Homeಕರ್ನಾಟಕಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ ನಿರ್ಧಾರಕ್ಕೆ ಹಲವರಿಂದ ವಿರೋಧ

- Advertisement -
- Advertisement -

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ’ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರು ತಜ್ಞರ ಸಮಿತಿಯನ್ನು ರಚಿಸಿದ್ದಾರೆ.

ಸಂಘಪರಿವಾರ ಹಿನ್ನೆಲೆಯ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದು ಇದೀಗ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ.ಗುರುರಾಜ ಕರಜಗಿ ಅಧ್ಯಕ್ಷತೆ ವಹಿಸಿರುವ ಸಮಿತಿಯಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಭಾಲ್ಕಿಯ ಶ್ರೀ ಹಿರೇಮಠ ಸ್ವಾಮೀಜಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ರುದ್ರೇಶ್, ಫಾದರ್ ಫ್ರಾನ್ಸಿಸ್, ಎನ್.ಬಿ. ಪಾಟೀಲ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಪ್ರಮುಖರು ಇದ್ದಾರೆ.

ಶುಕ್ರವಾರ ಕಲಬುರಗಿಯ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು,ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಕಾರ್ಯತಂತ್ರಗಳ ಕುರಿತು ಸದಸ್ಯರು ಚರ್ಚಿಸಿದರು. ಈ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿತ್ತು

‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೆಕೆಆರ್‌ಡಿಬಿಯು ಗಮನ ನೀಡಲಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಪ್ರಮುಖ್ಯತೆ ನೀಡಲಾಗಿದೆ.

ಕರಜಗಿ ಅಧ್ಯಕ್ಷತೆಗೆ ವಿರೋಧ:

ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದನ್ನು ಶಿಕ್ಷಣ ತಜ್ಞರಾದ ಬಿ. ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಲ್ಯಾಣಕರ್ನಾಟಕದ (ಹೈದರಾಬಾದ್ ಕರ್ನಾಟಕ) ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆರೆಸ್ಸೆಸ್ ಸಿದ್ಧಾಂತದ ಪರವಿರುವ ಗುರುರಾಜ್ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಕರ್ಜಗಿ ಯಾವ ಬಗೆಯಲ್ಲಿ ಶಿಕ್ಷಣ ತಜ್ಞರು? ಹೈದರಾಬಾದ್ ಕರ್ನಾಟಕದ ಸಮಾಜೋ-ಆರ್ಥಿಕ-ರಾಜಕೀಯ ಬಿಕ್ಕಟ್ಟಿನ ಕುರಿತು ಇವರಿಗೆ ಯಾವ ಮಾಹಿತಿ ಇದೆ? ಇವರ ಅರ್ಹತೆ ಏನು? ಯಾವ ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

“ಇದ್ಯಾವುದೂ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಲ್ಲ. ಆರೆಸ್ಸೆಸ್ ನ ಕರ್ಜಗಿ ಮಾತ್ರ ಮುಖ್ಯ. ಇನ್ನು ಈ ಸಮಿತಿಯ ಇತರೇ ಸದಸ್ಯರಲ್ಲಿ ಬಹುತೇಕರು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಲ್ಲಿ ಉದ್ಯೋಗದಲ್ಲಿರುವವರು. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದು ಗೊತ್ತಿತ್ತು. ಆದರೆ, ನೈತಿಕವಾಗಿ ದಿವಾಳಿಯಾಗಿರುವುದಾಗಿ ಸಾಬೀತುಪಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪತ್ರಕರ್ತರಾದ ಹರ್ಷ ಕುಗ್ವೆ ಅವರು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, “ಈ ಗುರುರಾಜ ಕರ್ಜಗಿ ಒಬ್ಬ ಶಿಕ್ಷಣ ತಜ್ಞ ಎನ್ನುವವರು ಮುಟ್ಟಾಳರು. ಅವನಂತ ಒಬ್ಬ ಮೌಡ್ಯ ಪ್ರತಿಪಾದಕ ಮತ್ತು ಸನಾತನಿಯನ್ನ ಜವಾಬ್ದಾರಿಯುತ ಹುದ್ದೆಗೆ ನೇಮಿಸಿರುವುದು ಸರ್ಕಾರದ ಆತ್ಮಹತ್ಯಾಕಾರಿ ಕೆಲಸ. ಕರ್ಜಗಿಯಂತ ಅವಕಾಶವಾದಿ ಕನ್ನಿಂಗ್ ಚೆಡ್ಡಿಜೀವಿಗಳಿಗೆ ಮಾನ್ಯತೆ ನೀಡುವಂತ ಅದಿಕಾರಿಗಳಿಗೆ ತಲೆಯಲ್ಲಿ ಬುದ್ದಿ ಅಂತೂ ಇರಲಿಕ್ಕಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ಶಿಕ್ಷಣವನ್ನು ಕುಲಗಡೆಸುವ ಕೆಲಸ ಬರೀ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದಲ್ಲ ಈಗಲೂ ಮುಂದುವರೆದಿದೆ.‌ ಶಿಕ್ಷಣ ಕ್ಚೇತ್ರದಲ್ಲಿ ಹಲವಾರು ದಶಕಗಳಿಂದ ಹಗಲಿರುಳು ಕೆಲಸ ಮಾಡುತ್ತಿರುವ ಪ್ರೊ.‌ ನಿರಂಜನಾರಾದ್ಯರಂತವರು ಇರುವಾಗ ಈ ಪಡಪೋಸಿ ಕರ್ಜಗಿ ಯಾಕೆ ಬೇಕಿತ್ತು? ಮಾನ್ಯ ಸಿ ಎಂ ಸಿದ್ದರಾಮಯ್ಯ ಅವರು ಈ ಕರ್ಜಗಿ ತಮಿತಿಯನ್ಜು ಕೂಡಲೇ ಉಚ್ಚಾಟಿಸಬೇಕು. ಹೊಸ ಸಮಿತಿ ರಚಿಸಬೇಕು” ಎಂದು ಹರ್ಷ ಆಗ್ರಹಿಸಿದ್ದಾರೆ.

ವಿದ್ಯಾರ್ಥಿ ಹೋರಾಟಗಾರ ಪಿ. ನಂದಕುಮಾರ್ ಅವರು ಪ್ರತಿಕ್ರಿಯಿಸಿ,  “ಗುರುರಾಜ ಕರ್ಜಿಗಿಯವರು ಸನಾತನಿ ಸಂತತಿಯ ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರೀಕರಿಗೆ ತಿಳಿದಿರುವಂತದ್ದೆ. ಅವರು ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು ಕೇಶವ ಕೃಪೆಯಿಂದ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಮೂಲಕವೇ ಅವರು ಇವತ್ತು ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಡರನ್ನಾಗಿಸುವಲ್ಲಿ ನಿಸ್ಸಿಮರು. ಇಂತಹ ವ್ಯಕ್ತಿಯನ್ನು ಅದರಲ್ಲೂ ಮುಖ್ಯವಾಗಿ ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣ ಸಮಿತಿಗೆ ಸರ್ಕಾರ ಈ ಮನುವಾದದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದು” ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕ ಸರ್ಕಾರವು ಗುರುರಾಜ ಕರಜಗಿಯವರ ನೇಮಕ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತೀರಿವ ಈ ರೀತಿಯ ನಿರ್ಧಾರ ಕಾರಣಕ್ಕೆ ನಮ್ಮಂತ ಬಹುತೇಕರು ಕರ್ನಾಟಕ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕತೆ ಕುಸಿತವನ್ನು ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆ. ಸಮಾಜದಲ್ಲಿ ಸೂಕ್ಷ್ಮ ಮತ್ತು ತೀಕ್ಷ್ಣವಾದ ರಾಜಕೀಯ ಪ್ರಜ್ಞೆಯನ್ನು ಬಿಟ್ಟು ಕೊಡುವುದು ಬಹು ಘೋರ ದುರಂತಕ್ಕೆಡೆ ಮಾಡಿಕೊಡುತ್ತದೆ ಎನ್ನುವುದು ಆಳುವ ಸರ್ಕಾರ ಅರಿತುಕೊಳ್ಳಬೇಕು” ಎಂದು ಅವರು ಕಾಂಗ್ರೆಸ್‌ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆಯ ನೀತಿಯನ್ನು ಹಾಗೂ ಕವಿರಾಜ ಮಾರ್ಗಕಾರ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಹೈದ್ರಾಬಾದ್ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗಿರುವುದು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವಾಗಿದೆ ಅಷ್ಟೇ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಿಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ,ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತು” ಎಂದು ನಂದಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...