Homeಕರ್ನಾಟಕಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಪಠ್ಯ ಪರಿಶೀಲನೆಗೆ ಚಕ್ರತೀರ್ಥ: ನಾಡಗೀತೆಗೆ ಅವಮಾನ ಮಾಡಿದ್ದ ಪೋಸ್ಟ್‌ ಮತ್ತೆ ವೈರಲ್

ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು: ಸಿದ್ದರಾಮಯ್ಯ

- Advertisement -
- Advertisement -

ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪುಸ್ತಕಗಳನ್ನು ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರೂಪಿಸಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ಚಕ್ರತೀರ್ಥ ಮಾಡಿದ್ದ ಹಳೆಯ ಪೋಸ್ಟ್‌ಗಳು ವೈರಲ್ ಆಗುತ್ತಿವೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಅವಮಾನ ಮಾಡಿ ರೋಹಿತ್ ಚಕ್ರತೀರ್ಥ ಮಾಡಿದ್ದ ಪೋಸ್ಟ್‌ನ ಹಳೆಯ ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡು ತರಾಟೆಗೆ ತೆಗೆದುಕೊಳ್ಳುತ್ತಿರುವ ಕನ್ನಡಿಗರು, “ಇಂತಹ ವ್ಯಕ್ತಿಯನ್ನು ಸರ್ಕಾರ ನೇಮಿಸಿರುವುದು ದುರದೃಷ್ಟಕರ” ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, “ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ @BJP4Karnataka ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು” ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, “ಕುವೆಂಪು ನಾಡಗೀತೆಯನ್ನು ಈ ಮಟ್ಟಿಗೆ ಅವಮಾನಿಸುವ, ಧರ್ಮಾಂಧರು ಮಕ್ಕಳು ಏನನ್ನು ಓದಬೇಕು ಎಂಬ ಸಂಗತಿಯನ್ನು ನಿರ್ಧರಿಸುವುದು ಅಪಾಯಕಾರಿ ವಿದ್ಯಮಾನವಾಗಿದೆ” ಎಂದಿದ್ದಾರೆ.

ಮುಂದುವರಿದು, “ಈ ನಾಡಿನ ನಾಡಗೀತೆಯನ್ನೇ ಅವಮಾನಿಸಿದವರಿಗೆ ಸರ್ಕಾರ ಮನ್ನಣೆ ನೀಡುತ್ತಿರುವ ಉದ್ದೇಶವಾದರೂ ಏನು? ಅರ್ಥಪೂರ್ಣ ವಿರೋಧದ ನಡುವೆಯೂ ಮತ್ತೆ ಈತನನ್ನೇ ಪಿಯುಸಿ ಪಠ್ಯ ಪುಸ್ತಕ ಸಮಿತಿಗೆ ಶಿಫಾರಸ್ಸು ಮಾಡಿರುವ ಶಿಕ್ಷಣ ಸಚಿವರಿಂದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕೂಡಲೇ ರಾಜೀನಾಮೆ ಪಡೆದು ಸಮಾಜದ ಪರವಾದ ಕಾಳಜಿ ಉಳ್ಳ ಮತ್ತು ಜ್ಞಾನವಂತರಾದ ಶಿಕ್ಷಣ ತಜ್ಞರನ್ನು ಸಮಿತಿಗೆ ನೇಮಕ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರು ಬರೆದ ನಾಡಗೀತೆ.. ಇನ್ನೀಗ ಪಿಯು ಪಠ್ಯ ಸಮಿತಿಗೂ ಇವರೇ ಅಧ್ಯಕ್ಷರಂತೆ ಧನ್ಯವಾಯಿತು ನಾಡು. ಜೈ ಕರ್ನಾಟಕ ಮಾತೆ” ಎಂದು ರಂಗಕರ್ಮಿ ಪ್ರಸಾದ್ ರಕ್ಷಿದಿಯವರು ವಿಷಾದಿಸಿದ್ದಾರೆ.

“ನಾಡಗೀತೆಯನ್ನು ಬಳಸಿ ವ್ಯಂಗ್ಯ ಮಾಡುವ ಮನಸ್ಥಿತಿ, ಮನುಸ್ಥಿತಿಯ ವ್ಯಕ್ತಿ ಇಂದು ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದಾನೆ..! ಐದು ವರ್ಷಗಳ ಹಿಂದಿನ‌ ಪೋಸ್ಟ್ ಬಗ್ಗೆ ಕೆದಕಬಾರದು ಎನ್ನುವವರು ಐನೂರು ವರ್ಷಗಳ ಹಿಂದಿನ ಮೊಘಲರ ಧಾಳಿಯನ್ನು ಕೆದಕಿ ಕೋಮು ಗಲಭೆ ಸೃಷ್ಟಿಸುತ್ತಿರುತ್ತಾರೆ” ಎಂದು ಪತ್ರಕರ್ತ ಶಶಿಕರ ಪಾತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪಿಯು ಪಠ್ಯ ಪರಿಶೀಲನೆಗೂ ಚಾಲನೆ; ಮತ್ತದೇ ಚಕ್ರತೀರ್ಥ ಸಮಿತಿಗೆ ಜವಾಬ್ದಾರಿ!

“ಇದು ನಾಡಗೀತೆಗೆ ಮತ್ತು ರಾಷ್ಟ್ರಕವಿ ಕುವೆಂಪುರವರಿಗೆ ಮಾಡಿದ ಅವಮಾನ ಅಷ್ಟೇ ಅಲ್ಲ. ಎಲ್ಲ ಕನ್ನಡಿಗರಿಗೆ ಮತ್ತು ನಮ್ಮೆಲ್ಲರ ಹೆಮ್ಮೆಯ ಇಡೀ ಕರ್ನಾಟಕಕ್ಕೆ ಮಾಡಿರುವ ಅವಮಾನ. ಈತನಿಗೆ ಸಾರ್ವಜನಿಕ ಜೀವನದಲ್ಲಿ ಘನತೆಯಿಂದ ಇರಬೇಕು ಎಂಬ ಅರಿವಿಲ್ಲ. ಕರ್ನಾಟಕದ ಗೌರವಕ್ಕೆ ಧಕ್ಕೆಯಾಗದ ಹಾಗೆ ನಡೆದುಕೊಳ್ಳಬೇಕು ಎಂಬ ಎಚ್ಚರವೂ ಈ ವ್ಯಕ್ತಿಗೆ ಇಲ್ಲ. ಇಂತಾ ಅವಿವೇಕಿಯನ್ನು ರಾಜ್ಯ ಸರ್ಕಾರ ಈಗಲಾದರೂ ಪಟ್ಯಪುಸ್ತಕ ರಚನಾ ಸಮಿತಿಯಿಂದ ಕಿತ್ತೊಗೆದು ಕರ್ನಾಟಕದ ಗೌರವ ಮತ್ತು ಸರ್ಕಾರದ ಗೌರವವನ್ನೂ ಉಳಿಸುವ ಪ್ರಯತ್ನ ಮಾಡಬೇಕು. ಈತನೂ ನಾಡಗೀತೆಗೆ, ಕನ್ನಡನಾಡಿಗೆ ಮಾಡಿರುವ ಅಪಮಾನಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...