Homeಮುಖಪುಟಚಕ್ರತೀರ್ಥ ಪೂರ್ವಗ್ರಹ ಪೀಡಿತರಾಗಿದ್ದಾರೆ: ಪಠ್ಯ ಪರಿಶೀಲನೆಯಲ್ಲಿನ ಎಡವಟ್ಟುಗಳಿಗೆ ಇತಿಹಾಸ ತಜ್ಞರ ಆಕ್ಷೇಪ

ಚಕ್ರತೀರ್ಥ ಪೂರ್ವಗ್ರಹ ಪೀಡಿತರಾಗಿದ್ದಾರೆ: ಪಠ್ಯ ಪರಿಶೀಲನೆಯಲ್ಲಿನ ಎಡವಟ್ಟುಗಳಿಗೆ ಇತಿಹಾಸ ತಜ್ಞರ ಆಕ್ಷೇಪ

- Advertisement -
- Advertisement -

ಸಂಘ ಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚನೆಯಾದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇತಿಹಾಸ ಪಠ್ಯದಲ್ಲಿ ಮಾಡಲಾಗುತ್ತಿರುವ ಬದಲಾವಣೆಗಳ ಕುರಿತು ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಇತಿಹಾಸತಜ್ಞರು, ಸಮಿತಿಯ ಧೋರಣೆ ಹಾಗೂ ರೋಹಿತ್‌ ಚಕ್ರತೀರ್ಥರ ವರ್ತನೆಗಳನ್ನು ಕಟುವಾಗಿ ಖಂಡಿಸಿದ್ದಾರೆ.

ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಓ.ಅನಂತರಾಮಯ್ಯ, ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ವಿಶ್ರಾಂತ ಸಮ-ಕುಲಪತಿ ಪ್ರೊ. ಎಸ್.ಚಂದ್ರಶೇಖರ್, ಬೆಂಗಳೂರು ಇತಿಹಾಸ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಅಶ್ವತ್ಥನಾರಾಯಣ, ಡಾ.ಎಂ.ಜಮುನ, ಇತಿಹಾಸ ದರ್ಪಣ ಸಂಪಾದಕ ಡಾ. ಹಂ.ಗು. ರಾಜೇಶ್, ಹಿರಿಯ ಇತಿಹಾಸಕಾರ ಡಾ.ಎಚ್.ಎಸ್.ಗೋಪಾಲರಾವ್, ಇತಿಹಾಸ ಸಂಶೋಧಕ ಡಾ. ಕೆ.ಪ್ರಕಾಶ್ ಜಂಟಿಯಾಗಿ ಅವರು ಜಂಟಿಯಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಕಾಡೆಮಿಕ್ ನೆಲೆಯಲ್ಲಿ ಅಧ್ಯಯನ ನಡೆಸಿರದ ಮತ್ತು ಇತಿಹಾಸದ ವೈಧಾನಿಕತೆಯ ಅರಿವೇ ಇರದ ರೋಹಿತ್ ಚಕ್ರತೀರ್ಥ ಅವರು ಪೂರ್ವಾಗ್ರಹ ಪೀಡಿತರಾಗಿ ತಮ್ಮ ಅಪ್ರಬುದ್ಧ ಹೇಳಿಕೆಗಳ ಮೂಲಕ ಸಾರ್ವಜನಿಕರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಖಂಡನೀಯ” ಎಂದಿದ್ದಾರೆ.

ಪತ್ರಿಕೆ ಹೇಳಿಕೆಯಲ್ಲಿ ಹೇಳಿರುವುದೇನು?

2017ರಲ್ಲಿ ಜಾರಿಗೊಂಡ ಪರಿಷ್ಕೃತ ಪಠ್ಯಪುಸ್ತಕಗಳು ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ವಿವಿಧ ವಿಷಯಗಳ 27 ತಜ್ಞರ ಸಮಿತಿಗಳಿಂದ ರೂಪುಗೊಂಡವು. ಐದು ವರ್ಷಗಳ ನಂತರ ಪರಿಷ್ಕರಣೆಯನ್ನು ಆಕ್ಷೇಪಿಸಿ, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಒಂದು ಸಮಿತಿ ಮರುಪರಿಷ್ಕರಣೆ ನಡೆಸಿರುವುದೇ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಜೊತೆಗೆ ಪಠ್ಯ ಪುಸ್ತಕಗಳ ಮರುಪರಿಷ್ಕರಣ ಸಮಿತಿಯ ಅಧ್ಯಕ್ಷರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನೀಡಿರುವ ಹೇಳಿಕೆಗಳನ್ನು ಮತ್ತು ವಿವಿಧ ಮಾಧ್ಯಮಗಳ ವರದಿಗಳನ್ನು ಗಮನಿಸಿದಾಗ ರಾಜ್ಯದ ಇತಿಹಾಸ ಪಠ್ಯ ಪುಸ್ತಕಗಳಲ್ಲಿ ವಸ್ತುವಿಷಯವನ್ನು ತಿರುಚುವ ಹುನ್ನಾರ ನಡೆದಿರುವಂತೆ ತೋರುತ್ತದೆ.

ಇದನ್ನೂ ಓದಿರಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ಚಕ್ರತೀರ್ಥ ಅವರು ವಿಡಿಯೋ ಒಂದರಲ್ಲಿ “ತುಪ್ಪ ಇಲ್ಲದೆ ಜನ ಒದ್ದಾಡಬೇಕಾಯಿತು; ಹಸಿವಿನಿಂದ ಮಕ್ಕಳು ಸಾಯಬೇಕಾಯಿತು” ಎಂದು ಪಠ್ಯ ಪುಸ್ತಕದಲ್ಲಿ ಇರುವುದಾಗಿ ಹಸಿಸುಳ್ಳು ಹೇಳಿದ್ದಾರೆ. ಯಾವ ತರಗತಿಯ ಇತಿಹಾಸ ಪಠ್ಯದಲ್ಲಿ ಹೀಗೆ ಬರೆದಿದೆ ಎಂಬುದನ್ನು ಅವರೇ ತೋರಿಸಬೇಕು.

ಮುಂದುವರೆದು, “ವೇದಗಳ ಕಾಲದಲ್ಲಿ ಮಹಿಳೆಯರಿಗೆ ಸ್ಥಾನಮಾನಗಳಿರಲಿಲ್ಲ. ಅವರನ್ನ ಗೌರವದಿಂದ ನೋಡಿಕೊಳ್ಳುತ್ತಿರಲಿಲ್ಲ” ಎಂಬುದಾಗಿ ಪಠ್ಯ ಪುಸ್ತಕಗಳಲ್ಲಿ ಬರೆದಿದ್ದಾರೆಂದು ಆರೋಪಿಸುತ್ತಾರೆ. ಬಹುಶಃ ಚಕ್ರತೀರ್ಥ ಅವರು ಪಠ್ಯ ಪುಸ್ತಕವನ್ನು ಸರಿಯಾಗಿ ಓದಿಕೊಂಡಿರುವಂತೆ ಕಾಣುವುದಿಲ್ಲ. ಏಕೆಂದರೆ, 6ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಭಾಗ-1 ರ ‘ವೇದಕಾಲದ ಸಂಸ್ಕೃತಿ’ ಪಾಠದಲ್ಲಿ (ಪುಟ: 74ರಲ್ಲಿ) ‘ಸ್ತ್ರೀಯರ ಸ್ಥಾನಮಾನ’ ಎಂಬ ಉಪಶೀರ್ಷಿಕೆ ಅಡಿಯಲ್ಲಿ ಋಗ್ವೇದ ಕಾಲದಲ್ಲಿ ಸ್ತ್ರೀಯರಿಗಿದ್ದ ಉನ್ನತ ಸ್ಥಾನಮಾನಗಳಿದ್ದವೆಂದು ಬರೆಯಲಾಗಿದೆ. ಆ ಕಾಲದ ಪ್ರಮುಖ ಮಹಿಳಾ ವಿದ್ವನ್ಮಣಿಗಳನ್ನೂ ಹೆಸರಿಸಲಾಗಿದೆ. ಋಗ್ವೇದ ಕಾಲದಲ್ಲಿದ್ದ ಮಹಿಳೆಯರ ಸ್ಥಾನಮಾನಗಳು ನಂತರದ ವೇದಗಳ ಕಾಲದ ಸಮಾಜದಲ್ಲಿ ಕುಸಿಯುತ್ತವೆ. ಇದು ಕೂಡ ಸ್ಪಷ್ಟವಾಗಿದೆ. ಹೀಗೆ ಕಣ್ಮುಂದೆ ಇರುವ ಪಠ್ಯಪುಸ್ತಕಗಳನ್ನೇ ಇಟ್ಟುಕೊಂಡು, ಸರ್ಕಾರ ನೀಡಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿ ಈ ಪರಿಯಲ್ಲಿ ಸುಳ್ಳುಗಳನ್ನು ಹೇಳುತ್ತಿರುವುದು ದುರದೃಷ್ಟಕರ.
ಹರಪ್ಪ ನಾಗರಿಕತೆಯನ್ನು ಸಿಂಧೂ-ಸರಸ್ವತಿ ನಾಗರಿಕತೆ ಎಂದು ಕರೆಯುವುದು; ಸಿಂಧೂ-ಸರಸ್ವತಿ ನಾಗರಿಕತೆಯು ವೇದಗಳ ನಂತರ ಕಾಲದ್ದೆಂದು ಪ್ರತಿಪಾದಿಸಲು ಹೊರಟಿರುವುದು, ಇದೆಲ್ಲ ಅವರ ತಿಳಿವಳಿಕೆಯ ಕೊರತೆಯನ್ನು ತೋರ್ಪಡಿಸುತ್ತವೆ.

1921ರಲ್ಲಿ ಸಿಂಧೂ ಕಣಿವೆಯ ಹರಪ್ಪಾ ಎಂಬಲ್ಲಿ ನಾಗರಿಕತೆಯ ಮೊದಲ ನೆಲೆಯು ಬೆಳಕಿಗೆ ಬಂದಿತು. ತದನಂತರದ ವರ್ಷಗಳಲ್ಲಿ ಈ ನಾಗರಿಕತೆಯ ನೆಲೆಗಳು ಸಿಂಧೂ ಕಣಿವೆಯ ಆಚೆಗೂ ಅಂದರೆ, ಯಮುನಾ, ತಪತಿ, ನರ್ಮದಾ ಕಣಿವೆಗಳಲ್ಲಿಯೂ ಬೆಳಕಿಗೆ ಬಂದಿದ್ದರಿಂದ ನದಿ ಕಣಿವೆಯ ಹೆಸರಿನಿಂದ ಈ ನಾಗರಿಕತೆಯನ್ನು ಗುರುತಿಸಲು ಅಸಾಧ್ಯವಾಯಿತು. ಆದ್ದರಿಂದ ಅದರ ಮೊದಲ ನೆಲೆಯಾದ ‘ಹರಪ್ಪಾ’ ಹೆಸರಿನಿಂದ ಈ ನಾಗರಿಕತೆಯನ್ನು ಇತಿಹಾಸಕಾರರು ಗುರುತಿಸುತ್ತಾ ಬರುತ್ತಿದ್ದಾರೆ. ಪುರಾತತ್ವ ಸಂಶೋಧನಾ ಶಾಸ್ತ್ರದ ವೈಧಾನಿಕತೆಯಲ್ಲಿ ನೆಲೆಗಳ ಹೆಸರಿನಿಂದಲೇ ಸಂಸ್ಕೃತಿಗಳನ್ನು ಗುರುತಿಸುವುದು ಇಲ್ಲಿವರೆಗೂ ನಡೆದು ಬಂದಿರುವ ಮಾದರಿ.

ಸಿಂಧೂ ನಾಗರಿಕತೆಯು ವೇದಗಳ ನಂತರ ಕಾಲದ್ದು ಎಂದು ಚಕ್ರತೀರ್ಥ ಸುಳ್ಳು ಪ್ರತಿಪಾದನೆಗೆ ಮುಂದಾಗಿದ್ದಾರೆ. ಪ್ರಸಿದ್ಧ ಇತಿಹಾಸಕಾರ ಆರ್.ಸಿ. ಮಜುಂದಾರ್ ಅವರೇ ಸಿಂಧೂ ನಾಗರಿಕತೆಯು ವೇದ ಕಾಲಕ್ಕೂ ಮೊದಲಿನದೆಂದು ಸ್ಪಷ್ಟವಾಗಿ ತೋರಿಸಿ ಕೊಟ್ಟಿದ್ದಾರೆ. ಅವರು ತಮ್ಮ ‘An Advanced History of India’ ಎಂಬ ಕೃತಿಯಲ್ಲಿ (ಪುಟ: 22-23) ಸಿಂಧೂ ನಾಗರಿಕತೆ ಮತ್ತು ವೇದಗಳ ಸಂಸ್ಕೃತಿ ಹೇಗೆ ಬೇರೆ ಬೇರೆ, ಹಾಗೂ ಸಿಂಧೂ ನಾಗರಿಕತೆ ವೇದಗಳ ನಾಗರಿಕತೆಗಿಂತ ಹೇಗೆ ಪ್ರಾಚೀನ ಎಂಬುದನ್ನು ತರ್ಕಬದ್ಧವಾಗಿ ನಿರೂಪಿಸಿದ್ದಾರೆ. ಚಕ್ರತೀರ್ಥ ಅವರು ಇಷ್ಟಾದರೂ ಕೂಡ ಬರಗೂರರೇ ಎಡಪಂಥಿಯರ ಸಿದ್ಧಾಂತವನ್ನು ಪಠ್ಯದಲ್ಲಿ ತಂದಿದ್ದಾರೆ ಎಂದು ಆರೋಪಿಸುವ ಮೂಲಕ ತಮ್ಮ ಅಜ್ಞಾನವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ತಮ್ಮ ವಿಚಾರಧಾರೆಗೆ ಒಪ್ಪದ ಭಿನ್ನ ನೋಟಗಳನ್ನು ಎಡಪಂಥಿಯ ವಿಚಾರಧಾರೆ ಎಂದೇ ಆರೋಪಿಸುವ ಮೂಲಕ ಚರಿತ್ರೆಯನ್ನು ಅರ್ಥೈಸುವ ಬಹುಮಾದರಿಗಳನ್ನು ನಿರಾಕರಿಸುತ್ತಾರೆ.

ಇದನ್ನೂ ಓದಿರಿ: ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಮುಂದುವರೆದು, ಚಕ್ರತೀರ್ಥ ಅವರು ಟಿಪ್ಪುವನ್ನು ‘ಮೈಸೂರು ಹುಲಿ’ ಎಂದು ಕರೆದವರು ಯಾರು? ಅವನಿಗೆ ‘ಸುಲ್ತಾನ’ ಎಂಬ ಬಿರುದು ಕೊಟ್ಟವರು ಯಾರು? ಎಂದು ಪ್ರಶ್ನಿಸಿರುವುದಲ್ಲದೆ, ಪಠ್ಯ ಪುಸ್ತಕದಲ್ಲಿ ಪ್ರಸ್ತಾಪಿಸಿರುವ ಟಿಪ್ಪುವಿನ ಪ್ರಗತಿಪರ ಕಾರ್ಯಗಳಾದ ರಾಕೇಟ್ ತಂತ್ರಜ್ಞಾನ ಅಭಿವೃದ್ಧಿ, ಮರಾಠರಿಂದ ಲೂಟಿಗೊಳಗಾದ ಶೃಂಗೇರಿ ಮಠಕ್ಕೆ ದೇಣಿಗೆ ನೀಡಿದ್ದು, ರೇಷ್ಮೆ ಅಭಿವೃದ್ಧಿ ಕೈಗೊಂಡ ವಿಚಾರಗಳನ್ನು ವೈಭವೀಕರಣಗೊಂಡಿವೆ ಎಂಬ ನೆಪದಲ್ಲಿ ಪಠ್ಯದಿಂದ ಕೈಬಿಟ್ಟಿರುವ ಅಂಶಗಳು ಮಾಧ್ಯಮಗಳಿಂದ ಬೆಳಕಿಗೆ ಬಂದಿವೆ.

ಬ್ರಿಟಿಷ್ ಅಧಿಕಾರಿ ಮೆಡೋಸ್ ಟೇಲರ್ ಅವರು ಜನರು ಟಿಪ್ಪುವನ್ನು ‘ಮೈಸೂರು ಹುಲಿ’ಎಂದು ಕರೆಯುತ್ತಿದ್ದರೆಂದು ದಾಖಲಿಸಿದ್ದಾರೆ. ಅವರ ಮಾತುಗಳನ್ನು ಜನಪದ ಲಾವಣಿಗಳು ಕೂಡ ಪುಷ್ಟಿಕರಿಸಿದ್ದು, ಲಾವಣಿಗಳು ಟಿಪ್ಪುವನ್ನು ‘ಮೈಸೂರು ಹುಲಿ’ಎಂದು ಹಾಡಿ ಹೊಗಳಿವೆ. ಟಿಪ್ಪು ರಾಕೆಟ್ ತಂತ್ರಜ್ಞಾನವನ್ನು ಅಭಿವೃದ್ಧಿ ಮಾಡಿದ ಬಗ್ಗೆ ಖ್ಯಾತ ವಿಜ್ಞಾನಿಗಳಾದ ರೊದ್ದಂ ನರಸಿಂಹ ಮತ್ತು ಎ.ಪಿ.ಜೆ. ಅಬ್ದುಲ್ ಕಲಾಂ ಅವರೇ ಉಲ್ಲೇಖಿಸಿದ್ದಾರೆ. ರೇಷ್ಮೆ ಅಭಿವೃದ್ಧಿಪಡಿಸಿದ ಕುರಿತು ಖ್ಯಾತ ಇತಿಹಾಸಕಾರರಾದ ಡಾ.ಸೂರ್ಯನಾಥ ಕಾಮತ್, ಪ್ರೊ. ಷೇಕ್ ಅಲಿ ಮೊದಲಾದವರು ದಾಖಲಿಸಿದ್ದಾರೆ. ಅಲ್ಲದೆ, ಶೃಂಗೇರಿ ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿಗಳೊಂದಿಗೆ ಟಿಪ್ಪುವು 23 ಪತ್ರ ವ್ಯವಹಾರಗಳನ್ನು ನಡೆಸಿರುವ ದಾಖಲೆಗಳು ಎ.ಕೆ. ಶಾಸ್ತ್ರಿ ಅವರು ಸಂಪಾದಿಸಿರುವ ‘ಶೃಂಗೇರಿಮಠದ ಕಡತಗಳಲ್ಲಿಯ ಆಯ್ದ ಚಾರಿತ್ರಿಕ ದಾಖಲೆಗಳು’ಕೃತಿಯಲ್ಲಿ (ಪುಟ: 242-272) ಪ್ರಕಟವಾಗಿವೆ. ಇವುಗಳಲ್ಲಿ ಮಠಕ್ಕೆ ಟಿಪ್ಪು ನೀಡಿರುವ ಅಪಾರ ಪ್ರಮಾಣದ ದಾನ ದತ್ತಿಯನ್ನು ಯಾರೂ ಕೂಡ ಅಲ್ಲಗಳೆಯಲಾರರು. ಈ ಎಲ್ಲಾ ಕಾರಣಗಳಿಂದಾಗಿಯೇ ಇತಿಹಾಸಕಾರ ತಿ.ತಾ. ಶರ್ಮ ಅವರು “ಅನಾಮಧೇಯ ಮೈಸೂರಿಗೆ ಅಭಿಮಾನಧನ ಟಿಪ್ಪು ಸುಲ್ತಾನ ಅಂತಾರಾಷ್ಟ್ರೀಯ ಸ್ಥಾನಗಳಿಸಿಕೊಟ್ಟ”ಎಂದು ಪ್ರಶಂಸಿಸಿದ್ದಾರೆ. ಟಿಪ್ಪುವನ್ನು ಕೇವಲ ಮುಸ್ಲಿಮನಾಗಿ ನೋಡದೆ 18ನೇ ಶತಮಾನದ ರಾಜಕೀಯ ಸಂಘರ್ಷಗಳ ಹಿನ್ನೆಲೆಯಲ್ಲಿ ಗ್ರಹಿಸುವುದು ಇತಿಹಾಸವು ಅಪೇಕ್ಷಿಸುವ ವಿಧಾನ.

ಅಕಾಡೆಮಿಕ್ ನೆಲೆಯಲ್ಲಿ ಅಧ್ಯಯನ ನಡೆಸಿರದ ಮತ್ತು ಇತಿಹಾಸದ ವೈಧಾನಿಕತೆಯ ಅರಿವೇ ಇರದ ರೋಹಿತ್ ಚಕ್ರತೀರ್ಥ ಅವರು ಪೂರ್ವಾಗ್ರಹ ಪೀಡಿತರಾಗಿ ತಮ್ಮ ಅಪ್ರಬುದ್ಧ ಹೇಳಿಕೆಗಳ ಮೂಲಕ ಸಾರ್ವಜನಿಕರ ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿರುವುದು ಖಂಡನೀಯವಾಗಿದೆ. ಇತಿಹಾಸ ವಿಷಯದಲ್ಲಿ ಇತಿಹಾಸಕಾರರ ಅಭಿಪ್ರಾಯಗಳು ಅಂತಿಮವಾಗಬೇಕೇ ವಿನಃ ಇತರರ ಅಭಿಪ್ರಾಯಗಳಲ್ಲ. ಸಂಬಂಧಪಟ್ಟ ಸಂಘ ಸಂಸ್ಥೆಗಳು, ತಜ್ಞರ ಜೊತೆಗೆ ವರದಿ ಸಿದ್ಧತೆಯ ಪೂರ್ವದಲ್ಲಿ ಇವರು ಚರ್ಚಿಸಬೇಕಿತ್ತೆ ವಿನಃ ವರದಿ ಸಲ್ಲಿಸಿದ ನಂತರದಲ್ಲಲ್ಲ. ಒಮ್ಮೆ ಪಠ್ಯ ಮರುಪರಿಷ್ಕರಣಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಮೇಲೆ ಅಧ್ಯಕ್ಷರ ಜವಾಬ್ದಾರಿ ಮುಗಿಯುತ್ತದೆ. ಒಪ್ಪುವುದು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಶಿಷ್ಟಾಚಾರ ಮರೆತು ಹಿಂದಿನ ಅಧ್ಯಕ್ಷರನ್ನು ದೂಷಿಸುವುದಾಗಲಿ, ಅಕಾಡೆಮಿಕ್ ವಲಯದಲ್ಲಿ ನಡೆಯಬೇಕಾದ ಚರ್ಚೆಯನ್ನು ಸಂತೆಯಲ್ಲಿ ನಿಂತು ಮಾತನಾಡುವುದಾಗಲಿ ಸರ್ಕಾರದ ನಿಯಮಗಳಿಗೂ ಕೂಡ ವಿರುದ್ಧವಾದುದು. ಆದ್ದರಿಂದ ರೋಹಿತ್ ಚಕ್ರತೀರ್ಥ ಅವರ ಈ ವರ್ತನೆಯನ್ನು ಸರ್ಕಾರವು ಕೂಡಲೇ ನಿಯಂತ್ರಿಸಬೇಕು.

ಇದನ್ನೂ ಓದಿರಿ: ವಿಶೇಷ ವರದಿ; ಬಲಪಂಥೀಯ ರಾಜಕಾರಣದಲ್ಲಿ ಪಠ್ಯ ಪರಿಷ್ಕರಣೆ

27 ಸಮಿತಿಯಲ್ಲಿ ವಿಷಯ ತಜ್ಞರಿದ್ದರು: ಡಾ.ಹಂ.ಗು.ರಾಜೇಶ್

ಸಾಹಿತಿ ಬರಗೂರು ರಾಮಚಂದ್ರಪ್ಪನವರ ಸರ್ವಾಧ್ಯಕ್ಷರಲ್ಲಿ ರಚನೆಯಾದ ಪಠ್ಯಪುಸ್ತಕ ಸಮಿತಿಯಲ್ಲಿ ಇತಿಹಾಸ ಪಠ್ಯಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿರುವ ಡಾ.ಹಂ.ಗು.ರಾಜೇಶ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಶಿಕ್ಷಣ ತಜ್ಞರು ಹಾಗೂ ಇತಿಹಾಸಕಾರರು ಪಠ್ಯ ಹೇಗಿರಬೇಕೆಂದು ನಿರ್ಧರಿಸುತ್ತಾರೆ. ನಾವು ಪಠ್ಯಪುಸ್ತಕ ರಚನೆ ಮಾಡುವಾಗ ಸರ್ವಾಧ್ಯಕ್ಷರಾಗಿದ್ದ ಬರಗೂರು ರಾಮಚಂದ್ರಪ್ಪ ಅವರು ಯಾವುದೇ ನಿಲುವನ್ನು ನಮ್ಮ ಮೇಲೆ ಹೇರಿರಲಿಲ್ಲ. ಸ್ವತಂತ್ರವನ್ನು ಕೊಟ್ಟಿದ್ದರು. ವಿದ್ಯಾರ್ಥಿಗಳ ವಯೋಮಾನಕ್ಕೆ ಅನುಗುಣವಾಗಿ, ಪಠ್ಯ ರೂಪಿಸಲಾಗಿತ್ತು. 27 ಸಮಿತಿಯಲ್ಲಿ ಸುಮಾರು 175ಕ್ಕೂ ಹೆಚ್ಚು ತಜ್ಞರು ಇದ್ದರು. ವಿಷಯ ತಜ್ಞರು ಪಠ್ಯವನ್ನು ನಿರ್ಧರಿಸಿದ್ದಾರೆ. ವಿನಾಕಾರಣ ಬರಗೂರು ಅವರ ಹೆಸರನ್ನು ತರಲಾಗುತ್ತಿದೆ. 27 ಸಮಿತಿಗಳು ಸುಮಾರು ಒಂದೂವರೆ ವರ್ಷಗಳ ಕಾಲ ಮಾಡಿರುವ ಕೆಲಸವನ್ನು ಒಂದು ಸಮಿತಿಯವರು ಪರಿಶೀಲನೆ ಮಾಡುವುದು ಅನುಮಾನ ತರುತ್ತದೆ” ಎಂದರು.

“ಬೀದಿಯಲ್ಲಿ ನಿಂತು ಚರ್ಚೆ ಮಾಡುವ ವಿಷಯ ಇದಲ್ಲ. ಶೈಕ್ಷಣಿಕ ವಲದೊಳಗೆ ಚರ್ಚೆಯಾಗಬೇಕು. ದೋಷಗಳೇನಾದರೂ ಇದ್ದರೆ ಅದನ್ನು ಸರಿಪಡಿಸಬೇಕು. ವರದಿಯನ್ನು ಒಪ್ಪಿಕೊಳ್ಳವುದು ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಆದರೆ ಮನಬಂದಂತೆ ಪರಿಶೀಲನಾ ಸಮಿತಿಯ ಅಧ್ಯಕ್ಷರು ಮಾತನಾಡುವುದು ಸರಿಯಲ್ಲ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...