Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...