Homeಕರ್ನಾಟಕಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...