟ್ರಲ್ ದೆಹಲಿಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಹೊರಡಿಸಲಾದ ನಿಷೇಧಿತ ಆದೇಶಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್‌‌‌ ಗವರ್ನರ್‌ ಅವರ ಮನೆಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಇಬ್ಬರು ಎಎಪಿ ನಾಯಕರ ಮನವಿಗೆ ಸ್ಪಂದಿಸಿ ಪೊಲೀಸರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಸಲ್ಲಿಕೆಗಳನ್ನು ಮಾಡಲಾಗಿದೆ.

ಈ ವಿಷಯವನ್ನು ಗುರುವಾರ ನ್ಯಾಯಮೂರ್ತಿ ಪ್ರತಿಬಾ ಎಂ. ಸಿಂಗ್ ಅವರ ಮುಂದೆ ಪಟ್ಟಿ ಮಾಡಲಾಗಿತ್ತಾಗಿದ್ದರೂ, ವಿಚಾರಣೆ ನಡೆಯಲಿಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಪಟ್ಟಿ ನಿಗದಿ ಮಾಡಬೇಕೆಂದು ದೆಹಲಿ ಪೊಲೀಸರ ವಕೀಲರು ನ್ಯಾಯಾಲಯವನ್ನು ಒತ್ತಾಯಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗಳನ್ನು ಜಂತರ್ ಮಂತರ್ ಮತ್ತು ರಾಮ್‌ಲೀಲಾ ಮೈದಾನ ಎಂಬ ಎರಡು ಸ್ಥಳಗಳಲ್ಲಿ ಮಾತ್ರ ನಡೆಸಬಹುದಾಗಿದೆ ಎಂದು ಪೊಲೀಸರು ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ ದೇಶಕ್ಕೆ ಮುಜುಗರ: ತಡೆಯಾಜ್ಞೆ ಕೋರಿದ ದೆಹಲಿ ಪೊಲೀಸರು

ಕಳೆದ ವರ್ಷ ಸೆಪ್ಟೆಂಬರ್‌ನ ಡಿಡಿಎಂಎ ಅಧಿಸೂಚನೆ ಈಗ ಜನವರಿ 31 ರವರೆಗೆ ವಿಸ್ತರಿಸಲ್ಪಟ್ಟಿದೆ, ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ರೀತಿಯ ರಾಜಕೀಯ ಸಭೆಗಳಿಗೆ ಅನುಮತಿ ಇಲ್ಲ ಎಂದು ಪೊಲೀಸರು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಎಎಪಿ ಶಾಸಕರಾದ ರಾಘವ್ ಮತ್ತು ಅತೀಶಿ, 2020 ರ ಡಿಸೆಂಬರ್ 13 ರಂದು ಅಮಿತ್‌ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್‌ ಬೈಜಾಲ್ ನಿವಾಸಗಳ ಹೊರಗೆ ’ಧರಣಿ’ ನಡೆಸಲು ಬಯಸಿದ್ದರು, ಆದರೆ ಅವರಿಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿಯಿಲ್ಲದೆ ಎರಡು ಪ್ರದೇಶಗಳಲ್ಲಿ ಪ್ರತಿಭಟಿಸಲು ಯತ್ನಿಸಿದ್ದಕ್ಕಾಗಿ ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

ಅಮಿತ್‌ ಶಾ ಮತ್ತು ಬೈಜಾಲ್ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಬೇಕೆಂಬ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ ನಿರ್ಧಾರವನ್ನು ಡಿಸೆಂಬರ್ 12, 2020 ರಂದು ರದ್ದುಗೊಳಿಸಲು ಇಬ್ಬರೂ ಶಾಸಕರು ಕೋರಿದ್ದರು. 2020 ರ ಡಿಸೆಂಬರ್ 25 ರವರೆಗೆ ಡಿಡಿಎಂಎ ಆದೇಶವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ತಮ್ಮ ಮನವಿಯನ್ನು ತಿರಸ್ಕರಿಸಿದ್ದರು, ಈಗ ಇದನ್ನು 2020 ರ ಡಿಸೆಂಬರ್ 31 ರವರೆಗೆ ನಿಷೇಧಿಸಲಾಗಿದೆ. ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟಲು ರಾಷ್ಟ್ರ ರಾಜಧಾನಿಯಾದ್ಯಂತ ಎಲ್ಲಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಕಾರ್ಯಗಳು ಅಥವಾ ಇತರ ಸಭೆಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...