Homeಕರ್ನಾಟಕಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ ನಿರ್ಧಾರಕ್ಕೆ ಹಲವರಿಂದ ವಿರೋಧ

- Advertisement -
- Advertisement -

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ’ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರು ತಜ್ಞರ ಸಮಿತಿಯನ್ನು ರಚಿಸಿದ್ದಾರೆ.

ಸಂಘಪರಿವಾರ ಹಿನ್ನೆಲೆಯ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದು ಇದೀಗ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ.ಗುರುರಾಜ ಕರಜಗಿ ಅಧ್ಯಕ್ಷತೆ ವಹಿಸಿರುವ ಸಮಿತಿಯಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಭಾಲ್ಕಿಯ ಶ್ರೀ ಹಿರೇಮಠ ಸ್ವಾಮೀಜಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ರುದ್ರೇಶ್, ಫಾದರ್ ಫ್ರಾನ್ಸಿಸ್, ಎನ್.ಬಿ. ಪಾಟೀಲ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಪ್ರಮುಖರು ಇದ್ದಾರೆ.

ಶುಕ್ರವಾರ ಕಲಬುರಗಿಯ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು,ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಕಾರ್ಯತಂತ್ರಗಳ ಕುರಿತು ಸದಸ್ಯರು ಚರ್ಚಿಸಿದರು. ಈ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿತ್ತು

‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೆಕೆಆರ್‌ಡಿಬಿಯು ಗಮನ ನೀಡಲಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಪ್ರಮುಖ್ಯತೆ ನೀಡಲಾಗಿದೆ.

ಕರಜಗಿ ಅಧ್ಯಕ್ಷತೆಗೆ ವಿರೋಧ:

ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದನ್ನು ಶಿಕ್ಷಣ ತಜ್ಞರಾದ ಬಿ. ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಲ್ಯಾಣಕರ್ನಾಟಕದ (ಹೈದರಾಬಾದ್ ಕರ್ನಾಟಕ) ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆರೆಸ್ಸೆಸ್ ಸಿದ್ಧಾಂತದ ಪರವಿರುವ ಗುರುರಾಜ್ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಕರ್ಜಗಿ ಯಾವ ಬಗೆಯಲ್ಲಿ ಶಿಕ್ಷಣ ತಜ್ಞರು? ಹೈದರಾಬಾದ್ ಕರ್ನಾಟಕದ ಸಮಾಜೋ-ಆರ್ಥಿಕ-ರಾಜಕೀಯ ಬಿಕ್ಕಟ್ಟಿನ ಕುರಿತು ಇವರಿಗೆ ಯಾವ ಮಾಹಿತಿ ಇದೆ? ಇವರ ಅರ್ಹತೆ ಏನು? ಯಾವ ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

“ಇದ್ಯಾವುದೂ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಲ್ಲ. ಆರೆಸ್ಸೆಸ್ ನ ಕರ್ಜಗಿ ಮಾತ್ರ ಮುಖ್ಯ. ಇನ್ನು ಈ ಸಮಿತಿಯ ಇತರೇ ಸದಸ್ಯರಲ್ಲಿ ಬಹುತೇಕರು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಲ್ಲಿ ಉದ್ಯೋಗದಲ್ಲಿರುವವರು. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದು ಗೊತ್ತಿತ್ತು. ಆದರೆ, ನೈತಿಕವಾಗಿ ದಿವಾಳಿಯಾಗಿರುವುದಾಗಿ ಸಾಬೀತುಪಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪತ್ರಕರ್ತರಾದ ಹರ್ಷ ಕುಗ್ವೆ ಅವರು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, “ಈ ಗುರುರಾಜ ಕರ್ಜಗಿ ಒಬ್ಬ ಶಿಕ್ಷಣ ತಜ್ಞ ಎನ್ನುವವರು ಮುಟ್ಟಾಳರು. ಅವನಂತ ಒಬ್ಬ ಮೌಡ್ಯ ಪ್ರತಿಪಾದಕ ಮತ್ತು ಸನಾತನಿಯನ್ನ ಜವಾಬ್ದಾರಿಯುತ ಹುದ್ದೆಗೆ ನೇಮಿಸಿರುವುದು ಸರ್ಕಾರದ ಆತ್ಮಹತ್ಯಾಕಾರಿ ಕೆಲಸ. ಕರ್ಜಗಿಯಂತ ಅವಕಾಶವಾದಿ ಕನ್ನಿಂಗ್ ಚೆಡ್ಡಿಜೀವಿಗಳಿಗೆ ಮಾನ್ಯತೆ ನೀಡುವಂತ ಅದಿಕಾರಿಗಳಿಗೆ ತಲೆಯಲ್ಲಿ ಬುದ್ದಿ ಅಂತೂ ಇರಲಿಕ್ಕಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ಶಿಕ್ಷಣವನ್ನು ಕುಲಗಡೆಸುವ ಕೆಲಸ ಬರೀ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದಲ್ಲ ಈಗಲೂ ಮುಂದುವರೆದಿದೆ.‌ ಶಿಕ್ಷಣ ಕ್ಚೇತ್ರದಲ್ಲಿ ಹಲವಾರು ದಶಕಗಳಿಂದ ಹಗಲಿರುಳು ಕೆಲಸ ಮಾಡುತ್ತಿರುವ ಪ್ರೊ.‌ ನಿರಂಜನಾರಾದ್ಯರಂತವರು ಇರುವಾಗ ಈ ಪಡಪೋಸಿ ಕರ್ಜಗಿ ಯಾಕೆ ಬೇಕಿತ್ತು? ಮಾನ್ಯ ಸಿ ಎಂ ಸಿದ್ದರಾಮಯ್ಯ ಅವರು ಈ ಕರ್ಜಗಿ ತಮಿತಿಯನ್ಜು ಕೂಡಲೇ ಉಚ್ಚಾಟಿಸಬೇಕು. ಹೊಸ ಸಮಿತಿ ರಚಿಸಬೇಕು” ಎಂದು ಹರ್ಷ ಆಗ್ರಹಿಸಿದ್ದಾರೆ.

ವಿದ್ಯಾರ್ಥಿ ಹೋರಾಟಗಾರ ಪಿ. ನಂದಕುಮಾರ್ ಅವರು ಪ್ರತಿಕ್ರಿಯಿಸಿ,  “ಗುರುರಾಜ ಕರ್ಜಿಗಿಯವರು ಸನಾತನಿ ಸಂತತಿಯ ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರೀಕರಿಗೆ ತಿಳಿದಿರುವಂತದ್ದೆ. ಅವರು ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು ಕೇಶವ ಕೃಪೆಯಿಂದ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಮೂಲಕವೇ ಅವರು ಇವತ್ತು ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಡರನ್ನಾಗಿಸುವಲ್ಲಿ ನಿಸ್ಸಿಮರು. ಇಂತಹ ವ್ಯಕ್ತಿಯನ್ನು ಅದರಲ್ಲೂ ಮುಖ್ಯವಾಗಿ ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣ ಸಮಿತಿಗೆ ಸರ್ಕಾರ ಈ ಮನುವಾದದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದು” ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕ ಸರ್ಕಾರವು ಗುರುರಾಜ ಕರಜಗಿಯವರ ನೇಮಕ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತೀರಿವ ಈ ರೀತಿಯ ನಿರ್ಧಾರ ಕಾರಣಕ್ಕೆ ನಮ್ಮಂತ ಬಹುತೇಕರು ಕರ್ನಾಟಕ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕತೆ ಕುಸಿತವನ್ನು ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆ. ಸಮಾಜದಲ್ಲಿ ಸೂಕ್ಷ್ಮ ಮತ್ತು ತೀಕ್ಷ್ಣವಾದ ರಾಜಕೀಯ ಪ್ರಜ್ಞೆಯನ್ನು ಬಿಟ್ಟು ಕೊಡುವುದು ಬಹು ಘೋರ ದುರಂತಕ್ಕೆಡೆ ಮಾಡಿಕೊಡುತ್ತದೆ ಎನ್ನುವುದು ಆಳುವ ಸರ್ಕಾರ ಅರಿತುಕೊಳ್ಳಬೇಕು” ಎಂದು ಅವರು ಕಾಂಗ್ರೆಸ್‌ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆಯ ನೀತಿಯನ್ನು ಹಾಗೂ ಕವಿರಾಜ ಮಾರ್ಗಕಾರ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಹೈದ್ರಾಬಾದ್ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗಿರುವುದು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವಾಗಿದೆ ಅಷ್ಟೇ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಿಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ,ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತು” ಎಂದು ನಂದಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...