Homeಕರ್ನಾಟಕಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...