Homeಚಳವಳಿಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

ಮತ್ತಷ್ಟು ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವ ಚಕ್ರತೀರ್ಥ ಸಮಿತಿ: ಪಠ್ಯಕ್ಕೆ ಅನುಮತಿ ನಿರಾಕರಣೆ ಬಳಿಕ ಬಹಿರಂಗ

- Advertisement -
- Advertisement -

ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಅವಾಂತರಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ. ಶಾಲೆ ಶುರುವಾಗಿ 20 ದಿನಗಳಾಗುತ್ತಾ ಬಂದರೂ ಪಠ್ಯ ಪುಸ್ತಕಗಳು ಮಕ್ಕಳ ಕೈ ಸೇರಿಲ್ಲ. ಇನ್ನು ಸರ್ಕಾರದ ವೆಬ್‌ಸೈಟ್‌ನಲ್ಲಿನ ಪಿಡಿಎಫ್‌ಗಳು ಪದೇ ಪದೇ ಬದಲಾಗುತ್ತಾ ಗೊಂದಲ ಮೂಡಿಸಿವೆ. ಇಂತಹ ಸಂದರ್ಭದಲ್ಲಿ ನೂತನ ಪಠ್ಯದಲ್ಲಿ  ಡಾ.ಎಚ್.ಎಸ್ ಅನುಪಮಾ, ಬೊಳುವಾರು ಮಹಮದ್ ಕುಂಞಿ ಸೇರಿದಂತೆ ಇತರ ಜನಪರ ಸಾಹಿತಿಗಳ ಪಠ್ಯ ಕೈಬಿಟ್ಟಿರುವುದು ಬೆಳಕಿಗೆ ಬಂದಿದೆ.

ಯಾವುದೇ ಅರ್ಹತೆಯಿಲ್ಲದ ರೋಹಿತ್‌ ಚಕ್ರತೀರ್ಥರನ್ನು ಪಠ್ಯ ಪರಿಷ್ಕರಣ ಸಮಿತಿಗೆ ಅಧ್ಯಕ್ಷರಾಗಿ ಮಾಡಿರುವುದು, ಸಮಿತಿಯಲ್ಲಿ ಬ್ರಾಹ್ಮಣರೇ ತುಂಬಿರುವುದು, ಭಗತ್ ಸಿಂಗ್, ಕುವೆಂಪು, ನಾರಾಯಣ ಗುರು ಸೇರಿದಂತೆ ಇತರ ಮಹಾನ್ ವ್ಯಕ್ತಿಗಳ ಪಠ್ಯ ಕೈಬಿಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಬ್ರಾಹ್ಮಣೀಕರಣ ಮಾಡಲಾಗುತ್ತಿದೆ, ಬಸವಣ್ಣ, ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿ ದೇವನೂರ ಮಹಾದೇವರ ಆದಿಯಾಗಿ 10ಕ್ಕೂ ಹೆಚ್ಚು ಲೇಖಕರು ತಮ್ಮ ಪಠ್ಯ ಬಳಸಿಕೊಳ್ಳಲು ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪತ್ರ ಬರೆದಿದ್ದರು. ಇದು ಸರ್ಕಾರದ ಮೇಲೆ ತೀವ್ರ ಒತ್ತಡ ಉಂಟುಮಾಡಿತ್ತು.

ಈ ಹಿಂದಿನ ಪಠ್ಯದಲ್ಲಿ ಲೇಖಕಿ, ಕವಯತ್ರಿ ಎಚ್.ಎಸ್ ಅನುಪಮಾರವರ 7ನೇ ತರಗತಿಯ ಕನ್ನಡ ಭಾಷಾ (ಪ್ರಥಮ) ಪಠ್ಯ ಪಸ್ತಕದಲ್ಲಿ ನನ್ನ ‘ಸಾವಿತ್ರಿಬಾಯಿ ಫುಲೆ’ (ಗದ್ಯ) ಬರಹ ಮತ್ತು 7ನೇ ತರಗತಿಯ ಕನ್ನಡ ಭಾಷಾ (ತೃತೀಯ) ಪಠ್ಯಪುಸ್ತಕದಲ್ಲಿ ‘ನೆನೆವುದೆನ್ನ ಮನ’ ಪಠ್ಯ ಇತ್ತು. ಆ ಎರಡು ಪಠ್ಯಗಳನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಕಿತ್ತು ಹಾಕಿದೆ. ಅದೇ ರೀತಿ 5ನೆಯ ತರಗತಿಯ ಕನ್ನಡ ಭಾಷಾ ಪಠ್ಯ ಪುಸ್ತಕದಿಂದ ಬೊಳುವಾರು ಮಹಮದ್ ಕುಂಞಿಯವರು ಸುಳ್ಳು ಹೇಳಬಾರದು ಎಂಬ ಪಾಠವನ್ನು ಸಹ ತೆಗೆಯಲಾಗಿದೆ. ಇದೇ ರೀತಿಯಾಗಿ ಪಠ್ಯ ವಾಪಸ್ ಪಡೆಯುವುದಾಗಿ ಪತ್ರ ಬರೆದಿದ್ದ ಪ್ರೊ.ಚಂದ್ರಶೇಖರ್ ತಾಳ್ಯ, ದು. ಸರಸ್ವತಿ ಸೇರಿದಂತೆ ಇನ್ನು ಹಲವರ ಪಠ್ಯವನ್ನು ಸದ್ದಿಲ್ಲದೆ ಕೈಬಿಡಲಾಗಿದೆ.

ಲೇಖಕರ ಪಠ್ಯ ಕೈಬಿಡುತ್ತಿದ್ದೇವೆ ಎಂದು ಚಕ್ರತೀರ್ಥ ನೇತೃತ್ವದ ಸಮಿತಿ ತಿಳಿಸಿಲ್ಲ. ಪಠ್ಯ ಪುಸ್ತಕಗಳನ್ನು ಮುದ್ರಿಸಿ ಹಂಚಿಲ್ಲ. ಸಮರ್ಪಕವಾಗಿ ಪಿಡಿಎಫ್‌ ಸಹ ಬಿಟ್ಟಿಲ್ಲ. ಇಷ್ಟೆಲ್ಲ ಗೊಂದಲಗಳ ನಡುವೆ ತಮ್ಮ ಮೂಲ ಪಠ್ಯ ಪ್ರಕಟಣೆಗೆ ಹಿಂದಿನ ಸಮಿತಿಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಪತ್ರ ಬರೆದ ಸಾಹಿತಿಗಳಿಗೆ ಪಠ್ಯದಲ್ಲಿ ನಿಮ್ಮ ಪಾಠ ಇಲ್ಲವೇ ಇಲ್ಲ ಎಂದು ದೂಷಿಸಲಾಗುತ್ತಿದೆ.

ಒಟ್ಟಿನಲ್ಲಿ ಪರಿಷ್ಕೃತಗೊಂಡಿರುವ ನೂತನ ಪಠ್ಯಗಳನ್ನು ಜಾರಿ ಮಾಡಿಯೇ ಸಿದ್ದ ಎಂದು ಸರ್ಕಾರ ಹೊರಟಿದೆ. ಮತ್ತೊಂದು ಕಡೆ ಲಿಂಗಾಯತ ಮತ್ತು ಒಕ್ಕಲಿಗ ಮಠಾಧೀಶರು, ಜನಪರ ಹೋರಾಟಗಾರರು, ವಿದ್ಯಾರ್ಥಿ ಮತ್ತು ಪೋಷಕ ಸಂಘಟನೆಗಳು ನೂತನ ಪರಿಷ್ಕರಣೆ ಕೈಬಿಟ್ಟು ಹಳೆಯ ಪಠ್ಯವನ್ನೆ ಬೋಧಿಸುವಂತೆ ಒತ್ತಡ ಹೇರುತ್ತಿವೆ. ಸಾಕಷ್ಟು ಗೊಂದಲ, ಗದ್ದಲಗಳಿಗೆ ಕಾರಣವಾಗಿರುವ ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಜನಸಾಮಾನ್ಯರನ್ನು ಕೆರಳಿಸಿದ ಪಠ್ಯಪುಸ್ತಕ ಪರಿಷ್ಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...