Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...