Homeಮುಖಪುಟಅಂತರಂಗದ ದನಿ ಇದು: 'ಚಹರೆಗಳೆಂದರೆ ಗಾಯಗಳೂ ಹೌದು' ಪುಸ್ತಕ ಲೋಕಾರ್ಪಣೆ

ಅಂತರಂಗದ ದನಿ ಇದು: ‘ಚಹರೆಗಳೆಂದರೆ ಗಾಯಗಳೂ ಹೌದು’ ಪುಸ್ತಕ ಲೋಕಾರ್ಪಣೆ

ಪುಸ್ತಕದ ಶೀರ್ಷಿಕೆ ಬಹಳ ಅರ್ಥಗರ್ಭಿತವಾಗಿದೆ. ಚಹರೆ ಎಂದರೆ ಗುರುತಿಸುವಿಕೆ, ಅಸ್ತಿತ್ವ, ರೂಪುರೇಷೆ, ಸ್ವರೂಪ ಇತ್ಯಾದಿ ಅರ್ಥಗಳು ಬರುತ್ತವೆ. ಆದರೆ ಪ್ರಭಾಕರ್‌ರವರು ಅದಕ್ಕೆ ಗಾಯಗಳೂ ಹೌದು ಎಂಬ ಹೊಸ ಅರ್ಥವನ್ನು ನೀಡಿದ್ದಾರೆ.

- Advertisement -
- Advertisement -

ಸಮುದಾಯಗಳ ಅಧ್ಯಯನವನ್ನು ಯಾವ ಕ್ರಮದಲ್ಲಿ ನೋಡಬೇಕು, ಅದರ ಹಿನ್ನೆಲೆಯೇನು, ಚರಿತ್ರೆಯೇನು, ಸಾಂಸ್ಕೃತಿಕ ಮಹತ್ವವೇನು, ಅದರ ಅನನ್ಯತೆಯೇನು, ಅದನ್ನು ಉಳಿಸಬೇಕಿರುವ ಬಗೆಯೇನು ಎಂಬುದನ್ನು ಸಾಧ್ಯಂತವಾಗಿ ವಿವರಿಸುವ ಕುರಿತು ಮಹತ್ವ ಪುಸ್ತಕವೊಂದು ಕನ್ನಡ ಲೋಕಕ್ಕೆ ಲಭಿಸಿದೆ ಎಂದು ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಹಿ ಚಿ ಬೋರಲಿಂಗಯ್ಯ ಅಭಿಪ್ರಾಯಪಟ್ಟರು.

ಗೌರಿ ಮೀಡಿಯಾ ಟ್ರಸ್ಟ್ ಪ್ರಕಟಿಸಿರುವ, ಹಂಪಿ ವಿಶ್ವವಿದ್ಯಾಲಯದ ಪ್ರೊ. ಎ.ಎಸ್ ಪ್ರಭಾಕರ ಅವರ “ಚಹರೆಗಳೆಂದರೆ ಗಾಯಗಳೂ ಹೌದು” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬುಡಕಟ್ಟುಗಳ ಕುರಿತು ಸಮಗ್ರ ವಿಚಾರಗಳು ಮತ್ತು ಪರಿಪೂರ್ಣ ದೃಷ್ಟಿಕೋನಕ್ಕಾಗಿ ಈ ಪುಸ್ತಕ ಓದಬೇಕು. ಇದರಿಂದ ಸಾಮಾಜಿಕ ಅಧ್ಯಯನಕ್ಕೆ ಹೊಸ ದಾರಿ ಸಿಗುತ್ತದೆ ಎಂದರು.

ನಮ್ಮ ಗ್ರಾಮೀಣ ಜನಪದ ಸಂಸ್ಕೃತಿ ಮತ್ತು ಅರಣ್ಯ ಬುಡಕಟ್ಟು ಸಂಸ್ಕೃತಿಗಿಂತ ಅಲೆಮಾರಿ ಸಂಸ್ಕೃತಿ ಭಿನ್ನವಾದ ಸಂಸ್ಕ್ರತಿಯಾಗಿದೆ. ಅದು ನಿರಂತರ ಪಯಣದ ಜೊತೆ ಅಪಾರವಾದ ಜ್ಞಾನಭಂಡಾರ ತುಂಬಿಕೊಂಡ ಸಮುದಾಯ. ಭಾಷೆ ಮತ್ತು ಸಂಸ್ಕತಿಯ ನಡುವಿನ ಕೊಂಡಿಯಾಗಿ ಅದು ಕೆಲಸ ಮಾಡುತ್ತಿದೆ. ನಮ್ಮ ದೇಸಿಯ ಚಿಂತನೆ ಪಟ್ಟಭದ್ರ ಚಿಂತನೆಗೆ ಅಂಟಿಕೊಳ್ಳುವ ಕಾಲದಲ್ಲಿ ಸಂಸ್ಕೃತಿ ಅಂದರೆ ಹೀಗಿದೆ ಎಂಬುದನ್ನು ಅದೇ ಸಮುದಾಯದ ಒಳಗಿನಿಂದ ಬಂದ ಪ್ರಭಾಕರ್‌ರವರು ಹೃದಯದಿಂದ ಉಕ್ಕುವ ಸಾಹಿತ್ಯದ ರೀತಿ ಬರೆದಿದ್ದಾರೆ. ವೈಚಾರಿಕತೆ ಮತ್ತು ಪ್ರತಿಭೆಯನ್ನು ಬಸಿದು ಕಥನ ಕಟ್ಟಿದ್ದು, ಇಂದಿನ ವಿಷಮ ರಾಜಕೀಯ ಪರಿಸ್ಥಿತಿಯಲ್ಲಿ ಈ ಬರಹಗಳು ಅಗತ್ಯ ಎಂದರು.

ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಪ್ರಶಾಂತ್ ನಾಯಕ್ ಪುಸ್ತಕದ ಬಗ್ಗೆ ಮಾತನಾಡಿ “ಈ ಪುಸ್ತಕವು ಕಥನದ ದಾಟಿಯಲ್ಲಿದೆ. ಆದರೆ ವರ್ಣನೆ ಅಲ್ಲ. ವ್ಯಾಖ್ಯಾನವೂ ಅಲ್ಲ. ಇದು ಕೇವಲ ವಿಮರ್ಶೆ ಅಲ್ಲ ಆದರೆ ಎಚ್ಚರ, ಪ್ರಜ್ಞೆಯನ್ನು ಒಳಗೊಂಡಿದೆ. ಕಾವ್ಯ ಅಲ್ಲ, ಕಥನ ಅಲ್ಲ, ಎಲ್ಲವೂ ಹೌದು, ಎಲ್ಲಾ ಲಕ್ಷಣಗಳನ್ನು ಒಳಗೊಂಡಿರುವ ವಿಶಿಷ್ಟ ಕೃತಿ” ಎಂದರು.

ಪುಸ್ತಕದ ಶೀರ್ಷಿಕೆ ಬಹಳ ಅರ್ಥಗರ್ಭಿತವಾಗಿದೆ. ಚಹರೆ ಎಂದರೆ ಗುರುತಿಸುವಿಕೆ, ಅಸ್ತಿತ್ವ, ರೂಪುರೇಷೆ, ಸ್ವರೂಪ ಇತ್ಯಾದಿ ಅರ್ಥಗಳು ಬರುತ್ತವೆ. ಆದರೆ ಪ್ರಭಾಕರ್‌ರವರು ಅದಕ್ಕೆ ಗಾಯಗಳೂ ಹೌದು ಎಂಬ ಹೊಸ ಅರ್ಥವನ್ನು ನೀಡಿದ್ದಾರೆ. ಅಂತರಂಗದ ದನಿ ಇದು. ಅಂದರೆ ಜನಸಮುದಾಯಗಳ ಸಹಜವಾದ ಬದುಕು ಹತ್ತಿಕ್ಕಲ್ಪಟ್ಟಿದೆ. ಹಾಗಾದರೆ ಈ ಗಾಯ ಮಾಡಿದವರು ಯಾರು? ನಾವು, ಅಂದರೆ ‘ನಾಗರಿಕ, ಆಧುನಿಕ ಎಂದು ಕರೆಸಿಕೊಳ್ಳುವವರ ಅದಕ್ಕೆ ಕಾರಣ ಎನ್ನುವ ಎಚ್ಚರದಿಂದ, ಆತ್ಮಾವಲೋಕನ ಈ ಕೃತಿಯಲ್ಲಿದೆ. ಇಲ್ಲಿ ಅವರ ನೆಲಮೂಲದ ಪ್ರಜ್ಞೆ ಇದೆ. ನಿಜದ ಮಣ್ಣಿನ ಮಕ್ಕಳು ಅವರು ಎಂಬ ದೃಡೀಕರಣವಿದೆ. ಇದು ಗಾಯಗಳು ಹೌದು ಎನ್ನುತ್ತಿರುವಾಗ ಅವರು ಅನುಸಂಧಾನ ಮಾಡುತ್ತಿದ್ದಾರೆ ಎಂದರು.

ಸಮುದಾಯದ ಈ ಗಾಯಗಳಿಗೆ ಔಷಧೋಪಚಾರ ಮಾಡಲು ಯಾರೂ ಮುಂದಾಗಿಲ್ಲ. ಅದರ ಪ್ರಯತ್ನವೇ ಈ ಅಧ್ಯಯನ ಪುಸ್ತಕವಾಗಿದೆ. ಇದೊಂದು ಕೇವಲ ಪುಸ್ತಕವಲ್ಲ. ಪುಸ್ತಕ ಬೇರೆ, ಕಲಾಕೃತಿ ಬೇರೆ. ಸಂಸ್ಕ್ರತಿ ಕಥನ ಕೃತಿಯೊಂದು ಕಲಾಕೃತಿಯಾಗುವ ಪರಿ ಲೇಖಕನ ಬದ್ಧತೆಯ ಮೇಲೆ ನಿಂತಿರುತ್ತದೆ. ಅದನ್ನು ಎ.ಎಸ್ ಪ್ರಭಾಕರ್ ಇಲ್ಲಿ ನಿರೂಪಿಸಿದ್ದಾರೆ ಎಂದರು.

ಸಬಾಲ್ಟ್ರನ್ ಸ್ಟಡಿ, ಸಂಸ್ಕ್ರತಿಯ ಅಧ್ಯಯನ ಕೇವಲ ಘೋಷಣೆಗಳಾಗಿರುವ ಸಂದರ್ಭದಲ್ಲಿ ನಮ್ಮ ವಿಶ್ವ ವಿದ್ಯಾಲಯಗಳ ಸಮುದಾಯ ಅಧ್ಯಯನ ವಿಧಾನದಲ್ಲಿಯೇ ಸಮಸ್ಯೆಯಿದೆಯೇ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ ಎ.ಎಸ್ ಪ್ರಭಾಕರ್‌ರವರ ಶ್ರಮ ಮತ್ತು ಬದ್ಧತೆಯಿಂದ ಈ ಪುಸ್ತಕವು ಸಮುದಾಯ ಕಥನಗಳು ಸಾರ್ಥಕತೆಯಾಗುವುದನ್ನು ನಿರೂಪಿಸಿವೆ. ಇಲ್ಲಿ ಸಮುದಾಯಗಳ ಕುರಿತು ನೆಹರು, ಅಂಬೇಡ್ಕರ್, ಮಹಾಶ್ವೇತಾದೇವಿಯವರ ಚಿಂತನೆಗಳಿವೆ ಎಂದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ಜಿ. ರಮೇಶ್ ಮತ್ತು ಜೇನುಕುರುಬರ ಸೋಮಣ್ಣ ಮಾತನಾಡಿದರು. ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷರಾದ ಡಿ ಎಂ ನರಸಿಂಹಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಲೇಖಕರಾದ ಡಾ. ಎ ಎಸ್ ಪ್ರಭಾಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಜೇನುಕುರುಬರ ಸೋಮಣ್ಣನವರಿಗೆ ಸನ್ಮಾನ ಮಾಡಲಾಯಿತು.

ಪುಸ್ತಕ ಕೊಳ್ಳಲು ಬಯಸುವವರು ಕೆಳಗಿನ ಕೊಂಡಿ ಬಳಸಿ

ಚಹರೆಗಳೆಂದರೆ ಗಾಯಗಳೂ ಹೌದು -ಸಮುದಾಯ ಅಧ್ಯಯನ ಕುರಿತ ಕಥನಗಳು
ಲೇಖಕರು- ಡಾ.ಎ.ಎಸ್.ಪ್ರಭಾಕರ್
ಬೆಲೆ- 250/-
ಗೂಗಲ್ ಪೆ- 9880302817

https://bit.ly/3ltoEKN


ಇದನ್ನೂ ಓದಿ: ಸಭೆ ಸಮಾರಂಭಗಳಲ್ಲಿ ಪುಸ್ತಕ ಉಡುಗೊರೆ ಕೊಡಲು ಆದೇಶ; ಇಲ್ಲಿವೆ ಕೆಲವು ನಿರ್ದಿಷ್ಟ ಸಲಹೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....