Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...