Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...