Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...