Homeಮುಖಪುಟಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಸೂಲಿಬೆಲೆ ಫೋಟೊ ವೈರಲ್‌

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಸೂಲಿಬೆಲೆ ಫೋಟೊ ವೈರಲ್‌

- Advertisement -
- Advertisement -

ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಜೊತೆಗೆ ಚಕ್ರವರ್ತಿ ಸೂಲಿಬೆಲೆ ಇರುವ ಫೋಟೋ ವೈರಲ್ ಆಗಿದೆ. ಇದೀಗ ಈ ಪ್ರಕರಣದಲ್ಲಿ ಇನ್ನಷ್ಟು ಜನ‌ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಪ್ರಮುಖ ಆರೋಪಿ (A 3) ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.‌ ಈ ನಡುವೆ ಹಾಲಶ್ರೀ ಸ್ವಾಮೀಜಿ ಜೊತೆಗಿದ್ದ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಅವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿವೆ.

ಚಕ್ರವರ್ತಿ ಸೂಲಿಬೆಲೆ ಮತ್ತು ಹಾಲಶ್ರೀ ಸ್ವಾಮೀಜಿ ರೈಲಿನಲ್ಲಿ ಪ್ರಯಾಣಿಸುವ ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊಗಳು ಹರಿದಾಡುತ್ತಿವೆ. ಅಲ್ಲದೇ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಜೊತೆಗಿದ್ದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಆರಗ ಜ್ಞಾನೇಂದ್ರ ಅವರ ಫೋಟೊಗಳು ಕೂಡ ಹರಿದಾಡುತ್ತಿದ್ದು, ”ʼಬಿಜೆಪಿ ಪಕ್ಷದ ಟಿಕೆಟ್ ಕೊಡಿಸುತ್ತೇನೆಂದು, ಬಿಜೆಪಿಯವರಿಗೇ ವಂಚಿಸಿದರೂ ವಂಚಕಿಯ ಪರ ನಿಂತಿರುವುದರ ಹಿಂದೆ ಯಾವ ಹಿತಾಸಕ್ತಿ ಅಡಗಿದೆ”ʼ ಎಂದು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವರು ಫೋಟೊ ಹಂಚಿಕೊಂಡಿದ್ದು, ಈ ಪ್ರಕರಣದಲ್ಲಿ ಚಕ್ರವರ್ತಿ ಸೂಲಿಬೆಲೆ ಇರಬಹುದು ಎಂದು ಬರೆದುಕೊಂಡಿದ್ದಾರೆ.

ಗುರುವಾರ ಬೆಳಗ್ಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತರುವ ವೇಳೆ ಚೈತ್ರಾ ಕುಂದಾಪುರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ”ಸ್ವಾಮೀಜಿ ಬಂಧನವಾಗಲಿ, ಸತ್ಯ ಹೊರ ಬರುತ್ತೆ, ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ” ಎಂಬ ಅಂಶವನ್ನು ಬಿಚ್ಚಿಟ್ಟಿದ್ದಾಳೆ.

ಚೈತ್ರಾ ಕುಂದಾಪುರ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಆರೋಪಿಗಳ ಜೊತೆಗಿರುವ ಬಿಜೆಪಿ ಮತ್ತು ಸಂಘಪರಿವಾರದ ನಾಯಕರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: 5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...