Homeಕರ್ನಾಟಕಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

ಚಕ್ರತೀರ್ಥ ಹೇಳಿದ್ದು ಸುಳ್ಳು: 10ನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿಲ್ಲ ನಾರಾಯಣಗುರು, ಪೆರಿಯಾರ್‌ ಪಾಠ!

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿ ನೀಡಲಾಗಿದ್ದ ಸಮಾಜ ಸುಧಾರಕ ನಾರಾಯಣಗುರು ಹಾಗೂ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಅವರ ಕುರಿತ ಪಾಠವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರು, “ನಾರಾಯಣಗುರು ಪಾಠವನ್ನು ಕೈಬಿಟ್ಟಿಲ್ಲ. ಏಳು ಮತ್ತು ಎಂಟನೇ ತರಗತಿ ಎರಡೂ ಕಡೆಯೂ ಉಳಿಸಿಕೊಳ್ಳಲಾಗಿದೆ” ಎಂದು ಹೇಳುತ್ತಾ ಬಂದಿದ್ದರು. ಆದರೆ ಹತ್ತನೇ ತರಗತಿ ಸಮಾಜ ವಿಜ್ಞಾನದಲ್ಲಿ ನಾರಾಯಣ ಗುರುಗಳ ಪಾಠ ಇಲ್ಲ ಎಂಬುದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವೆಬ್‌ಸೈಟ್‌ನಲ್ಲಿರುವ ಪಿಡಿಎಫ್‌ಗಳಿಂದ ಸ್ಪಷ್ಟವಾಗುತ್ತದೆ.

7ನೇ ತರಗತಿಯಲ್ಲಿ ಅಳವಡಿಸಲಾಗಿರುವ ‘ಸಮಾಜ ಸುಧಾರಕರ ಕುರಿತ ಪಾಠ’ವನ್ನು 10ನೇ ತರಗತಿಯಲ್ಲಿ ವಿಸ್ತರಿಸಲಾಗಿದೆ. 7ನೇ ತರಗತಿಯಲ್ಲಿ ಇದ್ದ ಅನೇಕ ಮಹನೀಯರ ವಿವರಗಳನ್ನು ಹತ್ತನೇ ತರಗತಿಯಲ್ಲಿ ಮುಂದುವರಿಸಲಾಗಿದ್ದರೂ ಮಹಾನ್‌ ಮಾನವತಾವಾದಿ ನಾರಾಯಣಗುರುಗಳ ವಿವರಗಳನ್ನು ಸಮಿತಿ ಕೈಬಿಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2ರಲ್ಲಿ ಮೊದಲ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆಗಳು’ ಪಾಠವನ್ನು ಇಡಲಾಗಿದೆ. ಭಾರತದ ಸಮಾಜ ಸುಧಾಕರ ಪರಿಚಯವನ್ನು ಈ ಪಾಠವು ಮಕ್ಕಳಿಗೆ ಪರಿಚಯ ಮಾಡಿಕೊಡುತ್ತದೆ. ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠದಲ್ಲಿ- ಬ್ರಹ್ಮ ಸಮಾಜದ ಸ್ಥಾಪಕ ರಾಜರಾಮ ಮೋಹನ್ ರಾಯ್‌, ಪ್ರಾರ್ಥನಾ ಸಮಾಜದ ಆತ್ಮಾರಾಮ್ ಪಾಂಡುರಂಗ, ಮಹಾದೇವ ಗೋವಿಂದ ರಾನಡೆ, ಸತ್ಯಶೋಧಕ ಸಮಾಜದ ಮಹಾತ್ಮ ಜ್ಯೋತಿಬಾ ಫುಲೆ, ಆರ್ಯ ಸಮಾಜದ ಸ್ವಾಮಿ ದಯಾನಂದ ಸರಸ್ವತಿ, ರಾಮಕೃಷ್ಣ ಮಿಷನ್‌ನ ಶ್ರೀ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರ ಪರಿಚಯ ಸೇರಿದಂತೆ ಥಿಯಸಾಫಿಕಲ್ ಸೊಸೈಟಿ, ಅಲಿಘರ್‌ ಚಳವಳಿ ಮತ್ತು ಸರ್‌ ಸಯ್ಯದ್ ಅಹ್ಮದ್ ಖಾನ್‌, ಶ್ರೀ ನಾರಾಯಣಗುರುಗಳ ಕುರಿತು ತಿಳಿಸಿಕೊಡಲಾಗಿದೆ.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಏಳನೇ ತರಗತಿಯ ಸಮಾಜ ವಿಜ್ಞಾನ ಭಾಗ 2ರ ಪುಸ್ತಕದ ಪಾಠ ನಾಲ್ಕು “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ”ಯಲ್ಲಿ ಸಮಾಜ ಸುಧಾರಕರನ್ನು ಪರಿಚಯಿಸಲಾಗಿತ್ತು. ಈಗ ಉಳಿಸಿಕೊಳ್ಳಲಾಗಿರುವ ಪಠ್ಯದ ಜೊತೆಗೆ ಮಹಿಳಾ ಸಮಾಜ ಸುಧಾರಕಿಯರ ಪರಿಚಯವನ್ನೂ ಮಕ್ಕಳಿಗೆ ಮಾಡಿಕೊಡಲಾಗಿತ್ತು. ಸಾವಿತ್ರಿಬಾಯಿ ಫುಲೆ, ತಾರಾಬಾಯಿ ಶಿಂಧೆ, ಪಂಡಿತ್ ರಮಾಬಾಯಿ ಅವರ ವಿವರಗಳಿದ್ದವು. ಮಹಿಳಾ ಸಮಾಜ ಸುಧಾರಕಿಯರ ವಿವರಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಪ್ರಯೋಗ ಮಾಡಿದೆ. ಏಳನೇ ತರಗತಿಯಲ್ಲಿ ಪೆರಿಯಾರ್‌ ರಾಮಸ್ವಾಮಿ ನಾಯ್ಕರ್‌ ಪಾಠ ಈ ಹಿಂದಿನ ಪಠ್ಯದಲ್ಲೂ ಇರಲಿಲ್ಲ. ಈಗಿನ ಪಠ್ಯದಲ್ಲೂ ಏಳನೇ ತರಗತಿಯಲ್ಲಿ ಇರಲಿಲ್ಲ. ಆದರೆ ಹತ್ತನೇ ತರಗತಿ ಪಠ್ಯದಲ್ಲಿ ‘ಪೆರಿಯಾರ್‌’ ಪಾಠವನ್ನು ಈ ಹಿಂದೆ ಸೇರಿಸಲಾಗಿತ್ತು.

ಹತ್ತನೇ ತರಗತಿಯಲ್ಲಿ ನಾರಾಯಣಗುರುಗಳ ಪಾಠಕ್ಕೆ ಕೋಕ್‌

ನೂತನ ಪಠ್ಯಪುಸ್ತಕಗಳ ಪರಿಶೀಲನಾ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ -1ರಲ್ಲಿ ಐದನೆಯ ಪಾಠವಾಗಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣ ಚಳುವಳಿಗಳು’ ಭಾಗವನ್ನು ಇರಿಸಿದೆ. ಏಳನೇ ತರಗತಿಯಲ್ಲಿದ್ದ ಪಠ್ಯವನ್ನು ಹತ್ತನೇ ತರಗತಿಯಲ್ಲಿ ವಿಸ್ತರಿಸಲಾಗಿದೆ ಎನ್ನುವ ಚಕ್ರತೀರ್ಥ ಅವರು, ಏಳನೇ ತರಗತಿಯಲ್ಲಿ ನೀಡಲಾಗಿದ್ದ ಅನೇಕ ಸಮಾಜ ಸುಧಾರಕರ ವಿವರಗಳನ್ನು ಉಳಿಸಿಕೊಂಡು ನಾರಾಯಣಗುರುಗಳ ಪಾಠವನ್ನು ತೆಗೆದುಹಾಕಿದೆ.

ಬ್ರಹ್ಮ ಸಮಾಜ, ಆರ್ಯ ಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಚಳವಳಿ, ರಾಮಕೃಷ್ಣ ಮಿಷನ್‌, ಥಿಯಾಸಾಫಿಕಲ್ ಸೊಸೈಟಿ (ಬ್ರಹ್ಮವಿದ್ಯಾ ಸಮಾಜ)- ಇಷ್ಟನ್ನು ಪರಿಚಯ ಮಾಡಿಕೊಡಲಾಗಿದೆ. ನಾರಾಯಣಗುರುಗಳ ವಿವರ ಇಲ್ಲವಾಗಿದೆ. (ಪಿಡಿಎಫ್‌ ಪ್ರತಿ ನೋಡಿರಿ)

ಇದನ್ನೂ ಓದಿರಿ: Live Updates| ಪಠ್ಯಪುಸ್ತಕ ತಿರುಚೀಕರಣ ವಿವಾದ: ಬಸವಣ್ಣನವರ ಪಾಠ ವೈದೀಕರಣ; ಲಿಂಗಾಯತ ಮಠಾಧೀಶರ ಒಕ್ಕೂಟ ಆಕ್ರೋಶ

ಹಳೆಯ ಪಠ್ಯದಲ್ಲಿತ್ತೇ ನಾರಾಯಣಗುರುಗಳ ಪಾಠ?

ಬರಗೂರರ ಸರ್ವಾಧ್ಯಕ್ಷತೆಯಲ್ಲಿ ರೂಪಿಸಲಾದ ಪಠ್ಯದಲ್ಲಿ ನಾರಾಯಣಗುರುಗಳ ಪಾಠವನ್ನು ವಿಸ್ತರಿಸುವುದನ್ನು ಕಾಣಬಹುದಿತ್ತು. ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿನ ಭಾಗ -1ರಲ್ಲಿ ‘ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳವಳಿಗಳು’ ಇದ್ದು, ಬ್ರಹ್ಮಸಮಾಜ, ಆರ್ಯಸಮಾಜ, ಪ್ರಾರ್ಥನಾ ಸಮಾಜ, ಸತ್ಯಶೋಧಕ ಸಮಾಜ, ಆಲಿಘರ್‌ ಸುಧಾರಣಾ ಚಳವಳಿ, ರಾಮಕೃಷ್ಣ ಮಿಷನ್‌, ಥಿಯೋಸಾಫಿಕಲ್ ಸೊಸೈಟಿ, ಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಯೋಗಂ ಜೊತೆಗೆ ಪೆರಿಯಾರ್ ಕುರಿತು ವಿವರಿಸಲಾಗಿತ್ತು. ಈಗ ಹೊಸ ಪಠ್ಯದಲ್ಲಿ ನಾರಾಯಣಗುರುಗಳೂ ಇಲ್ಲ, ಪೆರಿಯಾರ್‌ ಕೂಡ ಇಲ್ಲ.

ಪಠ್ಯ ಪುಸ್ತಕ ವಿವಾದದ ಆರಂಭದಲ್ಲಿ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ರೋಹಿತ್ ಚಕ್ರತೀರ್ಥ, “ಅರ್ಧ ಪಠ್ಯಪುಸ್ತಕವನ್ನು ತಿಳಿದುಕೊಂಡಿರುವವರು ಈ ಆರೋಪ ಮಾಡುತ್ತಿದ್ದಾರೆ. ಸುರಳಿಯಾಕಾರದ ಕಲಿಕೆ ಪ್ರಕಾರ ವಿಷಯವೊಂದರ ಕುರಿತು ಒಂದು ತರಗತಿಯಲ್ಲಿ ಕಲಿತರೆ, ಮುಂದುವರಿದಿದ್ದನ್ನು ಮುಂದಿನ ತರಗತಿಯಲ್ಲಿ ಕಲಿಯುತ್ತಾರೆ. ಏಳನೇ ತರಗತಿಯಲ್ಲಿ ಎಲ್ಲ ಸುಧಾರಕರ ಕುರಿತು ತಿಳಿಸಲಾಗಿದೆ. ಅಲ್ಲಿ ನಾರಾಯಣಗುರುಗಳು ಹಾಗೂ ಪೆರಿಯಾರ್‌ ಅವರ ವಿಷಯ ಬಂದಿದೆ. ಹತ್ತನೇ ತರಗತಿಯಲ್ಲಿ ಇದರ ವಿಸ್ತೃತ ರೂಪವಾಗಿ ಸಾಮಾಜಿಕ ಧಾರ್ಮಿಕ ಸಂಸ್ಥೆಗಳ ಪಾಠವನ್ನು ನೀಡಲಾಗಿದೆ” ಎಂದಿದ್ದರು. (ಸಂದರ್ಶನ ‘ಇಲ್ಲಿ’ ಓದಬಹುದು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...