Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...