Homeಕರ್ನಾಟಕಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರ ಸುಧಾರಣಾ ತಜ್ಞರ ಸಮಿತಿಗೆ ಸಂಘಪರಿವಾರ ಹಿನ್ನೆಲೆಯ ಕರಜಗಿ ಅಧ್ಯಕ್ಷತೆ; ಸರ್ಕಾರದ ನಿರ್ಧಾರಕ್ಕೆ ಹಲವರಿಂದ ವಿರೋಧ

- Advertisement -
- Advertisement -

ಕಲ್ಯಾಣ ಕರ್ನಾಟಕ ಪ್ರದೇಶದ ಶೈಕ್ಷಣಿಕ ಕ್ಷೇತ್ರವನ್ನು ಸುಧಾರಿಸಲು ‘ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ’ (ಕೆಕೆಆರ್‌ಡಿಬಿ) ಅಧ್ಯಕ್ಷರಾದ ಡಾ. ಅಜಯ್ ಧರಂ ಸಿಂಗ್ ಅವರು ತಜ್ಞರ ಸಮಿತಿಯನ್ನು ರಚಿಸಿದ್ದಾರೆ.

ಸಂಘಪರಿವಾರ ಹಿನ್ನೆಲೆಯ ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದು ಇದೀಗ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.

ಡಾ.ಗುರುರಾಜ ಕರಜಗಿ ಅಧ್ಯಕ್ಷತೆ ವಹಿಸಿರುವ ಸಮಿತಿಯಲ್ಲಿ ಶಾಹೀನ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಅಬ್ದುಲ್ ಖದೀರ್, ಭಾಲ್ಕಿಯ ಶ್ರೀ ಹಿರೇಮಠ ಸ್ವಾಮೀಜಿ, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಡಾ.ರುದ್ರೇಶ್, ಫಾದರ್ ಫ್ರಾನ್ಸಿಸ್, ಎನ್.ಬಿ. ಪಾಟೀಲ್ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವಾರು ಪ್ರಮುಖರು ಇದ್ದಾರೆ.

ಶುಕ್ರವಾರ ಕಲಬುರಗಿಯ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು,ಕಲ್ಯಾಣ ಕರ್ನಾಟಕ ಭಾಗದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುವ ಕಾರ್ಯತಂತ್ರಗಳ ಕುರಿತು ಸದಸ್ಯರು ಚರ್ಚಿಸಿದರು. ಈ ಪ್ರದೇಶದಲ್ಲಿನ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿತ್ತು

‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೆಕೆಆರ್‌ಡಿಬಿಯು ಗಮನ ನೀಡಲಾಗಿದ್ದು, ಶಾಲೆ ಮತ್ತು ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ, ಅರ್ಹ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿಗೆ ಪ್ರಮುಖ್ಯತೆ ನೀಡಲಾಗಿದೆ.

ಕರಜಗಿ ಅಧ್ಯಕ್ಷತೆಗೆ ವಿರೋಧ:

ಡಾ.ಗುರುರಾಜ ಕರಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವುದನ್ನು ಶಿಕ್ಷಣ ತಜ್ಞರಾದ ಬಿ. ಶ್ರೀಪಾದ್ ಭಟ್ ವಿರೋಧ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಲ್ಯಾಣಕರ್ನಾಟಕದ (ಹೈದರಾಬಾದ್ ಕರ್ನಾಟಕ) ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಆರೆಸ್ಸೆಸ್ ಸಿದ್ಧಾಂತದ ಪರವಿರುವ ಗುರುರಾಜ್ ಕರ್ಜಗಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ? ಕರ್ಜಗಿ ಯಾವ ಬಗೆಯಲ್ಲಿ ಶಿಕ್ಷಣ ತಜ್ಞರು? ಹೈದರಾಬಾದ್ ಕರ್ನಾಟಕದ ಸಮಾಜೋ-ಆರ್ಥಿಕ-ರಾಜಕೀಯ ಬಿಕ್ಕಟ್ಟಿನ ಕುರಿತು ಇವರಿಗೆ ಯಾವ ಮಾಹಿತಿ ಇದೆ? ಇವರ ಅರ್ಹತೆ ಏನು? ಯಾವ ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ್ದಾರೆ” ಎಂದು ಪ್ರಶ್ನಿಸಿದ್ದಾರೆ.

“ಇದ್ಯಾವುದೂ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಲ್ಲ. ಆರೆಸ್ಸೆಸ್ ನ ಕರ್ಜಗಿ ಮಾತ್ರ ಮುಖ್ಯ. ಇನ್ನು ಈ ಸಮಿತಿಯ ಇತರೇ ಸದಸ್ಯರಲ್ಲಿ ಬಹುತೇಕರು ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಅಲ್ಲಿ ಉದ್ಯೋಗದಲ್ಲಿರುವವರು. ಕಾಂಗ್ರೆಸ್‌ಗೆ ಯಾವುದೇ ಸಿದ್ಧಾಂತವಿಲ್ಲ ಎಂದು ಗೊತ್ತಿತ್ತು. ಆದರೆ, ನೈತಿಕವಾಗಿ ದಿವಾಳಿಯಾಗಿರುವುದಾಗಿ ಸಾಬೀತುಪಡಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಪತ್ರಕರ್ತರಾದ ಹರ್ಷ ಕುಗ್ವೆ ಅವರು ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದು, “ಈ ಗುರುರಾಜ ಕರ್ಜಗಿ ಒಬ್ಬ ಶಿಕ್ಷಣ ತಜ್ಞ ಎನ್ನುವವರು ಮುಟ್ಟಾಳರು. ಅವನಂತ ಒಬ್ಬ ಮೌಡ್ಯ ಪ್ರತಿಪಾದಕ ಮತ್ತು ಸನಾತನಿಯನ್ನ ಜವಾಬ್ದಾರಿಯುತ ಹುದ್ದೆಗೆ ನೇಮಿಸಿರುವುದು ಸರ್ಕಾರದ ಆತ್ಮಹತ್ಯಾಕಾರಿ ಕೆಲಸ. ಕರ್ಜಗಿಯಂತ ಅವಕಾಶವಾದಿ ಕನ್ನಿಂಗ್ ಚೆಡ್ಡಿಜೀವಿಗಳಿಗೆ ಮಾನ್ಯತೆ ನೀಡುವಂತ ಅದಿಕಾರಿಗಳಿಗೆ ತಲೆಯಲ್ಲಿ ಬುದ್ದಿ ಅಂತೂ ಇರಲಿಕ್ಕಿಲ್ಲ” ಎಂದು ಫೇಸ್‌ಬುಕ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

“ಶಿಕ್ಷಣವನ್ನು ಕುಲಗಡೆಸುವ ಕೆಲಸ ಬರೀ ಬಿಜೆಪಿ ಸರ್ಕಾರದಲ್ಲಿ ನಡೆದಿದ್ದಲ್ಲ ಈಗಲೂ ಮುಂದುವರೆದಿದೆ.‌ ಶಿಕ್ಷಣ ಕ್ಚೇತ್ರದಲ್ಲಿ ಹಲವಾರು ದಶಕಗಳಿಂದ ಹಗಲಿರುಳು ಕೆಲಸ ಮಾಡುತ್ತಿರುವ ಪ್ರೊ.‌ ನಿರಂಜನಾರಾದ್ಯರಂತವರು ಇರುವಾಗ ಈ ಪಡಪೋಸಿ ಕರ್ಜಗಿ ಯಾಕೆ ಬೇಕಿತ್ತು? ಮಾನ್ಯ ಸಿ ಎಂ ಸಿದ್ದರಾಮಯ್ಯ ಅವರು ಈ ಕರ್ಜಗಿ ತಮಿತಿಯನ್ಜು ಕೂಡಲೇ ಉಚ್ಚಾಟಿಸಬೇಕು. ಹೊಸ ಸಮಿತಿ ರಚಿಸಬೇಕು” ಎಂದು ಹರ್ಷ ಆಗ್ರಹಿಸಿದ್ದಾರೆ.

ವಿದ್ಯಾರ್ಥಿ ಹೋರಾಟಗಾರ ಪಿ. ನಂದಕುಮಾರ್ ಅವರು ಪ್ರತಿಕ್ರಿಯಿಸಿ,  “ಗುರುರಾಜ ಕರ್ಜಿಗಿಯವರು ಸನಾತನಿ ಸಂತತಿಯ ಅವಕಾಶವಾದಿ ಹಾಗೂ ಸಂಘ ಪರಿವಾರದ ವ್ಯಕಿ ಎನ್ನುವುದು ಈಗಾಗಲೇ ನಾಡಿನ ಪ್ರಜ್ಞಾವಂತ ನಾಗರೀಕರಿಗೆ ತಿಳಿದಿರುವಂತದ್ದೆ. ಅವರು ಕರ್ನಾಟಕದ ವಿವಿಧೆಡೆ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದು ಕೇಶವ ಕೃಪೆಯಿಂದ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಈ ಮೂಲಕವೇ ಅವರು ಇವತ್ತು ಶಿಕ್ಷಣ ತಜ್ಞರಾದವರು. ಕೇವಲ ಭಾವನಾತ್ಮಕ ಮಾತುಗಳ ಮೂಲಕವೇ ಸಾಮಾನ್ಯ ಜನರನ್ನು ಮೂಡರನ್ನಾಗಿಸುವಲ್ಲಿ ನಿಸ್ಸಿಮರು. ಇಂತಹ ವ್ಯಕ್ತಿಯನ್ನು ಅದರಲ್ಲೂ ಮುಖ್ಯವಾಗಿ ಜಾತಿ ವಿನಾಶದ ಕ್ರಾಂತಿಯ ನೆಲವಾದ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಗುಣಮಟ್ಟದ ಸುಧಾರಣ ಸಮಿತಿಗೆ ಸರ್ಕಾರ ಈ ಮನುವಾದದ ಪ್ರತಿಪಾದಕರನ್ನು ನೇಮಿಸಿರುವುದು ಒಪ್ಪಲಾಗದು” ಎಂದು ಹೇಳಿದ್ದಾರೆ.

ಈ ಬಗ್ಗೆ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರ್ನಾಟಕ ಸರ್ಕಾರವು ಗುರುರಾಜ ಕರಜಗಿಯವರ ನೇಮಕ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಇತ್ತೀಚೆಗೆ ಕರ್ನಾಟಕ ಸರ್ಕಾರ ಕೈಗೊಳ್ಳುತ್ತೀರಿವ ಈ ರೀತಿಯ ನಿರ್ಧಾರ ಕಾರಣಕ್ಕೆ ನಮ್ಮಂತ ಬಹುತೇಕರು ಕರ್ನಾಟಕ ಸರ್ಕಾರವನ್ನು ಅನುಮಾನದಿಂದ ಮತ್ತು ಅಸಹನೆಯಿಂದ ನೋಡುವಂತ ಪರಿಸ್ಥಿತಿ ಬಂದೊದಗಿದೆ. ಇದು ಈ ಸರ್ಕಾರದ ನೈತಿಕತೆ ಕುಸಿತವನ್ನು ಎತ್ತಿ ತೋರಿಸುವಂತೆ ಕಾಣುತ್ತಿದೆ. ಬಹಳ ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ರಾಜಕೀಯ ಚಿಂತನೆಯಲ್ಲೇ ಆಗಿರುವ ಬಹು ದೊಡ್ಡ ಲೋಪವನ್ನು ತೋರಿಸುತ್ತದೆ. ಸಮಾಜದಲ್ಲಿ ಸೂಕ್ಷ್ಮ ಮತ್ತು ತೀಕ್ಷ್ಣವಾದ ರಾಜಕೀಯ ಪ್ರಜ್ಞೆಯನ್ನು ಬಿಟ್ಟು ಕೊಡುವುದು ಬಹು ಘೋರ ದುರಂತಕ್ಕೆಡೆ ಮಾಡಿಕೊಡುತ್ತದೆ ಎನ್ನುವುದು ಆಳುವ ಸರ್ಕಾರ ಅರಿತುಕೊಳ್ಳಬೇಕು” ಎಂದು ಅವರು ಕಾಂಗ್ರೆಸ್‌ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೈಚಾರಿಕ ತಿಳುವಳಿಕೆ, ಅನಿಕೇತನ ಪ್ರಜ್ಞೆಯ ನೀತಿಯನ್ನು ಹಾಗೂ ಕವಿರಾಜ ಮಾರ್ಗಕಾರ ಹಾಕಿರುವ ವಿವೇಕ ತತ್ವಕ್ಕೆ ಬುನಾದಿ ಹಾಕುವಂತ ಶಿಕ್ಷಣ ತಜ್ಞರನ್ನು ನೇಮಿಸಿದರೆ ಶೈಕ್ಷಣಿಕವಾಗಿ ಹಿಂದುಳಿದ ಹೈದ್ರಾಬಾದ್ ಕರ್ನಾಟಕ ನಿಜವಾಗಿಯೂ ಕಲ್ಯಾಣ ಕರ್ನಾಟಕವಾಗುವುದು. ಈಗಿರುವುದು ಹೆಸರಿಗೆ ಮಾತ್ರ ಕಲ್ಯಾಣ ಕರ್ನಾಟಕವಾಗಿದೆ ಅಷ್ಟೇ. ಹಾಗಾಗಿ, ಶೈಕ್ಷಣಿಕ ಗುಣಮಟ್ಟದ ಸುಧಾರಣೆ ಸಮಿತಿಗೆ ನೇಮಕಗೊಂಡ ಗುರುರಾಜ್ ಕರ್ಜಿಗಿಯವರನ್ನು ಕೈಬಿಟ್ಟು, ರಾಜ್ಯದ ಹಿರಿಯ ಬುದ್ಧಿಜೀವಿಗಳ,ಸಾಹಿತಿಗಳ ಸಲಹೆಗಳನ್ನು ಪಡೆದು ಸಮಿತಿ ಸದಸ್ಯರನ್ನು ನೇಮಕ ಮಾಡುವುದು ಒಳಿತು” ಎಂದು ನಂದಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ವಿರುದ್ದ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ದಿನೇಶ್ ಗುಂಡೂರಾವ್ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...