Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚೈತ್ರಾ ಕುಂದಾಪುರ ಗ್ಯಾಂಗ್‌ನ ವಂಚನೆ ಪ್ರಕರಣ: ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಗ್ಯಾಂಗ್​ನ 3ನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಅಭಿನವ ಹಾಲಶ್ರೀ ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಹಾಗಾಗಿ ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಸ್ವಾಮೀಜಿಯ ಮೇಲಿನ ಆರೋಪವೇನು?

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ.

ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ.

ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್​ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್​ ಲಾಕರ್​ನಲ್ಲಿ ಪತ್ತೆ ಆಗಿದೆ.

ಇದನ್ನೂ ಓದಿ: 5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....