Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....