Homeಮುಖಪುಟಅಂತರಂಗದ ದನಿ ಇದು: 'ಚಹರೆಗಳೆಂದರೆ ಗಾಯಗಳೂ ಹೌದು' ಪುಸ್ತಕ ಲೋಕಾರ್ಪಣೆ

ಅಂತರಂಗದ ದನಿ ಇದು: ‘ಚಹರೆಗಳೆಂದರೆ ಗಾಯಗಳೂ ಹೌದು’ ಪುಸ್ತಕ ಲೋಕಾರ್ಪಣೆ

ಪುಸ್ತಕದ ಶೀರ್ಷಿಕೆ ಬಹಳ ಅರ್ಥಗರ್ಭಿತವಾಗಿದೆ. ಚಹರೆ ಎಂದರೆ ಗುರುತಿಸುವಿಕೆ, ಅಸ್ತಿತ್ವ, ರೂಪುರೇಷೆ, ಸ್ವರೂಪ ಇತ್ಯಾದಿ ಅರ್ಥಗಳು ಬರುತ್ತವೆ. ಆದರೆ ಪ್ರಭಾಕರ್‌ರವರು ಅದಕ್ಕೆ ಗಾಯಗಳೂ ಹೌದು ಎಂಬ ಹೊಸ ಅರ್ಥವನ್ನು ನೀಡಿದ್ದಾರೆ.

- Advertisement -
- Advertisement -

ಸಮುದಾಯಗಳ ಅಧ್ಯಯನವನ್ನು ಯಾವ ಕ್ರಮದಲ್ಲಿ ನೋಡಬೇಕು, ಅದರ ಹಿನ್ನೆಲೆಯೇನು, ಚರಿತ್ರೆಯೇನು, ಸಾಂಸ್ಕೃತಿಕ ಮಹತ್ವವೇನು, ಅದರ ಅನನ್ಯತೆಯೇನು, ಅದನ್ನು ಉಳಿಸಬೇಕಿರುವ ಬಗೆಯೇನು ಎಂಬುದನ್ನು ಸಾಧ್ಯಂತವಾಗಿ ವಿವರಿಸುವ ಕುರಿತು ಮಹತ್ವ ಪುಸ್ತಕವೊಂದು ಕನ್ನಡ ಲೋಕಕ್ಕೆ ಲಭಿಸಿದೆ ಎಂದು ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಹಿ ಚಿ ಬೋರಲಿಂಗಯ್ಯ ಅಭಿಪ್ರಾಯಪಟ್ಟರು.

ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿರುವ, ಹಂಪಿ ವಿಶ್ವವಿದ್ಯಾಲಯದ ಪ್ರೊ. ಎ.ಎಸ್ ಪ್ರಭಾಕರ ಅವರ “ಚಹರೆಗಳೆಂದರೆ ಗಾಯಗಳೂ ಹೌದು” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬುಡಕಟ್ಟುಗಳ ಕುರಿತು ಸಮಗ್ರ ವಿಚಾರಗಳು ಮತ್ತು ಪರಿಪೂರ್ಣ ದೃಷ್ಟಿಕೋನಕ್ಕಾಗಿ ಈ ಪುಸ್ತಕ ಓದಬೇಕು. ಇದರಿಂದ ಸಾಮಾಜಿಕ ಅಧ್ಯಯನಕ್ಕೆ ಹೊಸ ದಾರಿ ಸಿಗುತ್ತದೆ ಎಂದರು.

ನಮ್ಮ ಗ್ರಾಮೀಣ ಜನಪದ ಸಂಸ್ಕೃತಿ ಮತ್ತು ಅರಣ್ಯ ಬುಡಕಟ್ಟು ಸಂಸ್ಕೃತಿಗಿಂತ ಅಲೆಮಾರಿ ಸಂಸ್ಕೃತಿ ಭಿನ್ನವಾದ ಸಂಸ್ಕ್ರತಿಯಾಗಿದೆ. ಅದು ನಿರಂತರ ಪಯಣದ ಜೊತೆ ಅಪಾರವಾದ ಜ್ಞಾನಭಂಡಾರ ತುಂಬಿಕೊಂಡ ಸಮುದಾಯ. ಭಾಷೆ ಮತ್ತು ಸಂಸ್ಕತಿಯ ನಡುವಿನ ಕೊಂಡಿಯಾಗಿ ಅದು ಕೆಲಸ ಮಾಡುತ್ತಿದೆ. ನಮ್ಮ ದೇಸಿಯ ಚಿಂತನೆ ಪಟ್ಟಭದ್ರ ಚಿಂತನೆಗೆ ಅಂಟಿಕೊಳ್ಳುವ ಕಾಲದಲ್ಲಿ ಸಂಸ್ಕೃತಿ ಅಂದರೆ ಹೀಗಿದೆ ಎಂಬುದನ್ನು ಅದೇ ಸಮುದಾಯದ ಒಳಗಿನಿಂದ ಬಂದ ಪ್ರಭಾಕರ್‌ರವರು ಹೃದಯದಿಂದ ಉಕ್ಕುವ ಸಾಹಿತ್ಯದ ರೀತಿ ಬರೆದಿದ್ದಾರೆ. ವೈಚಾರಿಕತೆ ಮತ್ತು ಪ್ರತಿಭೆಯನ್ನು ಬಸಿದು ಕಥನ ಕಟ್ಟಿದ್ದು, ಇಂದಿನ ವಿಷಮ ರಾಜಕೀಯ ಪರಿಸ್ಥಿತಿಯಲ್ಲಿ ಈ ಬರಹಗಳು ಅಗತ್ಯ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಪ್ರಶಾಂತ್ ನಾಯಕ್ ಪುಸ್ತಕದ ಬಗ್ಗೆ ಮಾತನಾಡಿ “ಈ ಪುಸ್ತಕವು ಕಥನದ ದಾಟಿಯಲ್ಲಿದೆ. ಆದರೆ ವರ್ಣನೆ ಅಲ್ಲ. ವ್ಯಾಖ್ಯಾನವೂ ಅಲ್ಲ. ಇದು ಕೇವಲ ವಿಮರ್ಶೆ ಅಲ್ಲ ಆದರೆ ಎಚ್ಚರ, ಪ್ರಜ್ಞೆಯನ್ನು ಒಳಗೊಂಡಿದೆ. ಕಾವ್ಯ ಅಲ್ಲ, ಕಥನ ಅಲ್ಲ, ಎಲ್ಲವೂ ಹೌದು, ಎಲ್ಲಾ ಲಕ್ಷಣಗಳನ್ನು ಒಳಗೊಂಡಿರುವ ವಿಶಿಷ್ಟ ಕೃತಿ” ಎಂದರು.

ಪುಸ್ತಕದ ಶೀರ್ಷಿಕೆ ಬಹಳ ಅರ್ಥಗರ್ಭಿತವಾಗಿದೆ. ಚಹರೆ ಎಂದರೆ ಗುರುತಿಸುವಿಕೆ, ಅಸ್ತಿತ್ವ, ರೂಪುರೇಷೆ, ಸ್ವರೂಪ ಇತ್ಯಾದಿ ಅರ್ಥಗಳು ಬರುತ್ತವೆ. ಆದರೆ ಪ್ರಭಾಕರ್‌ರವರು ಅದಕ್ಕೆ ಗಾಯಗಳೂ ಹೌದು ಎಂಬ ಹೊಸ ಅರ್ಥವನ್ನು ನೀಡಿದ್ದಾರೆ. ಅಂತರಂಗದ ದನಿ ಇದು. ಅಂದರೆ ಜನಸಮುದಾಯಗಳ ಸಹಜವಾದ ಬದುಕು ಹತ್ತಿಕ್ಕಲ್ಪಟ್ಟಿದೆ. ಹಾಗಾದರೆ ಈ ಗಾಯ ಮಾಡಿದವರು ಯಾರು? ನಾವು, ಅಂದರೆ ‘ನಾಗರಿಕ, ಆಧುನಿಕ ಎಂದು ಕರೆಸಿಕೊಳ್ಳುವವರ ಅದಕ್ಕೆ ಕಾರಣ ಎನ್ನುವ ಎಚ್ಚರದಿಂದ, ಆತ್ಮಾವಲೋಕನ ಈ ಕೃತಿಯಲ್ಲಿದೆ. ಇಲ್ಲಿ ಅವರ ನೆಲಮೂಲದ ಪ್ರಜ್ಞೆ ಇದೆ. ನಿಜದ ಮಣ್ಣಿನ ಮಕ್ಕಳು ಅವರು ಎಂಬ ದೃಡೀಕರಣವಿದೆ. ಇದು ಗಾಯಗಳು ಹೌದು ಎನ್ನುತ್ತಿರುವಾಗ ಅವರು ಅನುಸಂಧಾನ ಮಾಡುತ್ತಿದ್ದಾರೆ ಎಂದರು.

ಸಮುದಾಯದ ಈ ಗಾಯಗಳಿಗೆ ಔಷಧೋಪಚಾರ ಮಾಡಲು ಯಾರೂ ಮುಂದಾಗಿಲ್ಲ. ಅದರ ಪ್ರಯತ್ನವೇ ಈ ಅಧ್ಯಯನ ಪುಸ್ತಕವಾಗಿದೆ. ಇದೊಂದು ಕೇವಲ ಪುಸ್ತಕವಲ್ಲ. ಪುಸ್ತಕ ಬೇರೆ, ಕಲಾಕೃತಿ ಬೇರೆ. ಸಂಸ್ಕ್ರತಿ ಕಥನ ಕೃತಿಯೊಂದು ಕಲಾಕೃತಿಯಾಗುವ ಪರಿ ಲೇಖಕನ ಬದ್ಧತೆಯ ಮೇಲೆ ನಿಂತಿರುತ್ತದೆ. ಅದನ್ನು ಎ.ಎಸ್ ಪ್ರಭಾಕರ್ ಇಲ್ಲಿ ನಿರೂಪಿಸಿದ್ದಾರೆ ಎಂದರು.

ಸಬಾಲ್ಟ್ರನ್ ಸ್ಟಡಿ, ಸಂಸ್ಕ್ರತಿಯ ಅಧ್ಯಯನ ಕೇವಲ ಘೋಷಣೆಗಳಾಗಿರುವ ಸಂದರ್ಭದಲ್ಲಿ ನಮ್ಮ ವಿಶ್ವ ವಿದ್ಯಾಲಯಗಳ ಸಮುದಾಯ ಅಧ್ಯಯನ ವಿಧಾನದಲ್ಲಿಯೇ ಸಮಸ್ಯೆಯಿದೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ ಎ.ಎಸ್ ಪ್ರಭಾಕರ್‌ರವರ ಶ್ರಮ ಮತ್ತು ಬದ್ಧತೆಯಿಂದ ಈ ಪುಸ್ತಕವು ಸಮುದಾಯ ಕಥನಗಳು ಸಾರ್ಥಕತೆಯಾಗುವುದನ್ನು ನಿರೂಪಿಸಿವೆ. ಇಲ್ಲಿ ಸಮುದಾಯಗಳ ಕುರಿತು ನೆಹರು, ಅಂಬೇಡ್ಕರ್, ಮಹಾಶ್ವೇತಾದೇವಿಯವರ ಚಿಂತನೆಗಳಿವೆ ಎಂದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ಜಿ. ರಮೇಶ್ ಮತ್ತು ಜೇನುಕುರುಬರ ಸೋಮಣ್ಣ ಮಾತನಾಡಿದರು. ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷರಾದ ಡಿ ಎಂ ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಲೇಖಕರಾದ ಡಾ. ಎ ಎಸ್ ಪ್ರಭಾಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜೇನುಕುರುಬರ ಸೋಮಣ್ಣನವರಿಗೆ ಸನ್ಮಾನ ಮಾಡಲಾಯಿತು.

ಪುಸ್ತಕ ಕೊಳ್ಳಲು ಬಯಸುವವರು ಕೆಳಗಿನ ಕೊಂಡಿ ಬಳಸಿ

ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು
ಲೇಖಕರು- ಡಾ.ಎ.ಎಸ್.ಪ್ರಭಾಕರ್
ಬೆಲೆ- 250/-
ಗೂಗಲ್ ಪೆ- 9880302817

https://bit.ly/3ltoEKN


ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...