Homeಕರ್ನಾಟಕಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ...

ಚಕ್ರತೀರ್ಥ ಸಮಿತಿ ಎಡವಟ್ಟು: ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಸೇರಿದಂತೆ ಮಹಿಳಾ ಸಮಾಜ ಸುಧಾರಕಿಯರ ಪಠ್ಯ ತೆರವು

- Advertisement -
- Advertisement -

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿದ್ದ ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆಯವರಿಗೆ ಸಂಬಂಧಿಸಿದ ವಿವರಣೆಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕಿತ್ತು ಬಿಸಾಕಿದೆ.

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ಪಠ್ಯವನ್ನು ಚಕ್ರತೀರ್ಥ ಸಮಿತಿ ಕಿತ್ತು ಬಿಸಾಡಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ, ಸಾಮಾಜಿಕ ಬದಲಾವಣೆಗೆ ಶ್ರಮಿಸಿದ ತಾಯಂದಿರ ಮಾಹಿತಿಯನ್ನು ತೆರವು ಮಾಡಿದ್ದೇಕೆ ಎಂಬ ಪ್ರಶ್ನೆ ಎದ್ದಿದೆ.

ನಾರಾಯಣಗುರುಗಳ ವಿವರಣೆ ಆದ ಮೇಲೆ “ಮಹಿಳಾ ಸಮಾಜ ಸುಧಾರಕಿಯರು” ಉಪಶೀರ್ಷಿಕೆಯಲ್ಲಿ ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂದೆ, ಪಂಡಿತ್‌ ರಮಾಬಾಯಿ ಅವರ ಪರಿಚಯಗಳನ್ನು ಮಾಡಿಕೊಡಲಾಗಿತ್ತು.

ಹಳೆಯ ಪಠ್ಯದಲ್ಲಿ ಏನಿದೆ?

ಸಾವಿತ್ರಿಬಾಯಿ ಫುಲೆ

ಸಾವಿತ್ರಿಬಾಯಿ ಫುಲೆ ಭಾರತದ ಪ್ರಸಿದ್ಧ ಸಮಾಜ ಸುಧಾರಕರು, ಶೈಕ್ಷಣಿಕ ಸುಧಾರಕರು ಹಾಗೂ ಕವಯಿತ್ರಿ. ತಮ್ಮ ಪತಿ ಜ್ಯೋತಿ ಬಾ ಫುಲೆಯವರೊಡಗೂಡಿ ಪುಣೆಯಲ್ಲಿ ಬಾಲಕಿಯರ ಶಾಲೆಯನ್ನು ಆರಂಭಿಸಿದರಲ್ಲದೆ ತಾವೇ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದರು. ಬಾಲ ವಿಧವೆಯರಿಗಾಗಿ ಪುನರ್‌ ವಸತಿ ಕೇಂದ್ರಗಳನ್ನು ತೆರೆಯುವ ಮೂಲಕ ಶಿಶುಹತ್ಯೆ ಪ್ರಕರಣಗಳನ್ನು ಕೊನೆಗಾಣಿಸಲು ಪ್ರಯತ್ನ ಮಾಡಿದರು. ಜಾತಿ ಪದ್ಧತಿ ಮತ್ತು ಲಿಂಗ ಅಸಮಾನತೆಯ ವಿರುದ್ಧ ಹೋರಾಡಿದರು. ಅದಕ್ಕಾಗಿ ಅವರು ಸಮಾಜದ ವಿರೋಧವನ್ನು ಎದುರಿಸಬೇಕಾಯಿತು.

ಪತಿ ಜ್ಯೋತಿ ಬಾ ಫುಲೆಯ ಸಾಮಾಜಿಕ ಹೋರಾಟಗಳಲ್ಲಿ  ಹೆಗಲಿಗೆ ಹೆಗಲುಕೊಟ್ಟು ದುಡಿದರು. ಅವರ ಸಾವಿನ ನಂತರ ‘ಸತ್ಯ ಶೋಧಕ ಸಮಾಜ’ವನ್ನು ಮುನ್ನಡೆಸಿದರು. ಪ್ಲೇಗ್‌ ಮಹಾಮಾರಿಯ ರೋಗಕ್ಕೆ ತುತ್ತಾದವರ ಸೇವೆಯನ್ನು ತಮ್ಮ ಮಗನೊಡನೆ ಸೇರಿ ಮಾಡುತ್ತಿರುವಾಗಲೇ ಪ್ಲೇಗ್ ರೋಗಕ್ಕೆ ತುತ್ತಾದರು.

ತಾರಾಬಾಯಿ ಶಿಂದೆ

ತಾರಾಬಾಯಿ ಶಿಂದೆ ಮಹಾರಾಷ್ಟ್ರದ ಮೊದಲ ಮಹಿಳಾ ಹೋರಾಟಗಾರ್ತಿ. ಜ್ಯೋತಿ ಬಾ ಫುಲೆಯವರ ಸತ್ಯಶೋಧಕ ಸಮಾಜದ ಸಕ್ರಿಯ ಸದಸ್ಯರಾಗಿ ಸಾಮಾಜಿಕ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಬಾಲ ವಿಧವೆಯರ ರಕ್ಷಣೆ ಮತ್ತು ವಿಧವಾ ಪುನರ್ವಿವಾಹಕ್ಕೆ ಬೆಂಬಲ ನೀಡಿದರು. ತಮ್ಮ ಕೃತಿ ‘ಸ್ತ್ರೀ- ಪುರುಷ ತುಲನಾ’ದಲ್ಲಿ ಮಹಿಳೆಯ ಶೋಷಣೆಯನ್ನು ಉಗ್ರವಾಗಿ ಪ್ರತಿಭಟಿಸಿದ್ದಾರೆ.

ಪಂಡಿತ್‌ ರಮಾಬಾಯಿ 

ಪಂಡಿತ್ ರಮಾಬಾಯಿ ಅವರು ಭಾರತದ ಪ್ರಸಿದ್ಧ ಕ್ರೈಸ್ತ ಸಮಾಜ ಸುಧಾರಕಿ. ಅನಂತಶಾಸ್ತ್ರಿ ಡೊಂಗ್ಸೆ ಹಾಗೂ ಲಕ್ಷ್ಮೀಬಾಯಿ ದಂಪತಿಗಳ ಪುತ್ರಿಯಾಗಿ ಪಶ್ಚಿಮಘಟ್ಟದ ಗಂಗಾಮೂಲ ಎಂಬಲ್ಲಿ ಜನಿಸಿದರು. ಅಂದಿನ ಸಾಮಾಜಿಕ ಪರಿಸ್ಥಿತಿಗೆ ವಿರುದ್ಧವಾಗಿ ಶಿಕ್ಷಣ ಪಡೆದರು. ಇಂಗ್ಲೇಡಿನಲ್ಲಿ ಓದುವಾಗ ಕ್ರೈಸ್ತಧರ್ಮೀಯರಾದರು. ಭಾರತೀಯ ಮಹಿಳೆಯ ಉದ್ಧಾರಕ್ಕಾಗಿ ಜೀವನವನ್ನೇ ಮುಡುಪಿಟ್ಟು 1889ರಲ್ಲಿ ‘ಮುಕ್ತಿ ಮಿಷನ್‌’ ಸಂಸ್ಥೆಯನ್ನು ಹುಟ್ಟು ಹಾಕಿದರು. ಈ ಸಂಸ್ಥೆಯು ವಿಧವೆಯರು, ಅನಾಥರು ಹಾಗೂ ಕುಡಕರಿಗೆ ಜೀವನೋಪಾಯ ಕಲ್ಪಿಸುತ್ತಾ ಇಂದಿಗೂ ಕಾರ್ಯಶೀಲವಾಗಿದೆ.

ಹೀಗೆ ಮಹಿಳಾ ಸಮಾಜ ಸುಧಾರಕಿಯರ ವಿವರಗಳನ್ನು ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿ ನೀಡಿತ್ತು. ಆದರೆ ಈಗಿನ ಸಮಿತಿಗೆ ಈ ಭಾಗ ಬೇಡವೆನಿಸಿದೆ. ಸಮಾಜ ಸುಧಾರಕರ ವಿಸ್ತೃತ ಪಠ್ಯವನ್ನು ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದೆ. ಆದರೆ ನಾರಾಯಣಗುರುಗಳ ಪಾಠವನ್ನು ಕಟ್ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...