Homeಮುಖಪುಟ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ಅನುಮತಿಯಿಲ್ಲದೆ ಪ್ರತಿಭಟಿಸಲು ಯತ್ನಿಸಿದ್ದಾರೆಂದು ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

- Advertisement -
- Advertisement -

ರಾಜಧಾನಿಯಲ್ಲಿ ಜನವರಿ 31 ರವರೆಗೆ ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಅಡಿಯಲ್ಲಿ ನಿಷೇಧಿತ ಆದೇಶಗಳು ಸೆಂಟ್ರಲ್ ದೆಹಲಿಯಲ್ಲಿ ಜಾರಿಯಲ್ಲಿರುವುದರಿಂದ ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಎಪಿ ಶಾಸಕರಾದ ರಾಘವ್ ಛಡ್ಡಾ ಮತ್ತು ಅತೀಶಿ ಮರ್ಲೆನಾ ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗುವುದಿಲ್ಲ ಎಂದು ಎಎಪಿ ಸರ್ಕಾರ ಮತ್ತು ಪೊಲೀಸರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಜನವರಿ 31 ರವರೆಗೆ ದೆಹಲಿ ರಾಜ್ಯ ವಿಪತ್ತು ನಿವಾರಣಾ ಘಟಕವು ರಾಜಕೀಯ ಸಭೆಗಳಿಗೆ ನಿಷೇಧ ಹೇರಿದೆ ಎಂದು ಹೈಕೋರ್ಟಿಗೆ ಸಲ್ಲಿಸಲಾದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಬ್ಬರು ಎಎಪಿ ಮುಖಂಡರಿಗೆ ಅನುಮತಿ ನಿರಾಕರಿಸಿದ್ದಕ್ಕಾಗಿ ದೆಹಲಿ ಪೊಲೀಸರು ಉಲ್ಲೇಖಿಸಿರುವ ಇನ್ನೊಂದು ಕಾರಣವೆಂದರೆ, ಎರಡು ನಿವಾಸಗಳು ಇರುವ ಇಡೀ ಸೆಂಟ್ರಲ್ ದೆಹಲಿಯಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ಹೊರಡಿಸಲಾದ ನಿಷೇಧಿತ ಆದೇಶಗಳು ಜಾರಿಯಲ್ಲಿವೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಕೇಂದ್ರ ಗೃಹ ಸಚಿವರು ಮತ್ತು ಲೆಫ್ಟಿನೆಂಟ್‌‌‌ ಗವರ್ನರ್‌ ಅವರ ಮನೆಗಳ ಹೊರಗೆ ಪ್ರತಿಭಟನೆ ನಡೆಸಲು ಅನುಮತಿ ಕೋರಿ ನಿರಾಕರಿಸಿದ್ದನ್ನು ಪ್ರಶ್ನಿಸಿ ಇಬ್ಬರು ಎಎಪಿ ನಾಯಕರ ಮನವಿಗೆ ಸ್ಪಂದಿಸಿ ಪೊಲೀಸರು ಸಲ್ಲಿಸಿದ ಅಫಿಡವಿಟ್‌ನಲ್ಲಿ ಈ ಸಲ್ಲಿಕೆಗಳನ್ನು ಮಾಡಲಾಗಿದೆ.

ಈ ವಿಷಯವನ್ನು ಗುರುವಾರ ನ್ಯಾಯಮೂರ್ತಿ ಪ್ರತಿಬಾ ಎಂ. ಸಿಂಗ್ ಅವರ ಮುಂದೆ ಪಟ್ಟಿ ಮಾಡಲಾಗಿತ್ತಾಗಿದ್ದರೂ, ವಿಚಾರಣೆ ನಡೆಯಲಿಲ್ಲ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಪಟ್ಟಿ ನಿಗದಿ ಮಾಡಬೇಕೆಂದು ದೆಹಲಿ ಪೊಲೀಸರ ವಕೀಲರು ನ್ಯಾಯಾಲಯವನ್ನು ಒತ್ತಾಯಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆಗಳನ್ನು ಜಂತರ್ ಮಂತರ್ ಮತ್ತು ರಾಮ್‌ಲೀಲಾ ಮೈದಾನ ಎಂಬ ಎರಡು ಸ್ಥಳಗಳಲ್ಲಿ ಮಾತ್ರ ನಡೆಸಬಹುದಾಗಿದೆ ಎಂದು ಪೊಲೀಸರು ತಮ್ಮ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ ದೇಶಕ್ಕೆ ಮುಜುಗರ: ತಡೆಯಾಜ್ಞೆ ಕೋರಿದ ದೆಹಲಿ ಪೊಲೀಸರು

ಕಳೆದ ವರ್ಷ ಸೆಪ್ಟೆಂಬರ್‌ನ ಡಿಡಿಎಂಎ ಅಧಿಸೂಚನೆ ಈಗ ಜನವರಿ 31 ರವರೆಗೆ ವಿಸ್ತರಿಸಲ್ಪಟ್ಟಿದೆ, ರಾಷ್ಟ್ರ ರಾಜಧಾನಿಯಲ್ಲಿ ಯಾವುದೇ ರೀತಿಯ ರಾಜಕೀಯ ಸಭೆಗಳಿಗೆ ಅನುಮತಿ ಇಲ್ಲ ಎಂದು ಪೊಲೀಸರು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದ ಎಎಪಿ ಶಾಸಕರಾದ ರಾಘವ್ ಮತ್ತು ಅತೀಶಿ, 2020 ರ ಡಿಸೆಂಬರ್ 13 ರಂದು ಅಮಿತ್‌ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್‌ ಬೈಜಾಲ್ ನಿವಾಸಗಳ ಹೊರಗೆ ’ಧರಣಿ’ ನಡೆಸಲು ಬಯಸಿದ್ದರು, ಆದರೆ ಅವರಿಗೆ ಅನುಮತಿ ನಿರಾಕರಿಸಲಾಗಿತ್ತು. ಅನುಮತಿಯಿಲ್ಲದೆ ಎರಡು ಪ್ರದೇಶಗಳಲ್ಲಿ ಪ್ರತಿಭಟಿಸಲು ಯತ್ನಿಸಿದ್ದಕ್ಕಾಗಿ ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು.

ಅಮಿತ್‌ ಶಾ ಮತ್ತು ಬೈಜಾಲ್ ನಿವಾಸಗಳ ಹೊರಗೆ ಪ್ರತಿಭಟನೆ ನಡೆಸಬೇಕೆಂಬ ಮನವಿಯನ್ನು ದೆಹಲಿ ಪೊಲೀಸರು ತಿರಸ್ಕರಿಸಿದ ನಿರ್ಧಾರವನ್ನು ಡಿಸೆಂಬರ್ 12, 2020 ರಂದು ರದ್ದುಗೊಳಿಸಲು ಇಬ್ಬರೂ ಶಾಸಕರು ಕೋರಿದ್ದರು. 2020 ರ ಡಿಸೆಂಬರ್ 25 ರವರೆಗೆ ಡಿಡಿಎಂಎ ಆದೇಶವನ್ನು ಉಲ್ಲೇಖಿಸಿ ದೆಹಲಿ ಪೊಲೀಸರು ತಮ್ಮ ಮನವಿಯನ್ನು ತಿರಸ್ಕರಿಸಿದ್ದರು, ಈಗ ಇದನ್ನು 2020 ರ ಡಿಸೆಂಬರ್ 31 ರವರೆಗೆ ನಿಷೇಧಿಸಲಾಗಿದೆ. ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟಲು ರಾಷ್ಟ್ರ ರಾಜಧಾನಿಯಾದ್ಯಂತ ಎಲ್ಲಾ ಸಾಮಾಜಿಕ, ಶೈಕ್ಷಣಿಕ, ಕ್ರೀಡೆ, ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಕಾರ್ಯಗಳು ಅಥವಾ ಇತರ ಸಭೆಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ರೈತ ಹೋರಾಟದ ತೀವ್ರ ಒತ್ತಡಕ್ಕೆ ಸಿಲುಕಿದ ಹರಿಯಾಣ ಸರ್ಕಾರ; ಎಲ್ಲ ಶಾಸಕರು ದೆಹಲಿಗೆ ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...